ಬ್ರೇಕಿಂಗ್ ನ್ಯೂಸ್
11-05-21 05:20 pm Udupi Correspondent ಕರಾವಳಿ
ಕುಂದಾಪುರ, ಮೇ 11: ಲಾಕ್ಡೌನ್ ಇರುವುದರಿಂದ ಗ್ರೋಸರಿ ತರುವುದಕ್ಕೂ ವಾಹನ ಬಳಸುವಂತಿಲ್ಲ ಎಂದು ರಾಜ್ಯ ಸರಕಾರ ನಿಯಮ ಹೇರಿರುವುದರಿಂದ ಹೆಚ್ಚಿನ ಕಡೆ ಪೊಲೀಸರು ಲಾಠಿ ಬೀಸಿದ್ದು ಪರ- ವಿರೋಧ ಟೀಕೆಗೂ ಕಾರಣವಾಗಿದೆ. ಇದೇ ವೇಳೆ, ಇಲ್ಲಿನ ಕುಂಭಾಸಿಯ ಯುವಕನೊಬ್ಬ ಪೊಲೀಸರ ಲಾಠಿರುಚಿಯನ್ನು ಅಣಕಿಸುವುದಕ್ಕಾಗಿಯೇ ಹೊಸ ತಂತ್ರಕ್ಕೆ ಮೊರೆಹೋಗಿರುವ ಫೋಟೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಕುಂಭಾಸಿಯ ವಿನೇಂದ್ರ ಆಚಾರ್ಯ ಎಂಬವರು ಸೈಕಲ್ ನಲ್ಲಿ ಪೇಟೆಗೆ ಹೊರಟಿದ್ದು ತಲೆಗೆ ಹೆಲ್ಮೆಟ್ ಮತ್ತು ಬೆನ್ನಿಗೆ ತಗಡು ಶೀಟನ್ನು ಕಟ್ಟಿಕೊಂಡಿದ್ದಾರೆ. ಬೆನ್ನಿಗೆ ಪೆಟ್ಟು ಬಿದ್ದರೂ ತಗಡು ಶೀಟ್ ಇದೆಯೆಂಬ ರೀತಿ ಬಿಂಬಿಸಿ, ಸೈಕಲಿನಲ್ಲಿ ಹೊರಟಿರುವ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರ ಲಾಠಿಗೆ ಪ್ರತಿತಂತ್ರ ಎನ್ನುವ ರೀತಿ ಬಿಂಬಿತವಾಗುತ್ತಿದೆ.

ಬೆಳಗ್ಗೆ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿ ಖರೀದಿಸಲು ಅವಕಾಶ ನೀಡಿದ್ದು ಆದರೆ ನಡೆದುಕೊಂಡೇ ಮನೆ ಪರಿಸರದ ಅಂಗಡಿಗಳಿಂದ ಖರೀದಿ ನಡೆಸಬೇಕು. ಯಾವುದೇ ಕಾರಣಕ್ಕೂ ವಾಹನಗಳಲ್ಲಿ ದೂರಕ್ಕೆ ಪ್ರಯಾಣ ಮಾಡಬಾರದು. ಅಗತ್ಯ ವಸ್ತು ಖರೀದಿಗೆಂದು ಮಾರುಕಟ್ಟೆ ಇನ್ನಿತರ ಪ್ರದೇಶಕ್ಕೆ ಹೋಗಬಾರದೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಆದರೆ, ಈ ನಿಯಮವನ್ನು ಬಹುತೇಕ ಕಡೆ ಜನರು ಮುರಿಯುತ್ತಿದ್ದಾರೆ. ಪೊಲೀಸರು ಅಡ್ಡಗಟ್ಟಿದರೂ ಒಳದಾರಿಗಳಿಂದ ಅಂಗಡಿಗಳಿಗೆ ತೆರಳುತ್ತಿದ್ದಾರೆ. ಈ ವೇಳೆ, ಕೆಲವು ಕಡೆ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸುವ ಘಟನೆ ನಡೆದಿದೆ.
ಪೊಲೀಸರ ಲಾಠಿ ಬೀಸುವ ನಡೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ವಯಸ್ಸಾದವರು ತಮ್ಮ ಸ್ಕೂಟರ್ ಬಳಸದೆ ಗ್ರೋಸರಿ ತರುವುದು ಹೇಗೆಂಬ ಮಾತುಗಳು ಕೇಳಿಬಂದಿದ್ದವು. ಅದಕ್ಕೆ ಕೆಲವು ಕಡೆ ವಯಸ್ಸಾದವರು, ಅಸಹಾಯಕರಿಗೆ ಮಾತ್ರ ವಾಹನ ಬಳಕೆಗೆ ಅವಕಾಶ ನೀಡಲಾಗಿದೆ. ಹೀಗಿದ್ದರೂ, ಜನರು ಅಂಗಡಿ ಮುಂದೆ ಸೇರುವುದು, ಮುಗಿ ಬೀಳುವುದು ಕಾಮನ್ ಆಗಿದೆ. ಇಂಥ ಸಂದರ್ಭದಲ್ಲೇ ಯುವಕನೊಬ್ಬ ಬೆನ್ನಿಗೆ ಕಬ್ಬಿಣದ ಶೀಟ್ ಕಟ್ಟಿಕೊಂಡು ಸೈಕಲಿನಲ್ಲಿ ಪೇಟೆಗೆ ಹೊರಟು ಸುದ್ದಿಯಾಗಿದ್ದಾನೆ.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm