ಬ್ರೇಕಿಂಗ್ ನ್ಯೂಸ್
09-05-21 01:24 pm Mangaluru Correspondent ಕರಾವಳಿ
ಮಂಗಳೂರು, ಮೇ 9: ನಗರದ ಜಿಲ್ಲಾ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಚಿನ್ನದ ಕಿವಿಯೋಲೆ ನಾಪತ್ತೆಯಾಗಿರುವ ಬಗ್ಗೆ ದೂರು ಕೇಳಿಬಂದಿದೆ.
ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಬೊಳ್ಳೂರು ನಿವಾಸಿ ಡೀಕಯ್ಯ ಪೂಜಾರಿ ಎಂಬವರು ತಮ್ಮ ತಾಯಿಯ ಬಂಗಾರದ ಕಿವಿಯೋಲೆ ನಾಪತ್ತೆಯಾಗಿದೆ ಎಂದು ವೀಡಿಯೊ ಚಿತ್ರೀಕರಿಸಿ ಅಳಲು ತೋಡಿಕೊಂಡಿದ್ದಾರೆ.
ಮೇ 5ರಂದು ಮಧ್ಯರಾತ್ರಿ ತಾಯಿಯನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೇ 7ರಂದು ಮೃತಪಟ್ಟಿದ್ದಾರೆ. ಆಸ್ಪತ್ರೆಯವರು ಮೃತದೇಹ ಹಸ್ತಾಂತರ ಮಾಡುವ ವೇಳೆ ಕಿವಿಯೋಲೆ ನಾಪತ್ತೆಯಾಗಿದೆ ಎಂದು ಡೀಕಯ್ಯ ಪೂಜಾರಿ ದೂರಿದ್ದಾರೆ.
ಉಸಿರಾಟದ ತೊಂದರೆಯಿಂದ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆದರೆ, ಅವರ ಮೃತದೇಹವನ್ನು ಆಸ್ಪತ್ರೆಯಲ್ಲಿ ಹಸ್ತಾಂತರಿಸುವ ಸಂದರ್ಭ ತಾಯಿಯ ಕಿವಿಯೋಲೆ ನಾಪತ್ತೆಯಾಗಿದೆ. ಈ ಬಗ್ಗೆ ಅಲ್ಲಿ ವಿಚಾರಿಸಿದಾಗ ಮೃತದೇಹದ ಪೋಟೊ ತೆಗೆಯಬೇಕಿತ್ತು ಎಂದು ಆಸ್ಪತ್ರೆ ಸಿಬ್ಬಂದಿ ಉಡಾಫೆಯ ಮಾತುಗಳನ್ನಾಡಿದ್ದಾರೆ.
ಈ ಬಗ್ಗೆ ತಾನು ಆಸ್ಪತ್ರೆಯ ಡಿಎಂಒ ಡಾ.ಸದಾಶಿವ ಅವರಿಗೆ ಲಿಖಿತ ದೂರು ನೀಡಿದ್ದು, ಈವರೆಗೆ ಯಾವ ಉತ್ತರವೂ ನಮಗೆ ದೊರಕಿಲ್ಲ ಎಂದು ದೂರಿದ್ದಾರೆ. ಅಲ್ಲದೆ, ನಾವು ತಾಯಿಯನ್ನು ಆಸ್ಪತ್ರೆಗೆ ಕೊಂಡೊಯ್ದ ಸಂದರ್ಭದಲ್ಲೂ ಸಾಕಷ್ಟು ಹೊತ್ತು ನಮ್ಮನ್ನು ಹೊರಗೆ ಕಾಯುವಂತೆ ಮಾಡಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರೂ ಬೇಗ ದಾಖಲು ಮಾಡಿಲ್ಲ. ಇದು ನಮ್ಮ ಸಮಸ್ಯೆ ಮಾತ್ರವಲ್ಲ, ಇಲ್ಲಿ ಬರುವ ಎಲ್ಲರ ಸಮಸ್ಯೆ ಎಂದು ದೂರಿದ್ದಾರೆ.
A man filed a complaint to the office of district surgeon and medical superintendent of Wenlock hospital urging the authorities to return his mother's missing earrings as gold has been missing from her body. A case has been registered at the Pandeshwar Police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm