ಬ್ರೇಕಿಂಗ್ ನ್ಯೂಸ್
14-05-21 04:46 pm Mangalore Correspondent ಕರಾವಳಿ
ಮಂಗಳೂರು, ಮೇ 14: ಲಾಕ್ಡೌನ್ ವೇಳೆ ಸದಾ ಬೀದಿ ಸುತ್ತುವ ಪೊಲೀಸರಿಗೆ ಕೊರೊನಾ ಸೋಂಕು ಹರಡುತ್ತಿದ್ದು, ಇದನ್ನು ಮನಗಂಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪೊಲೀಸ್ ಸಿಬಂದಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದಾರೆ.
ನಗರದ ಅಲೋಶಿಯಸ್ ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ಕಟ್ಟಡದಲ್ಲಿ 40 ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ರೆಡಿ ಮಾಡಲಾಗಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಉದ್ಘಾಟನೆ ನೆರವೇರಿಸಿದರು.



ಈ ವೇಳೆ ಮಾತನಾಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಈಗಾಗ್ಲೇ ಮಂಗಳೂರಿನಲ್ಲಿ 62 ಮಂದಿಗೆ ಕೋವಿಡ್ ಸೋಂಕು ತಗಲಿದೆ. ಈ 16 ಮಂದಿ ಗುಣಮುಖರಾಗಿದ್ದು, 42 ಮಂದಿ ಹೋಮ್ ಐಸೋಲೇಶನಲ್ಲಿದ್ದಾರೆ. ಆದರೆ, ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದವರು, ಏನಾದ್ರೂ ಆರೋಗ್ಯ ತೊಂದರೆ ಇದ್ದವರು ಇಲ್ಲಿ ಬಂದು ಸೇರಿಕೊಳ್ಳಬಹುದು. ಇಲ್ಲಿ 24 ಗಂಟೆ ಕಾಲ ವೈದ್ಯರು ಮತ್ತು ನರ್ಸ್ ಗಳು ಇರಲಿದ್ದು, ರೋಗಿಗಳ ಆರೈಕೆ ಮಾಡಲಿದ್ದಾರೆ.
ಅಲ್ಲದೆ, ಊಟ, ತಿಂಡಿ, ಚಹಾವನ್ನು ಕಾಲ ಕಾಲಕ್ಕೆ ಅಲೋಶಿಯಸ್ ಕಾಲೇಜಿನ ಹಾಸ್ಟೆಲ್ ವತಿಯಿಂದ ರೆಡಿ ಮಾಡಿ ಕೊಡುತ್ತಿದ್ದಾರೆ. ಟಿವಿ, ನೀರು, ಬೆಡ್ ವ್ಯವಸ್ಥೆ ಎಲ್ಲ ಇರುವುದರಿಂದ ತೊಂದರೆ ಇಲ್ಲ. ಮಧುಮೇಹ, ಬಿಪಿ ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿಂದ ಬಳಲುತ್ತಿರುವ ಪೊಲೀಸ್ ಇಲಾಖೆಯಲ್ಲಿರುವ ಸೋಂಕಿತರು ಮತ್ತು ಅವರ ಸಂಬಂಧಿಕರಿಗಾಗಿ ಈ ಕೋವಿಡ್ ಕೇರ್ ಆರಂಭಿಸಲಾಗಿದೆ ಎಂದು ತಿಳಿಸಿದರು.



ಭವಿಷ್ಯದಲ್ಲಿ ಇಲ್ಲಿನ ಬೆಡ್ ವ್ಯವಸ್ಥೆ ಸಾಕಾಗದಿದ್ದಲ್ಲಿ ಸುರತ್ಕಲ್ ಎನ್ಐಟಿಕೆಯಲ್ಲಿ ಕಳೆದ ಬಾರಿ ರೆಡಿ ಮಾಡಿದ್ದ ಕೋವಿಡ್ ಕೇರ್ ಸೆಂಟರ್ ಇದೆ. ಫ್ರಂಟ್ ಲೈನ್ ವಾರಿಯರ್ಸ್ ಗಾಗಿಯೇ ಅಲ್ಲಿ 300 ಬೆಡ್ ಗಳ ಸೆಂಟರ್ ಇದೆ. ಅದನ್ನೂ ಅಗತ್ಯ ಬಿದ್ದರೆ ಬಳಸಿಕೊಳ್ಳಲಾಗುವುದು ಎಂದು ಕಮಿಷನರ್ ಹೇಳಿದರು.
Deputy Commissioner (DC) Dr. Rajendra KV inaugurated an 18-bed Covid care center, exclusively for police personnel and for their family members in the now vacant student ladies hostel near St Aloysius Gonzaga School, here on Friday, May 14.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm