ಬ್ರೇಕಿಂಗ್ ನ್ಯೂಸ್
10-05-21 12:51 pm Udupi Correspondent ಕರಾವಳಿ
Photo credits : newsnext
ಉಡುಪಿ, ಮೇ 10 : ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ನಿಧನದಿಂದ ತೆರವಾಗಿರುವ ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಉತ್ತರಾಧಿಕಾರಿ ಆಗಿರುವ ಉಡುಪಿಯ ಅನಿರುದ್ಧ ಸರಳತ್ತಾಯ (16) ಸನ್ಯಾಸ ಸ್ವೀಕಾರ ಹಾಗೂ ಶಿರೂರು ಮಠದ ಯತಿಯಾಗಿ ಪಟ್ಟಾಭಿಷೇಕ ಕಾರ್ಯಕ್ರಮ ಮೇ 11ರಿಂದ 14ರ ವರೆಗೆ ಹಿರಿಯಡ್ಕ ಸಮೀಪದ ಶಿರೂರು ಮೂಲಮಠದಲ್ಲಿ ನಡೆಯಲಿದೆ.
ಶಿರೂರು ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸುವ ಜವಾಬ್ದಾರಿಯನ್ನು ಹೊಂದಿರುವ ಶಿರೂರು ಮಠದ ದ್ವಂದ್ವ ಮಠವಾದ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಈ ನಿರ್ಧಾರವನ್ನು ತೆಗೆದು ಕೊಂಡಿದ್ದಾರೆ ಎಂದು ಶಿರೂರು ಮಠದ ವ್ಯವಸ್ಥಾಪಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಈ ಮೊದಲು ಅನಿರುದ್ಧ ಸರಳತ್ತಾಯರ ಸನ್ಯಾಸ ಸ್ವೀಕಾರ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮವನ್ನು ಮೇ 11ರಿಂದ 14ರ ವರೆಗೆ ಶಿರಸಿಯ ಸೋಮದಾ ಕ್ಷೇತ್ರದಲ್ಲಿ ಆಯೋಜಿಸಲು ಸೋದೆ ಶ್ರೀಗಳು ನಿರ್ಧರಿಸಿದ್ದರು. ಆದರೆ ಸರಕಾರದ ಕಠಿಣ ಮಾರ್ಗಸೂಚಿ ಹಿನ್ನೆಲೆಯಲ್ಲಿ ಇದೀಗ ಕಾರ್ಯಕ್ರಮವನ್ನು ಶಿರೂರು ಮಲ ಮಠದಲ್ಲೇ ನಡೆಸಲು ತೀರ್ಮಾನಿಸಲಾಗಿದೆ.

ಸನ್ಯಾಸಾಶ್ರಮ ಸ್ವೀಕರಿಸುವ ವಟುವು ಈಗಾಗಲೇ ತನ್ನ ಪೋಷಕರೊಂದಿಗೆ ಕೆಲವು ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಉಡುಪಿಗೆ ಹಿಂದಿರುಗಿದ್ದು, ಉಡುಪಿಯ ಅಷ್ಟಮಠಗಳ ಯತಿಗಳ ಆಶೀರ್ವಾದದೊಂದಿಗೆ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿದ್ದಾರೆ. ಪೂರ್ವ ನಿಗದಿಯಾದಂತೆ ಮೇ 11ರಿಂದ 14ರ ವರೆಗೆ ಶಿರೂರು ಮೂಲಮಠದಲ್ಲೇ ಸಂಪ್ರದಾಯದಂತೆ ಎಲ್ಲಾ ಧಾರ್ಮಿಕ ವಿಧಿಗಳು ನೆರವೇರಲಿವೆ ಎಂದು ಶಿರೂರು ಮಠದ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
Udupi Shiroor Mutt Successor Chosen, 16-Year-Old Aniruddha To Be Anointed
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm