ಬ್ರೇಕಿಂಗ್ ನ್ಯೂಸ್
09-05-21 12:39 pm Udupi Correspondent ಕರಾವಳಿ
ಉಡುಪಿ, ಮೇ 9: ಮನೆಯಿಂದ ನೇರವಾಗಿ ಆಸ್ಪತ್ರೆಗೆ ಬಂದು ದಾಖಲಾಗುವ ಮಂದಿಗೆ ಜಿಲ್ಲಾಡಳಿತದಿಂದ ವೆಂಟಿಲೇಟರ್ ನೀಡಲು ಸಾಧ್ಯವಾಗುವುದಿಲ್ಲ. ತಮ್ಮ ಜೀವದ ಜೊತೆ ಅವರೇ ಆಟ ಆಡುತ್ತಿದ್ದಾರೆ. ಆ ರೀತಿ ಬಂದರೆ ನಮ್ಮಲ್ಲಿ ಎಷ್ಟು ಬೆಡ್ ಇದ್ದರೂ ಸಾಲುವುದಿಲ್ಲ. ಸಾರ್ವಜನಿಕರ ನಿರ್ಲಕ್ಷಕ್ಕೆ ನಾವು ಹೊಣೆಗಾರರಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಉಡುಪಿ ಜಿಪಂ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶೇ.90ರಷ್ಟು ಮಂದಿಗೆ ಆಸ್ಪತ್ರೆ ಅಗತ್ಯ ಇರುವುದಿಲ್ಲ. 10 ಶೇ. ಮಂದಿಗೆ ಮಾತ್ರ ಬೆಡ್ ಅಗತ್ಯವಿದ್ದು ಜಿಲ್ಲಾಡಳಿತ ಬೆಡ್ ಕೊಡಲು ಸಿದ್ಧ ಇದೆ. ಅದರಲ್ಲಿ ಶೇ. ಒಂದರಷ್ಟು ಮಂದಿಗೆ ಐಸಿಯು ಮತ್ತು ಶೇ.2ರಷ್ಟು ಮಂದಿಗೆ ಮಾತ್ರ ಆಕ್ಸಿಜನ್ ಅಗತ್ಯ ಇರುತ್ತದೆ ಎಂದರು.

ಜಿಲ್ಲೆಯಲ್ಲಿ 1300ಕ್ಕಿಂತ ಹೆಚ್ಚು ಆಕ್ಸಿಜನ್ ಬೆಡ್ಗಳು ಈಗ ಲಭ್ಯ ಇವೆ. ಅದರಲ್ಲಿ 350 ಬೆಡ್ಗಳು ಭರ್ತಿ ಆಗಿವೆ. ಸಾರ್ವಜನಿಕರು ಆಸ್ಪತ್ರೆಗೆ ಬಾರದೆ ಹೋಮ್ ಐಸೋಲೇಷನ್ನಲ್ಲೇ ಚಿಕಿತ್ಸೆ ಪಡೆದು ಗುಣಮುಖ ಆಗಲು ಸಾಧ್ಯ ಇದೆ. ಆದರೆ ಹೆದರಿ ಆಸ್ಪತ್ರೆಗೆ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಸದ್ಯ ಜಿಲ್ಲೆಯಲ್ಲಿ ಬೆಡ್ಗಳಿಗೆ ಯಾವುದೇ ಕೊರತೆ ಇಲ್ಲ. ಜನ ಬೆಡ್ ಇಲ್ಲ ಎಂದು ಹೆದರುವ ಅಗತ್ಯ ಇಲ್ಲ ಎಂದು ಅವರು ತಿಳಿಸಿದರು.
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಆರು ಮೆಟ್ರಿಕ್ ಟನ್ ಸಾಮರ್ಥ್ಯದ ಆಕ್ಸಿಜನ್ ಟ್ಯಾಂಕ್ ಇದ್ದು, ಅದರಲ್ಲಿ 4 ಮೆಟ್ರಿಕ್ ಟನ್ ಆಕ್ಸಿಜನ್ ರೆಡಿಯಿದೆ. ಬೆಳಪುವಿನ ಘಟಕದಲ್ಲಿ ಪ್ರಸ್ತುತ 7 ಮೆಟ್ರಿಕ್ ಟನ್ ಇದ್ದು, ನಾಳೆ 10 ಮೆಟಿಕ್ ಟನ್ ಆಕ್ಸಿಜನ್ ಬರಲಿದೆ. ಬಹರೈನ್ನಿಂದ ಬಂದ ಆರು ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ಈಗಾಗಲೇ ಬೆಳಪುವಿನಲ್ಲಿ ತುಂಬಿಸಿ ಇಡಲಾಗಿದೆ ಎಂದವರು ಮಾಹಿತಿ ನೀಡಿದರು.
ಹೋಮ್ ಐಸೋಲೇಷನ್ ಬಗ್ಗೆ ಹೆಚ್ಚಿನ ನಿಗಾ ವಹಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಗ್ರಾಪಂನವರು ಮನೆ ಮನೆಗೆ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸಲಿದ್ದಾರೆ. ಅಗತ್ಯ ಇರುವವರನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ಆರಂಭ:
ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೆಂಟರ್ಗಳನ್ನು ತೆರೆಯಲಾಗಿದ್ದು, ಮಣಿಪಾಲ ಎಂಐಟಿಯಲ್ಲಿ 300, ಕುಂದಾಪುರ ದೇವರಾಜ ವಸತಿ ನಿಲಯದಲ್ಲಿ 75, ಕಾರ್ಕಳ ಮಿಯ್ಯಾರಿನ ಮೊರಾರ್ಜಿ ದೇಸಾಯಿ ಹಾಸ್ಟೆಲ್ನಲ್ಲಿ 60 ಬೆಡ್ಗಳ ವ್ಯವಸ್ಥೆ ಮಾಡಲಾಗಿದೆ. ಮುಂದೆ ಇವು ಭರ್ತಿಯಾದರೆ ಬೆಡ್ ಸಂಖ್ಯೆ ಹೆಚ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಮನೆಗಳಲ್ಲಿ ಐಸೋಲೇಷನ್ಗೆ ಸರಿಯಾದ ವ್ಯವಸ್ಥೆ ಇಲ್ಲದವರು ಈ ಕೋವಿಡ್ ಸೆಂಟರ್ಗಳಲ್ಲಿ ಉಳಿದುಕೊಳ್ಳಬಹುದು. ಇಲ್ಲಿ ವೈದ್ಯರು ಕೂಡ ಇರುತ್ತಾರೆ. ಕಾಲ್ಸೆಂಟರ್ ಮೂಲಕ ಬಂದು ಇಲ್ಲಿ ದಾಖಲಾಗಬಹುದು. ಅದೇ ರೀತಿ ಕೋವಿಡ್ ಕಾಲ್ಸೆಂಟರ್ ಮೂಲಕ ಖಾಸಗಿ ಆಸ್ಪತ್ರೆಗೆ ದಾಖಲಾದರೆ ಆಯ್ಯುಷ್ಮಾನ್ ಭಾರತ್ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.
Symptomatic people are not getting themselves tested. People coming for ventilator facilities will not be entertained. We are not responsible for their negligence. If anyone has mild symptoms, the person should come to hospital. Do not come after the situation gets worse,” said district commissioner (DC) G Jagadeesha.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm