ಬ್ರೇಕಿಂಗ್ ನ್ಯೂಸ್
11-05-21 03:51 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 11 : ತಾಲೂಕಿನ ಸುದೆಮುಗೆರು ಪರಿಸರದಲ್ಲಿ ಆರು ಮನೆಗಳ ಹತ್ತು ಮಂದಿಗೆ ಕೋವಿಡ್ ಸೋಂಕು ಕಾಣಿಸಿತ್ತು. ಹೀಗಾಗಿ ಗ್ರಾಮದ 78 ಮನೆಗಳಿಗೂ ಸೀಲ್ ಡೌನ್ ನಿರ್ಬಂಧ ಹೇರಿದ್ದಲ್ಲದೆ, ಇಡೀ ಗ್ರಾಮಕ್ಕೆ ಭೀತಿ ಮೂಡಿಸಿತ್ತು. ಈ ಬಗ್ಗೆ ಆಕ್ರೋಶ ಹೊರಬೀಳುತ್ತಿದ್ದಂತೆ, ಸೀಲ್ ಡೌನ್ ನಿಯಮವನ್ನು ತಾಲೂಕು ಆಡಳಿತ ಸರಳಗೊಳಿಸಿದೆ. ರಸ್ತೆಗೆ ಹಾಕಿದ್ದ ತಡೆ ಬೇಲಿಯನ್ನು ತೆರವುಗೊಳಿಸಿದ್ದು, ಕೋವಿಡ್ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡ ಆರು ಮನೆಗಳನ್ನು ಮಾತ್ರ ಸೀಲ್ ಡೌನ್ ಮಾಡಿದೆ.

ಸುದೆಮುಗೇರು ಗ್ರಾಮದಲ್ಲಿ ಆರು ಮನೆಗಳ ಹತ್ತು ಮಂದಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತ್ ಹಾಗೂ ಆರೋಗ್ಯ ಇಲಾಖೆ ಇಲ್ಲಿನ ಮುಖ್ಯ ರಸ್ತೆಗೆ ಬೇಲಿ ಹಾಕಿ 78 ಮನೆಗಳನ್ನೂ ಸೀಲ್ ಡೌನ್ ಮಾಡಿ ನಿವಾಸಿಗಳಿಗೆ ದಿಗ್ಬಂಧನ ವಿಧಿಸಿತ್ತು. ಕೂಲಿ ಕಾರ್ಮಿಕರೇ ಹೆಚ್ವಿರುವ ಈ ಪ್ರದೇಶದಲ್ಲಿ ಜನರ ಕಷ್ಟದ ಬಗ್ಗೆ ತಿಳಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಹಾಗು ಸಿಪಿಐಎಂ ಮುಖಂಡರು ಸೋಮವಾರ ಅಲ್ಲಿನ ಮನೆಯವರಿಗೆ ಅಗತ್ಯ ಸಾಮಗ್ರಿಗಳ ಕಿಟ್ ನೀಡಲು ಹೋದ ವೇಳೆ ಜನರು ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು. ಬಂಗೇರ ಅವರು ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯತಿನ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಕೂಡಲೇ ಅನಗತ್ಯವಾಗಿ ಹಾಕಲಾಗಿರುವ ಬೇಲಿಗಳನ್ಬು ತೆರವು ಮಾಡುವಂತೆ ಸೂಚಿಸಿದ್ದರು.

ಸೀಲ್ಡೌನ್ ಮಾಡಿ ಮೂರು ದಿನಗಳ ಬಳಿಕ ಬಂಗೇರರು ಕರೆ ಮಾಡಿದ ಮೇಲೆ ಪಟ್ಟಣ ಪಂಚಾಯತಿನ ಅಧಿಕಾರಿಗಳು ಸುದೆಮುಗೇರುವಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿನ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜನರು ಕೇವಲ ಆರು ಮನೆಗಳಲ್ಲಿ ರೋಗಿಗಳಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗಿದ್ದರೂ ಇಡೀ ಊರನ್ನು ದಿಗ್ಬಂಧನದಲ್ಲಿ ಇರಿಸಿರುವ ಬಗ್ಗೆ ತರಾಟೆಗೆ ತೆಗೆದುಕೊಂಡರು. ಇದಾದ ಬಳಿಕ ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಸ್ಥಳಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಕೂಡಲೇ ರಸ್ತೆಗೆ ಅಡ್ಡಲಾಗಿ ಹಾಕಿದ್ದ ತಡೆಬೇಲಿಯನ್ನು ತೆರವುಗೊಳಿಸಿದರು.
ರೋಗ ಕಾಣಿಸಿಕೊಂಡ ಆರು ಮನೆಗಳನ್ನು ಸೀಲ್ ಡೌನ್ ಮಾಡಿ ಇನ್ನು ಯಾರಿಗಾದರೂ ರೋಗ ಕಾಣಿಸಿಕೊಂಡರೆ ಆ ಮನೆಗಳನ್ನೂ ಸೀಲ್ಡೌನ್ ಮಾಡುವುದಾಗಿ ತಿಳಿಸಿದ್ದಾರೆ. ಸೀಲ್ಡೌನ್ ಆಗಿರುವ ಮನೆಗಳಿಗೆ ಆಹಾರ ಸಾಮಗ್ರಿಗಳನ್ನು ತಾವೇ ಒದಗಿಸುವುದಾಗಿ ಸ್ಥಳೀಯ ಜನರು ಜವಾಬ್ದಾರಿ ವಹಿಸಿಕೊಂಡಿದ್ದಾರೆ.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm