ಬ್ರೇಕಿಂಗ್ ನ್ಯೂಸ್
11-05-21 07:42 pm Mangaluru Correspondent ಕರಾವಳಿ
ಮಂಗಳೂರು, ಮೇ 11: ಲಾಕ್ಡೌನ್ ಕಾರಣದಿಂದ ಮದುವೆ ಸಮಾರಂಭಗಳನ್ನು ಜನ ಸೇರಬಾರದೆಂಬ ನೆಲೆಯಲ್ಲಿ 40 ಮಂದಿಗೆ ಸೀಮಿತಗೊಳಿಸಿ, ರಾಜ್ಯ ಸರಕಾರ ನಿರ್ಬಂಧ ವಿಧಿಸಿದೆ. ಆದರೆ, ಅಡ್ಯಾರಿನಲ್ಲಿ ಮದುವೆ ಕಾರ್ಯಕ್ರಮ ನಡೆದು ರಾತ್ರಿ ವೇಳೆ, ಮನೆಯಲ್ಲೇ ಗಡದ್ದಾಗಿ ಪಾರ್ಟಿ ನಡೆದಿರುವುದು ಪೊಲೀಸ್ ಕೇಸು ಎದುರಿಸುವಂತಾಗಿದೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಬಳಿಯ ಕೋಡಿಮಜಲು ಎಂಬಲ್ಲಿ ನಿನ್ನೆ ರಾತ್ರಿ ಮದುವೆ ಪಾರ್ಟಿ ನಡೆದಿತ್ತು. 40 ಜನಕ್ಕೆ ಮಾತ್ರ ಸೀಮಿತಗೊಳಿಸಿ, ನಡೆಸುವಂತೆ ಸ್ಥಳೀಯ ಪಂಚಾಯತ್ ನಿಂದ ಅನುಮತಿ ನೀಡಲಾಗಿತ್ತು. ಆದರೆ, ಮದುವೆ ದಿನ ರಾತ್ರಿ ವೇಳೆ ಯುವಕರು ಡಿಜೆ ಸೌಂಡ್ಸ್ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.


ಸಮಾರಂಭದಲ್ಲಿಯೂ ಸಾಮಾಜಿಕ ಅಂತರ, ಮಾಸ್ಕ್ ಹಾಕಬೇಕೆಂಬ ನಿಯಮ ಇದ್ದರೂ, ಅದನ್ನು ಗಾಳಿಗೆ ತೂರಿ ವಧೂವರರ ಜೊತೆ ಸೇರಿ ಯುವಕರು ಕುಣಿದಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿದ್ದು, ಲಾಕ್ಡೌನ್ ನಿಯಮ ಮುರಿದು ಕಾರ್ಯಕ್ರಮ ನಡೆಸಲಾಗಿದೆ ಎಂದು ಆಕ್ಷೇಪ ಕೇಳಿಬಂದಿತ್ತು. ವಿಡಿಯೋ ಹರಿದಾಡಿದ್ದರಿಂದ ಸ್ಥಳೀಯ ಪೊಲೀಸರು ಅಲರ್ಟ್ ಆಗಿದ್ದು, ಮನೆಯವರನ್ನು ಠಾಣೆಗೆ ಕರೆಸಿ ಸ್ಪಷ್ಟನೆ ಕೇಳಿದ್ದಾರೆ. ಅಲ್ಲದೆ, ಲಾಕ್ಡೌನ್ ಕಾನೂನು ಮುರಿದು ಸೋಂಕು ಹರಡಲು ಆಸ್ಪದ ನೀಡಿರುವುದಕ್ಕಾಗಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.
Video
A Video of a group dancing in a wedding program held at home in Adyar, Mangalore has spread virally on social media breaking the covid lockdown rules. The Kankanady Rural police have filed a case against the organisers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm