ಬ್ರೇಕಿಂಗ್ ನ್ಯೂಸ್
09-05-21 01:24 pm Mangaluru Correspondent ಕರಾವಳಿ
ಮಂಗಳೂರು, ಮೇ 9: ನಗರದ ಜಿಲ್ಲಾ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಚಿನ್ನದ ಕಿವಿಯೋಲೆ ನಾಪತ್ತೆಯಾಗಿರುವ ಬಗ್ಗೆ ದೂರು ಕೇಳಿಬಂದಿದೆ.
ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಬೊಳ್ಳೂರು ನಿವಾಸಿ ಡೀಕಯ್ಯ ಪೂಜಾರಿ ಎಂಬವರು ತಮ್ಮ ತಾಯಿಯ ಬಂಗಾರದ ಕಿವಿಯೋಲೆ ನಾಪತ್ತೆಯಾಗಿದೆ ಎಂದು ವೀಡಿಯೊ ಚಿತ್ರೀಕರಿಸಿ ಅಳಲು ತೋಡಿಕೊಂಡಿದ್ದಾರೆ.
ಮೇ 5ರಂದು ಮಧ್ಯರಾತ್ರಿ ತಾಯಿಯನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೇ 7ರಂದು ಮೃತಪಟ್ಟಿದ್ದಾರೆ. ಆಸ್ಪತ್ರೆಯವರು ಮೃತದೇಹ ಹಸ್ತಾಂತರ ಮಾಡುವ ವೇಳೆ ಕಿವಿಯೋಲೆ ನಾಪತ್ತೆಯಾಗಿದೆ ಎಂದು ಡೀಕಯ್ಯ ಪೂಜಾರಿ ದೂರಿದ್ದಾರೆ.
ಉಸಿರಾಟದ ತೊಂದರೆಯಿಂದ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆದರೆ, ಅವರ ಮೃತದೇಹವನ್ನು ಆಸ್ಪತ್ರೆಯಲ್ಲಿ ಹಸ್ತಾಂತರಿಸುವ ಸಂದರ್ಭ ತಾಯಿಯ ಕಿವಿಯೋಲೆ ನಾಪತ್ತೆಯಾಗಿದೆ. ಈ ಬಗ್ಗೆ ಅಲ್ಲಿ ವಿಚಾರಿಸಿದಾಗ ಮೃತದೇಹದ ಪೋಟೊ ತೆಗೆಯಬೇಕಿತ್ತು ಎಂದು ಆಸ್ಪತ್ರೆ ಸಿಬ್ಬಂದಿ ಉಡಾಫೆಯ ಮಾತುಗಳನ್ನಾಡಿದ್ದಾರೆ.
ಈ ಬಗ್ಗೆ ತಾನು ಆಸ್ಪತ್ರೆಯ ಡಿಎಂಒ ಡಾ.ಸದಾಶಿವ ಅವರಿಗೆ ಲಿಖಿತ ದೂರು ನೀಡಿದ್ದು, ಈವರೆಗೆ ಯಾವ ಉತ್ತರವೂ ನಮಗೆ ದೊರಕಿಲ್ಲ ಎಂದು ದೂರಿದ್ದಾರೆ. ಅಲ್ಲದೆ, ನಾವು ತಾಯಿಯನ್ನು ಆಸ್ಪತ್ರೆಗೆ ಕೊಂಡೊಯ್ದ ಸಂದರ್ಭದಲ್ಲೂ ಸಾಕಷ್ಟು ಹೊತ್ತು ನಮ್ಮನ್ನು ಹೊರಗೆ ಕಾಯುವಂತೆ ಮಾಡಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರೂ ಬೇಗ ದಾಖಲು ಮಾಡಿಲ್ಲ. ಇದು ನಮ್ಮ ಸಮಸ್ಯೆ ಮಾತ್ರವಲ್ಲ, ಇಲ್ಲಿ ಬರುವ ಎಲ್ಲರ ಸಮಸ್ಯೆ ಎಂದು ದೂರಿದ್ದಾರೆ.
A man filed a complaint to the office of district surgeon and medical superintendent of Wenlock hospital urging the authorities to return his mother's missing earrings as gold has been missing from her body. A case has been registered at the Pandeshwar Police station.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm