ಬ್ರೇಕಿಂಗ್ ನ್ಯೂಸ್
11-05-21 05:20 pm Udupi Correspondent ಕರಾವಳಿ
ಕುಂದಾಪುರ, ಮೇ 11: ಲಾಕ್ಡೌನ್ ಇರುವುದರಿಂದ ಗ್ರೋಸರಿ ತರುವುದಕ್ಕೂ ವಾಹನ ಬಳಸುವಂತಿಲ್ಲ ಎಂದು ರಾಜ್ಯ ಸರಕಾರ ನಿಯಮ ಹೇರಿರುವುದರಿಂದ ಹೆಚ್ಚಿನ ಕಡೆ ಪೊಲೀಸರು ಲಾಠಿ ಬೀಸಿದ್ದು ಪರ- ವಿರೋಧ ಟೀಕೆಗೂ ಕಾರಣವಾಗಿದೆ. ಇದೇ ವೇಳೆ, ಇಲ್ಲಿನ ಕುಂಭಾಸಿಯ ಯುವಕನೊಬ್ಬ ಪೊಲೀಸರ ಲಾಠಿರುಚಿಯನ್ನು ಅಣಕಿಸುವುದಕ್ಕಾಗಿಯೇ ಹೊಸ ತಂತ್ರಕ್ಕೆ ಮೊರೆಹೋಗಿರುವ ಫೋಟೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಕುಂಭಾಸಿಯ ವಿನೇಂದ್ರ ಆಚಾರ್ಯ ಎಂಬವರು ಸೈಕಲ್ ನಲ್ಲಿ ಪೇಟೆಗೆ ಹೊರಟಿದ್ದು ತಲೆಗೆ ಹೆಲ್ಮೆಟ್ ಮತ್ತು ಬೆನ್ನಿಗೆ ತಗಡು ಶೀಟನ್ನು ಕಟ್ಟಿಕೊಂಡಿದ್ದಾರೆ. ಬೆನ್ನಿಗೆ ಪೆಟ್ಟು ಬಿದ್ದರೂ ತಗಡು ಶೀಟ್ ಇದೆಯೆಂಬ ರೀತಿ ಬಿಂಬಿಸಿ, ಸೈಕಲಿನಲ್ಲಿ ಹೊರಟಿರುವ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರ ಲಾಠಿಗೆ ಪ್ರತಿತಂತ್ರ ಎನ್ನುವ ರೀತಿ ಬಿಂಬಿತವಾಗುತ್ತಿದೆ.

ಬೆಳಗ್ಗೆ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿ ಖರೀದಿಸಲು ಅವಕಾಶ ನೀಡಿದ್ದು ಆದರೆ ನಡೆದುಕೊಂಡೇ ಮನೆ ಪರಿಸರದ ಅಂಗಡಿಗಳಿಂದ ಖರೀದಿ ನಡೆಸಬೇಕು. ಯಾವುದೇ ಕಾರಣಕ್ಕೂ ವಾಹನಗಳಲ್ಲಿ ದೂರಕ್ಕೆ ಪ್ರಯಾಣ ಮಾಡಬಾರದು. ಅಗತ್ಯ ವಸ್ತು ಖರೀದಿಗೆಂದು ಮಾರುಕಟ್ಟೆ ಇನ್ನಿತರ ಪ್ರದೇಶಕ್ಕೆ ಹೋಗಬಾರದೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಆದರೆ, ಈ ನಿಯಮವನ್ನು ಬಹುತೇಕ ಕಡೆ ಜನರು ಮುರಿಯುತ್ತಿದ್ದಾರೆ. ಪೊಲೀಸರು ಅಡ್ಡಗಟ್ಟಿದರೂ ಒಳದಾರಿಗಳಿಂದ ಅಂಗಡಿಗಳಿಗೆ ತೆರಳುತ್ತಿದ್ದಾರೆ. ಈ ವೇಳೆ, ಕೆಲವು ಕಡೆ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸುವ ಘಟನೆ ನಡೆದಿದೆ.
ಪೊಲೀಸರ ಲಾಠಿ ಬೀಸುವ ನಡೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ವಯಸ್ಸಾದವರು ತಮ್ಮ ಸ್ಕೂಟರ್ ಬಳಸದೆ ಗ್ರೋಸರಿ ತರುವುದು ಹೇಗೆಂಬ ಮಾತುಗಳು ಕೇಳಿಬಂದಿದ್ದವು. ಅದಕ್ಕೆ ಕೆಲವು ಕಡೆ ವಯಸ್ಸಾದವರು, ಅಸಹಾಯಕರಿಗೆ ಮಾತ್ರ ವಾಹನ ಬಳಕೆಗೆ ಅವಕಾಶ ನೀಡಲಾಗಿದೆ. ಹೀಗಿದ್ದರೂ, ಜನರು ಅಂಗಡಿ ಮುಂದೆ ಸೇರುವುದು, ಮುಗಿ ಬೀಳುವುದು ಕಾಮನ್ ಆಗಿದೆ. ಇಂಥ ಸಂದರ್ಭದಲ್ಲೇ ಯುವಕನೊಬ್ಬ ಬೆನ್ನಿಗೆ ಕಬ್ಬಿಣದ ಶೀಟ್ ಕಟ್ಟಿಕೊಂಡು ಸೈಕಲಿನಲ್ಲಿ ಪೇಟೆಗೆ ಹೊರಟು ಸುದ್ದಿಯಾಗಿದ್ದಾನೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm