ಬ್ರೇಕಿಂಗ್ ನ್ಯೂಸ್
11-05-21 05:20 pm Udupi Correspondent ಕರಾವಳಿ
ಕುಂದಾಪುರ, ಮೇ 11: ಲಾಕ್ಡೌನ್ ಇರುವುದರಿಂದ ಗ್ರೋಸರಿ ತರುವುದಕ್ಕೂ ವಾಹನ ಬಳಸುವಂತಿಲ್ಲ ಎಂದು ರಾಜ್ಯ ಸರಕಾರ ನಿಯಮ ಹೇರಿರುವುದರಿಂದ ಹೆಚ್ಚಿನ ಕಡೆ ಪೊಲೀಸರು ಲಾಠಿ ಬೀಸಿದ್ದು ಪರ- ವಿರೋಧ ಟೀಕೆಗೂ ಕಾರಣವಾಗಿದೆ. ಇದೇ ವೇಳೆ, ಇಲ್ಲಿನ ಕುಂಭಾಸಿಯ ಯುವಕನೊಬ್ಬ ಪೊಲೀಸರ ಲಾಠಿರುಚಿಯನ್ನು ಅಣಕಿಸುವುದಕ್ಕಾಗಿಯೇ ಹೊಸ ತಂತ್ರಕ್ಕೆ ಮೊರೆಹೋಗಿರುವ ಫೋಟೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಕುಂಭಾಸಿಯ ವಿನೇಂದ್ರ ಆಚಾರ್ಯ ಎಂಬವರು ಸೈಕಲ್ ನಲ್ಲಿ ಪೇಟೆಗೆ ಹೊರಟಿದ್ದು ತಲೆಗೆ ಹೆಲ್ಮೆಟ್ ಮತ್ತು ಬೆನ್ನಿಗೆ ತಗಡು ಶೀಟನ್ನು ಕಟ್ಟಿಕೊಂಡಿದ್ದಾರೆ. ಬೆನ್ನಿಗೆ ಪೆಟ್ಟು ಬಿದ್ದರೂ ತಗಡು ಶೀಟ್ ಇದೆಯೆಂಬ ರೀತಿ ಬಿಂಬಿಸಿ, ಸೈಕಲಿನಲ್ಲಿ ಹೊರಟಿರುವ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರ ಲಾಠಿಗೆ ಪ್ರತಿತಂತ್ರ ಎನ್ನುವ ರೀತಿ ಬಿಂಬಿತವಾಗುತ್ತಿದೆ.

ಬೆಳಗ್ಗೆ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿ ಖರೀದಿಸಲು ಅವಕಾಶ ನೀಡಿದ್ದು ಆದರೆ ನಡೆದುಕೊಂಡೇ ಮನೆ ಪರಿಸರದ ಅಂಗಡಿಗಳಿಂದ ಖರೀದಿ ನಡೆಸಬೇಕು. ಯಾವುದೇ ಕಾರಣಕ್ಕೂ ವಾಹನಗಳಲ್ಲಿ ದೂರಕ್ಕೆ ಪ್ರಯಾಣ ಮಾಡಬಾರದು. ಅಗತ್ಯ ವಸ್ತು ಖರೀದಿಗೆಂದು ಮಾರುಕಟ್ಟೆ ಇನ್ನಿತರ ಪ್ರದೇಶಕ್ಕೆ ಹೋಗಬಾರದೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಆದರೆ, ಈ ನಿಯಮವನ್ನು ಬಹುತೇಕ ಕಡೆ ಜನರು ಮುರಿಯುತ್ತಿದ್ದಾರೆ. ಪೊಲೀಸರು ಅಡ್ಡಗಟ್ಟಿದರೂ ಒಳದಾರಿಗಳಿಂದ ಅಂಗಡಿಗಳಿಗೆ ತೆರಳುತ್ತಿದ್ದಾರೆ. ಈ ವೇಳೆ, ಕೆಲವು ಕಡೆ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸುವ ಘಟನೆ ನಡೆದಿದೆ.
ಪೊಲೀಸರ ಲಾಠಿ ಬೀಸುವ ನಡೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ವಯಸ್ಸಾದವರು ತಮ್ಮ ಸ್ಕೂಟರ್ ಬಳಸದೆ ಗ್ರೋಸರಿ ತರುವುದು ಹೇಗೆಂಬ ಮಾತುಗಳು ಕೇಳಿಬಂದಿದ್ದವು. ಅದಕ್ಕೆ ಕೆಲವು ಕಡೆ ವಯಸ್ಸಾದವರು, ಅಸಹಾಯಕರಿಗೆ ಮಾತ್ರ ವಾಹನ ಬಳಕೆಗೆ ಅವಕಾಶ ನೀಡಲಾಗಿದೆ. ಹೀಗಿದ್ದರೂ, ಜನರು ಅಂಗಡಿ ಮುಂದೆ ಸೇರುವುದು, ಮುಗಿ ಬೀಳುವುದು ಕಾಮನ್ ಆಗಿದೆ. ಇಂಥ ಸಂದರ್ಭದಲ್ಲೇ ಯುವಕನೊಬ್ಬ ಬೆನ್ನಿಗೆ ಕಬ್ಬಿಣದ ಶೀಟ್ ಕಟ್ಟಿಕೊಂಡು ಸೈಕಲಿನಲ್ಲಿ ಪೇಟೆಗೆ ಹೊರಟು ಸುದ್ದಿಯಾಗಿದ್ದಾನೆ.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm