ಬ್ರೇಕಿಂಗ್ ನ್ಯೂಸ್
09-05-21 09:37 pm Mangaluru Correspondent ಕರಾವಳಿ
ಮಂಗಳೂರು, ಮೇ 9: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಕುಟುಂಬಸ್ಥರು ಅಲ್ಲಿನ ವೈದ್ಯರ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಟ್ಲ ಸಮೀಪದ ಸಾಲೆತ್ತೂರು ನಿವಾಸಿ ಭಾರತಿ ರೈ(52) ಮೃತ ಮಹಿಳೆ. ಮೇ 5ರಂದು ಅವರನ್ನು ಪುತ್ತೂರಿನಲ್ಲಿ ತಪಾಸಣೆಗೆ ಒಳಪಡಿಸಿದ್ದು, ಕೊರೊನಾ ಪಾಸಿಟಿವ್ ಆಗಿದ್ದರು. ಪಲ್ಸ್ ರೇಟ್ ಕಡಿಮೆ ಇದ್ದುದರಿಂದ ಮಂಗಳೂರಿಗೆ ಕರೆತಂದು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಮಹಿಳೆಗೆ ಆಕ್ಸಿಜನ್ ಕೊಟ್ಟಿದ್ದರಿಂದ ಸ್ವಲ್ಪ ಗುಣಮುಖರಾಗಿದ್ದರು. ಊಟ, ತಿಂಡಿಯನ್ನೂ ಮಾಡುತ್ತಿದ್ದರು. ವೆನ್ಲಾಕ್ ಆಸ್ಪತ್ರೆಗೆ ದಾಖಲಾದ ಬಳಿಕವೂ ಫೋನಲ್ಲಿ ಮಾತನಾಡುತ್ತಿದ್ದರು. ಇಂದು ಮಧ್ಯಾಹ್ನವೂ ಫೋನಲ್ಲಿ ಮಾತನಾಡಿದ್ದಾರೆ. ಆದರೆ, ಇಂದು ವೆಂಟಿಲೇಟರ್ ಗೆ ಹಾಕಿದ್ದರಂತೆ. ಸಂಜೆ ವೇಳೆಗೆ ಮೃತಪಟ್ಟಿರುವ ಬಗ್ಗೆ ವೈದ್ಯರು ಹೇಳುತ್ತಿದ್ದಾರೆ. ಕೇಳಿದ್ದಕ್ಕೆ ವೆಂಟಿಲೇಟರ್ ಸರಿಯಿಲ್ಲ ಎನ್ನುತ್ತಿದ್ದಾರೆ. ನಾವು ಡ್ಯೂಟಿ ಡಾಕ್ಟರ್ ಇಬ್ಬರೇ ಇರುವುದು. ಎಲ್ಲವನ್ನೂ ಸಂಭಾಳಿಸಬೇಕು ಎನ್ನುತ್ತಿದ್ದಾರೆ ಎಂಬುದಾಗಿ ಮೃತರ ಸಂಬಂಧಿಕರು ದೂರಿದ್ದಾರೆ.
ಸಂಬಂಧಿಕರು ಅಲ್ಲಿನ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ತರಾಟೆಗೆತ್ತಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಅಲ್ಲದೆ, ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಕೂಡ ಆಸ್ಪತ್ರೆಗೆ ಬಂದಿದ್ದು, ವೈದ್ಯರ ಜೊತೆ ಮಾತುಕತೆ ನಡೆಸಿದ್ದಾರೆ. ವೆಂಟಿಲೇಟರ್ ಸಮಸ್ಯೆಯಿಂದಾಗಿ ಮಹಿಳೆಯ ಸಾವು ಆಗಿದೆಯೇ ಎನ್ನುವ ಬಗ್ಗೆ ಪೊಲೀಸರು ಮತ್ತು ಜಿಲ್ಲಾಡಳಿತ ತನಿಖೆ ನಡೆಸಬೇಕಿದೆ.
A fight erupted at the Wenlock government hospital after a Women died of covid 19 at the hospital. The family and relatives of the deceased have alleged that the negligence of the doctors is the reason for her death. The deceased has been identified as Bharathi Rai (52).
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm