ಬ್ರೇಕಿಂಗ್ ನ್ಯೂಸ್
09-05-21 07:00 pm Mangaluru Correspondent ಕರಾವಳಿ
ಮಂಗಳೂರು, ಮೇ 9: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೈಕಂಪಾಡಿಯ ಮಲಬಾರ್, ಲಕ್ಷ್ಮಿ ಹಾಗೂ ಕಾರ್ನಾಡ್ ಆಕ್ಸಿಜನ್ ರೀಫಿಲ್ಲಿಂಗ್ ಘಟಕಗಳಲ್ಲಿ ಆಕ್ಸಿಜನ್ ಉತ್ಪಾದನೆ ಹಾಗೂ ಸಿಲಿಂಡರ್ ಗಳಿಗೆ ರೀಫಿಲ್ಲಿಂಗ್ ಮಾಡುವ ಪ್ರಕ್ರಿಯೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಭರತ್ ಶೆಟ್ಟಿ ,ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಆಧಿಕಾರಿ ಡಾ. ಕುಮಾರ್, ಸಹಾಯಕ ಔಷಧಿ ನಿಯಂತ್ರಕರುಗಳಾದ ರಮಾಕಾಂತ್ ಕುಂಟೆ, ಶಂಕರ್ ನಾಯ್ಕ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಆಕ್ಸಿಜನ್ ಫಿಲ್ಲಿಂಗ್ ಘಟಕಗಳಿಗೆ ಯಾವ ಜಿಲ್ಲೆಯ ಆಕ್ಸಿಜನ್ ಉತ್ಪಾದನಾ ಘಟಕಗಳಿಂದ ಎಷ್ಟು ಪ್ರಮಾಣದ ಆಕ್ಸಿಜನ್ ಬರುತ್ತದೆ ಹಾಗೂ ಸ್ಥಳೀಯವಾಗಿ ಆಕ್ಸಿಜನ್ ಉತ್ಪಾದಿಸುವ ಬಗ್ಗೆ ಅವುಗಳನ್ನು ರೀಫಿಲ್ಲಿಂಗ್ ಮಾಡಿ ಯಾವ ಯಾವ ತಾಲೂಕಿನ ಆಸ್ಪತ್ರೆಗಳಿಗೆ ಕಳಿಸುತ್ತಿರುವುದಾಗಿ ಮಾಹಿತಿ ಪಡೆದರು.
ಜಿಲ್ಲೆಯಲ್ಲಿನ ಮೂರು ಆಕ್ಸಿಜನ್ ಉತ್ಪಾದನೆ ಹಾಗೂ ರೀಫಿಲ್ಲಿಂಗ್ ಘಟಕಗಳಲ್ಲಿನ ಆಕ್ಸಿಜನ್ ಅನ್ನು ಆಸ್ಪತ್ರೆಗಳಲ್ಲಿನ ರೋಗಿಗಳ ಚಿಕಿತ್ಸೆಗೆ ಬೇಡಿಕೆಗನುಗುಣವಾಗಿ ಪೂರೈಕೆ ಆಗಬೇಕೆಂದು ಸೂಚಿಸಿದರು.
ಜಿಲ್ಲೆಯಲ್ಲಿ ಆಮ್ಲಜನಕದ ಕೊರತೆ ಯಾವುದೇ ಆಸ್ಪತ್ರೆಯಲ್ಲಿ ಆಗದಂತೆ ಮತ್ತು ಅವುಗಳ ಸಾಗಾಣಿಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಅಗತ್ಯಕ್ಕನುಸಾರವಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ತಿಳಿಸಿದರು.
ಕೈಗಾರಿಕೆಗೆ ಬಳಸಲು ನೀಡುವ ಪ್ರಮಾಣ ಕಡಿತಗೊಳಿಸಿ ವೈದ್ಯಕೀಯ ಕ್ಷೇತ್ರಕ್ಕೆ ಆದ್ಯತೆಯ ಮೇಲೆ ಆಕ್ಸಿಜನ್ ಒದಗಿಸಬೇಕು ಎಂದು ಸೂಚಿಸಿದರಲ್ಲದೆ ಸ್ಥಳೀಯವಾಗಿ ಉತ್ಪಾದಿಸುತ್ತಿರುವ ಪ್ರಮಾಣವನ್ನು ಹೆಚ್ಚಿಸಲು ಮುಂದಾಗುವಂತೆ ಆಕ್ಸಿಜನ್ ತಯಾರಕ ಘಟಕಗಳಿಗೆ ಸೂಚನೆ ನೀಡಿದರು.
ಕರೋನಾ ತೀವ್ರಗೊಂಡ ರೋಗಿಗಳಿಗೆ ಮಾತ್ರ ಆಕ್ಸಿಜನ್ ಪೂರೈಸಲಾಗುತ್ತದೆ. ಯಾರಿಗೆ ನೀಡಬೇಕು, ಯಾರಿಗೆ ಅವಶ್ಯಕತೆ ಇದೆ ಎನ್ನುವುದು ಜಿಲ್ಲಾಡಳಿತ ತೀರ್ಮಾನಿಸುತ್ತದೆ. ತೀವ್ರ ಸಂಕಷ್ಟದಲ್ಲಿರುವ ರೋಗಿಗಳಿಗೆ ಆಕ್ಸಿಜನ್ ಹಾಗೂ ವೆಂಟಿಲೇಟರ್ ಹಾಸಿಗೆ ನೀಡಲಾಗುವುದು ಎಂದರು.
ಡ್ಯೂರೋ ಸಿಲಿಂಡರ್ ಗಳಲ್ಲಿ ಹೆಚ್ಚಿನ ಆಕ್ಸಿಜನ್ ಶೇಖರಣೆ ಮಾಡಬಹುದಾಗಿದ್ದು ಅವುಗಳನ್ನು ತಾಲೂಕು ಆಸ್ಪತ್ರೆಗಳ ವೆಂಟಿಲೇಟರ್ ಗಳ ಬಳಕೆಗೆ ನೀಡಬಹುದಾಗಿದೆ. ಅವುಗಳು ಎರಡು ದಿನ ಬಳಕೆಗೆ ಬರುತ್ತವೆ. ಅವುಗಳನ್ನು ವಿದೇಶದಿಂದ ತರಿಸಲು ಯೋಜನೆ ರೂಪಿಸಲಾಗಿದೆ. ಆಕ್ಸಿಜನ್ ಘಟಕಗಳ ಮೇಲುಸ್ತುವಾರಿಗೆ ಅಧಿಕಾರಿಗಳನ್ನು ದಿನದ 24 ಗಂಟೆಗೆ ಪಾಳಿಯ ಮೇಲೆ ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಸಚಿವರಿಗೆ ತಿಳಿಸಿದರು.
Minister Kota Srinivas Poojary, Mla Bharath Shetty and DC Dr Rajendra Kumar visited three oxygen refilling plant units loacted in Mangalore.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm