ಬ್ರೇಕಿಂಗ್ ನ್ಯೂಸ್
09-05-21 09:37 pm Mangaluru Correspondent ಕರಾವಳಿ
ಮಂಗಳೂರು, ಮೇ 9: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಕುಟುಂಬಸ್ಥರು ಅಲ್ಲಿನ ವೈದ್ಯರ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಟ್ಲ ಸಮೀಪದ ಸಾಲೆತ್ತೂರು ನಿವಾಸಿ ಭಾರತಿ ರೈ(52) ಮೃತ ಮಹಿಳೆ. ಮೇ 5ರಂದು ಅವರನ್ನು ಪುತ್ತೂರಿನಲ್ಲಿ ತಪಾಸಣೆಗೆ ಒಳಪಡಿಸಿದ್ದು, ಕೊರೊನಾ ಪಾಸಿಟಿವ್ ಆಗಿದ್ದರು. ಪಲ್ಸ್ ರೇಟ್ ಕಡಿಮೆ ಇದ್ದುದರಿಂದ ಮಂಗಳೂರಿಗೆ ಕರೆತಂದು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.



ಮಹಿಳೆಗೆ ಆಕ್ಸಿಜನ್ ಕೊಟ್ಟಿದ್ದರಿಂದ ಸ್ವಲ್ಪ ಗುಣಮುಖರಾಗಿದ್ದರು. ಊಟ, ತಿಂಡಿಯನ್ನೂ ಮಾಡುತ್ತಿದ್ದರು. ವೆನ್ಲಾಕ್ ಆಸ್ಪತ್ರೆಗೆ ದಾಖಲಾದ ಬಳಿಕವೂ ಫೋನಲ್ಲಿ ಮಾತನಾಡುತ್ತಿದ್ದರು. ಇಂದು ಮಧ್ಯಾಹ್ನವೂ ಫೋನಲ್ಲಿ ಮಾತನಾಡಿದ್ದಾರೆ. ಆದರೆ, ಇಂದು ವೆಂಟಿಲೇಟರ್ ಗೆ ಹಾಕಿದ್ದರಂತೆ. ಸಂಜೆ ವೇಳೆಗೆ ಮೃತಪಟ್ಟಿರುವ ಬಗ್ಗೆ ವೈದ್ಯರು ಹೇಳುತ್ತಿದ್ದಾರೆ. ಕೇಳಿದ್ದಕ್ಕೆ ವೆಂಟಿಲೇಟರ್ ಸರಿಯಿಲ್ಲ ಎನ್ನುತ್ತಿದ್ದಾರೆ. ನಾವು ಡ್ಯೂಟಿ ಡಾಕ್ಟರ್ ಇಬ್ಬರೇ ಇರುವುದು. ಎಲ್ಲವನ್ನೂ ಸಂಭಾಳಿಸಬೇಕು ಎನ್ನುತ್ತಿದ್ದಾರೆ ಎಂಬುದಾಗಿ ಮೃತರ ಸಂಬಂಧಿಕರು ದೂರಿದ್ದಾರೆ.
ಸಂಬಂಧಿಕರು ಅಲ್ಲಿನ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ತರಾಟೆಗೆತ್ತಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಅಲ್ಲದೆ, ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಕೂಡ ಆಸ್ಪತ್ರೆಗೆ ಬಂದಿದ್ದು, ವೈದ್ಯರ ಜೊತೆ ಮಾತುಕತೆ ನಡೆಸಿದ್ದಾರೆ. ವೆಂಟಿಲೇಟರ್ ಸಮಸ್ಯೆಯಿಂದಾಗಿ ಮಹಿಳೆಯ ಸಾವು ಆಗಿದೆಯೇ ಎನ್ನುವ ಬಗ್ಗೆ ಪೊಲೀಸರು ಮತ್ತು ಜಿಲ್ಲಾಡಳಿತ ತನಿಖೆ ನಡೆಸಬೇಕಿದೆ.
A fight erupted at the Wenlock government hospital after a Women died of covid 19 at the hospital. The family and relatives of the deceased have alleged that the negligence of the doctors is the reason for her death. The deceased has been identified as Bharathi Rai (52).
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm