ಬ್ರೇಕಿಂಗ್ ನ್ಯೂಸ್
10-05-21 12:51 pm Udupi Correspondent ಕರಾವಳಿ
Photo credits : newsnext
ಉಡುಪಿ, ಮೇ 10 : ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ನಿಧನದಿಂದ ತೆರವಾಗಿರುವ ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಉತ್ತರಾಧಿಕಾರಿ ಆಗಿರುವ ಉಡುಪಿಯ ಅನಿರುದ್ಧ ಸರಳತ್ತಾಯ (16) ಸನ್ಯಾಸ ಸ್ವೀಕಾರ ಹಾಗೂ ಶಿರೂರು ಮಠದ ಯತಿಯಾಗಿ ಪಟ್ಟಾಭಿಷೇಕ ಕಾರ್ಯಕ್ರಮ ಮೇ 11ರಿಂದ 14ರ ವರೆಗೆ ಹಿರಿಯಡ್ಕ ಸಮೀಪದ ಶಿರೂರು ಮೂಲಮಠದಲ್ಲಿ ನಡೆಯಲಿದೆ.
ಶಿರೂರು ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸುವ ಜವಾಬ್ದಾರಿಯನ್ನು ಹೊಂದಿರುವ ಶಿರೂರು ಮಠದ ದ್ವಂದ್ವ ಮಠವಾದ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಈ ನಿರ್ಧಾರವನ್ನು ತೆಗೆದು ಕೊಂಡಿದ್ದಾರೆ ಎಂದು ಶಿರೂರು ಮಠದ ವ್ಯವಸ್ಥಾಪಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಈ ಮೊದಲು ಅನಿರುದ್ಧ ಸರಳತ್ತಾಯರ ಸನ್ಯಾಸ ಸ್ವೀಕಾರ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮವನ್ನು ಮೇ 11ರಿಂದ 14ರ ವರೆಗೆ ಶಿರಸಿಯ ಸೋಮದಾ ಕ್ಷೇತ್ರದಲ್ಲಿ ಆಯೋಜಿಸಲು ಸೋದೆ ಶ್ರೀಗಳು ನಿರ್ಧರಿಸಿದ್ದರು. ಆದರೆ ಸರಕಾರದ ಕಠಿಣ ಮಾರ್ಗಸೂಚಿ ಹಿನ್ನೆಲೆಯಲ್ಲಿ ಇದೀಗ ಕಾರ್ಯಕ್ರಮವನ್ನು ಶಿರೂರು ಮಲ ಮಠದಲ್ಲೇ ನಡೆಸಲು ತೀರ್ಮಾನಿಸಲಾಗಿದೆ.

ಸನ್ಯಾಸಾಶ್ರಮ ಸ್ವೀಕರಿಸುವ ವಟುವು ಈಗಾಗಲೇ ತನ್ನ ಪೋಷಕರೊಂದಿಗೆ ಕೆಲವು ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಉಡುಪಿಗೆ ಹಿಂದಿರುಗಿದ್ದು, ಉಡುಪಿಯ ಅಷ್ಟಮಠಗಳ ಯತಿಗಳ ಆಶೀರ್ವಾದದೊಂದಿಗೆ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿದ್ದಾರೆ. ಪೂರ್ವ ನಿಗದಿಯಾದಂತೆ ಮೇ 11ರಿಂದ 14ರ ವರೆಗೆ ಶಿರೂರು ಮೂಲಮಠದಲ್ಲೇ ಸಂಪ್ರದಾಯದಂತೆ ಎಲ್ಲಾ ಧಾರ್ಮಿಕ ವಿಧಿಗಳು ನೆರವೇರಲಿವೆ ಎಂದು ಶಿರೂರು ಮಠದ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
Udupi Shiroor Mutt Successor Chosen, 16-Year-Old Aniruddha To Be Anointed
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm