ಬ್ರೇಕಿಂಗ್ ನ್ಯೂಸ್
15-05-21 12:36 pm Mangaluru Correspondent ಕರಾವಳಿ
ಉಳ್ಳಾಲ, ಮೇ 15: ಸೋಮೇಶ್ವರ ಕಡಲ ತೀರದಲ್ಲಿ ಕಡಲಿನ ಅಲೆಗಳು ಈ ಬಾರಿ ಮೊದಲ ಮಳೆಗೇ ಯಾರೂ ನೋಡರಿಯದಷ್ಟು ರೌದ್ರನರ್ತನ ನಡೆಸುತ್ತಿದ್ದು ದೇವಸ್ಥಾನ ಬಳಿಯಲ್ಲಿರೋ ಹಿಂದೂ ರುದ್ರಭೂಮಿಯನ್ನೇ ನುಂಗಿಕೊಂಡಿದೆ. ಹೆಸರಿಗೆ ತೌಕ್ತೆ ಚಂಡಮಾರತದ ಎಫೆಕ್ಟ್ ಅಂತ ಹೇಳಿದರೂ ಕಡಲ ತೀರದಲ್ಲಿ ನಡೆಸುತ್ತಿದ್ದ ಅಕ್ರಮ ಮರಳುಗಾರಿಕೆಯ ಕರ್ಮದ ಫಲದಿಂದಾಗಿ ಈ ರೀತಿ ಒಂದೇ ಕಡೆ ಕಡಲು ಅಬ್ಬರಿಸುತ್ತಾ ಮುನ್ನುಗ್ಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ಎದ್ದಿರುವ ತೌಕ್ತೆ ಚಂಡಮಾರುತದ ಪ್ರಭಾವದಿಂದ ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಸುರಿಯುತ್ತಿದ್ದು ಕಡಲು ಭೋರ್ಗರೆಯುತ್ತಿದೆ. ಇತಿಹಾಸ ಪ್ರಸಿದ್ದ ಸೋಮೇಶ್ವರ ಸೋಮನಾಥನ ದೇವಸ್ಥಾನ ಬಳಿಯ ಸಮುದ್ರ ತೀರ ಈ ಬಾರಿ ಎಂದೂ ಕಂಡರಿಯದಷ್ಟು ಪ್ರಕ್ಷುಬ್ದಗೊಂಡಿದ್ದು ಇದಕ್ಕೆ ಇಲ್ಲಿ ನಿರಂತರವಾಗಿ ನಡೆಸಲಾಗುತ್ತಿದ್ದ ಅಕ್ರಮ ಮರಳುಗಾರಿಕೆಯೇ ಪ್ರಮುಖ ಕಾರಣವಾಗಿದೆ.
ಕಳೆದ ಮಳೆಗಾಲದಲ್ಲಿಯೂ ಸೋಮೇಶ್ವರದ ಕಡಲು ಚಂಡಮಾರುತದಿಂದ ಭೋರ್ಗರೆದು ಆಭರ್ಟಿಸಿತ್ತಾದರೂ ಹಿಂದೂ ರುದ್ರಭೂಮಿಯ ವರೆಗೆ ಅಲೆಗಳು ಮುನ್ನುಗಿರಲಿಲ್ಲ. ಈ ಬಾರಿ ಚಂಡಮಾರುತಕ್ಕೆ ನಿನ್ನೆ ಬೆಳಗ್ಗಿನಿಂದಲೇ ಕಡಲು ಪ್ರಕ್ಷುಬ್ದ ಗೊಂಡಿದ್ದು ಒಂದೇ ದಿನದಲ್ಲಿ ಹಿಂದು ರುದ್ರಭೂಮಿಯ ಬೃಹತ್ ಆವರಣಗೋಡೆ ಕಡಲಿನ ಒಡಲು ಸೇರಿತ್ತು. ಇಂದು ಬೆಳಗ್ಗಿನ ಹೊತ್ತಿಗೆ ಕಡಲು ಮತ್ತಷ್ಟು ಮುನ್ನುಗ್ಗಿ ಬಂದಿದ್ದು ಹಿಂದು ರುದ್ರಭೂಮಿಯ ಕಟ್ಟಡವನ್ನೇ ಕೊಚ್ಚಿಕೊಂಡು ಹೋಗಿವೆ.
ಅಕ್ರಮ ಮರಳುಗಾರಿಕೆಯ ಕರ್ಮದ ಫಲ !
ಉಳ್ಳಾಲದಲ್ಲಿ ರೌಡಿಶೀಟರ್ ಆಗಿರುವ ವ್ಯಕ್ತಿ ಕಡಲತೀರದಲ್ಲಿ ಕಳೆದ ಒಂದು ವರುಷದಿಂದ ನಿರಂತರವಾಗಿ ಲೋಡ್ ಗಟ್ಟಲೆ ಮರಳನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಾ ಬಂದಿದ್ದಾನೆ. ಇದಕ್ಕೆ ಸ್ಥಳೀಯ ಉಳ್ಳಾಲ ಠಾಣೆಯ ಕೆಳ ಪೊಲೀಸರು ಹಿಂಬಾಗಿಲಿನಿಂದ ಸಹಾಯ ನೀಡಿದ್ದರು. ಈ ಹಿಂದೆ ಇದೇ ರೌಡಿಗೆ ಸೇರಿದ ಮರಳಿನ ಲಾರಿಯನ್ನ ಸ್ವತಃ ಕಮಿಷನರ್ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್ ಜೋಡಿ ಮಧ್ಯರಾತ್ರಿಯಲ್ಲಿ ಮಫ್ತಿಯಲ್ಲಿ ಬಂದು ತಲಪಾಡಿ ಟೋಲ್ ಗೇಟಲ್ಲಿ ಅಡ್ಡ ಹಾಕಿ ಬಂಧಿಸಿತ್ತು. ಅಕ್ರಮ ಮರಳುಗಾರಿಕೆಯ ವಿರುದ್ಧ ಧ್ವನಿ ಎತ್ತ ಬೇಕಿದ್ದ ಸ್ಥಳೀಯರು ಕೂಡ ರೌಡಿಯ ಭಯದಿಂದ ಬಾಯ್ಮುಚ್ಚಿ ಸುಮ್ಮನಿದ್ದುದರ ಫಲವಾಗಿಯೇ ಇಂದು ಪೃಕೃತಿಯೇ ಮುನಿಸಿಕೊಂಡು ದೈತ್ಯಾಕಾರದ ಅಲೆಗಳ ರೂಪದಲ್ಲಿ ವಿನಾಶ ನಡೆಸುತ್ತಿದೆ.
ಸೋಮೇಶ್ವರ ಕಡಲ ತೀರದಲ್ಲಿ ನಡೆಸುತ್ತಿದ್ದ ಅಕ್ರಮ ಮರಳುಗಾರಿಕೆಯ ಬಗ್ಗೆ ಕೆಲವು ತೀರದ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದು ಪೃಕೃತಿ ಮುನಿಸುವ ಬಗ್ಗೆ ಎಚ್ಚರಿಕೆಯನ್ನೂ ಕೊಟ್ಟಿದ್ದರಂತೆ. ರುದ್ರಭೂಮಿ ಇದ್ದ ಜಾಗದಲ್ಲೇ ನೇರವಾಗಿ ಕೊರೆದು ಮರಳನ್ನು ಸಾಗಿಸಲಾಗಿತ್ತು. ಆದರೆ ಅದನ್ನು ಯಾವುದನ್ನೂ ಲೆಕ್ಕಿಸದ ಮರಳು ಮಾಫಿಯಾ ತನ್ನ ಜೇಬು ತುಂಬಿಸುವುದಷ್ಟನ್ನೇ ಮುಂದುವರಿಸಿದ ದುಷ್ಪರಿಣಾಮ ಇಂದು ಕಣ್ಣ ಮುಂದೆ ಕಾಣಿಸುವಂತಾಗಿದೆ. ಪಕೃತಿಗೆ ನಾವು ಕೇಡು ಬಯಸಿದರೆ ಪೃಕೃತಿಯೂ ವಿಕೃತಿ ಮೆರೆಯುವುದು ಸಹಜ.
Continous illegal sand mining has caused the Hindu graveyard to disappear at Someshwara in Ullal after hit by Cyclone Tauktae in Mangalore.
04-06-25 10:48 pm
Bangalore Correspondent
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
ಕ್ಷಮೆ ಕೇಳಲ್ಲ, ಮಾತುಕತೆಗೆ ಸಿದ್ಧ ; ಹೈಕೋರ್ಟಿನಲ್ಲಿ...
03-06-25 10:50 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
04-06-25 10:43 pm
Mangalore Correspondent
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
Bomb Threat, Mangalore, Kanachur Hospital: ದೇ...
04-06-25 01:38 pm
ಮಂಗಳೂರಿನಲ್ಲಿ ಟಿಂಟ್ ಗ್ಲಾಸ್ ಕಾರುಗಳ ವಿರುದ್ಧ ವಿಶೇ...
03-06-25 08:13 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm