ಬ್ರೇಕಿಂಗ್ ನ್ಯೂಸ್
11-05-21 03:51 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 11 : ತಾಲೂಕಿನ ಸುದೆಮುಗೆರು ಪರಿಸರದಲ್ಲಿ ಆರು ಮನೆಗಳ ಹತ್ತು ಮಂದಿಗೆ ಕೋವಿಡ್ ಸೋಂಕು ಕಾಣಿಸಿತ್ತು. ಹೀಗಾಗಿ ಗ್ರಾಮದ 78 ಮನೆಗಳಿಗೂ ಸೀಲ್ ಡೌನ್ ನಿರ್ಬಂಧ ಹೇರಿದ್ದಲ್ಲದೆ, ಇಡೀ ಗ್ರಾಮಕ್ಕೆ ಭೀತಿ ಮೂಡಿಸಿತ್ತು. ಈ ಬಗ್ಗೆ ಆಕ್ರೋಶ ಹೊರಬೀಳುತ್ತಿದ್ದಂತೆ, ಸೀಲ್ ಡೌನ್ ನಿಯಮವನ್ನು ತಾಲೂಕು ಆಡಳಿತ ಸರಳಗೊಳಿಸಿದೆ. ರಸ್ತೆಗೆ ಹಾಕಿದ್ದ ತಡೆ ಬೇಲಿಯನ್ನು ತೆರವುಗೊಳಿಸಿದ್ದು, ಕೋವಿಡ್ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡ ಆರು ಮನೆಗಳನ್ನು ಮಾತ್ರ ಸೀಲ್ ಡೌನ್ ಮಾಡಿದೆ.

ಸುದೆಮುಗೇರು ಗ್ರಾಮದಲ್ಲಿ ಆರು ಮನೆಗಳ ಹತ್ತು ಮಂದಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತ್ ಹಾಗೂ ಆರೋಗ್ಯ ಇಲಾಖೆ ಇಲ್ಲಿನ ಮುಖ್ಯ ರಸ್ತೆಗೆ ಬೇಲಿ ಹಾಕಿ 78 ಮನೆಗಳನ್ನೂ ಸೀಲ್ ಡೌನ್ ಮಾಡಿ ನಿವಾಸಿಗಳಿಗೆ ದಿಗ್ಬಂಧನ ವಿಧಿಸಿತ್ತು. ಕೂಲಿ ಕಾರ್ಮಿಕರೇ ಹೆಚ್ವಿರುವ ಈ ಪ್ರದೇಶದಲ್ಲಿ ಜನರ ಕಷ್ಟದ ಬಗ್ಗೆ ತಿಳಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಹಾಗು ಸಿಪಿಐಎಂ ಮುಖಂಡರು ಸೋಮವಾರ ಅಲ್ಲಿನ ಮನೆಯವರಿಗೆ ಅಗತ್ಯ ಸಾಮಗ್ರಿಗಳ ಕಿಟ್ ನೀಡಲು ಹೋದ ವೇಳೆ ಜನರು ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು. ಬಂಗೇರ ಅವರು ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯತಿನ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಕೂಡಲೇ ಅನಗತ್ಯವಾಗಿ ಹಾಕಲಾಗಿರುವ ಬೇಲಿಗಳನ್ಬು ತೆರವು ಮಾಡುವಂತೆ ಸೂಚಿಸಿದ್ದರು.

ಸೀಲ್ಡೌನ್ ಮಾಡಿ ಮೂರು ದಿನಗಳ ಬಳಿಕ ಬಂಗೇರರು ಕರೆ ಮಾಡಿದ ಮೇಲೆ ಪಟ್ಟಣ ಪಂಚಾಯತಿನ ಅಧಿಕಾರಿಗಳು ಸುದೆಮುಗೇರುವಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿನ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜನರು ಕೇವಲ ಆರು ಮನೆಗಳಲ್ಲಿ ರೋಗಿಗಳಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗಿದ್ದರೂ ಇಡೀ ಊರನ್ನು ದಿಗ್ಬಂಧನದಲ್ಲಿ ಇರಿಸಿರುವ ಬಗ್ಗೆ ತರಾಟೆಗೆ ತೆಗೆದುಕೊಂಡರು. ಇದಾದ ಬಳಿಕ ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಸ್ಥಳಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಕೂಡಲೇ ರಸ್ತೆಗೆ ಅಡ್ಡಲಾಗಿ ಹಾಕಿದ್ದ ತಡೆಬೇಲಿಯನ್ನು ತೆರವುಗೊಳಿಸಿದರು.
ರೋಗ ಕಾಣಿಸಿಕೊಂಡ ಆರು ಮನೆಗಳನ್ನು ಸೀಲ್ ಡೌನ್ ಮಾಡಿ ಇನ್ನು ಯಾರಿಗಾದರೂ ರೋಗ ಕಾಣಿಸಿಕೊಂಡರೆ ಆ ಮನೆಗಳನ್ನೂ ಸೀಲ್ಡೌನ್ ಮಾಡುವುದಾಗಿ ತಿಳಿಸಿದ್ದಾರೆ. ಸೀಲ್ಡೌನ್ ಆಗಿರುವ ಮನೆಗಳಿಗೆ ಆಹಾರ ಸಾಮಗ್ರಿಗಳನ್ನು ತಾವೇ ಒದಗಿಸುವುದಾಗಿ ಸ್ಥಳೀಯ ಜನರು ಜವಾಬ್ದಾರಿ ವಹಿಸಿಕೊಂಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm