ಬ್ರೇಕಿಂಗ್ ನ್ಯೂಸ್
15-05-21 12:53 pm Udupi Correspondent ಕರಾವಳಿ
ಉಡುಪಿ, ಮೇ 15: ಇಲ್ಲಿನ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳೇ ಸೇರಿ ಜೈಲಿನ ಸುಪರಿಡೆಂಟ್ ವಿರುದ್ಧ ಒಂದು ದಿನದ ಉಪವಾಸ ನಡೆಸಿದ್ದಾರೆ. ಜೈಲಿನ ಸುಪರಿಡೆಂಟ್ ಶ್ರೀನಿವಾಸ ಗೌಡ, ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ. ನಮ್ಮನ್ನು ಶೋಷಣೆ ಮಾಡುತ್ತಿದ್ದಾರೆಂದು ಆರೋಪಿಸಿ ಕೈದಿಗಳು ಉಪವಾಸ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದಿದ್ದಾರೆ.
ಸರಕಾರದಿಂದ ಕೈದಿಗಳಿಗೆ ಏನೆಲ್ಲಾ ಸೌಲಭ್ಯಗಳನ್ನು ಕೊಡುತ್ತಾರೋ, ಅವನ್ನು ಜೈಲು ಸುಪರಿಡೆಂಟ್ ಕೊಡುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಕೈದಿಗಳು ಸೇರಿಕೊಂಡು ಶುಕ್ರವಾರ ಇಡೀ ದಿನ ಆಹಾರ ಸ್ವೀಕರಿಸದೆ ನಿರಶನ ನಡೆಸಿದ್ದಾರೆ. ಜೈಲು ಸುಪರಿಡೆಂಟ್ ಮತ್ತು ಮತ್ತೊಬ್ಬ ಅಧಿಕಾರಿ ಸೇರಿ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದು, ಆಹಾರ ಇನ್ನಿತರ ಸೌಲಭ್ಯ ನೀಡಬೇಕಿದ್ದರೆ ಲಂಚ ಕೇಳುತ್ತಿದ್ದರು ಎಂದು ಆರೋಪ ಕೇಳಿಬಂದಿದೆ.
ಅಲ್ಲದೆ, ಕೈದಿಗಳಿಗೆ ಕಳಪೆ ಆಹಾರವನ್ನು ಪೂರೈಸಲಾಗುತ್ತಿದೆ. ಕಾನೂನು ಪ್ರಕಾರ, ವಾರದಲ್ಲಿ ಒಮ್ಮೆಯಾದರೂ ಮಾಂಸ, ಮೀನಿನ ಪದಾರ್ಥ ಕೊಡಬೇಕೆಂದಿದೆ. ಆದರೆ, ಇಲ್ಲಿ ಕೋಳಿಯ ಕಾಲುಗಳನ್ನು ಹಾಕಿ ಸಾರು ಮಾಡಿ ಕೊಡುತ್ತಿದ್ದಾರೆ. ಜೈಲಿನ ಕೈದಿಗಳಿಗೆ ಸಿಗುತ್ತಿದ್ದ ಸೌಲಭ್ಯ, ಇನ್ನಿತರ ರೇಷನ್ ವಸ್ತುಗಳನ್ನು ಜೈಲಿನ ಅಧಿಕಾರಿಗಳು ತಮ್ಮ ಮನೆಗೆ ಒಯ್ಯುತ್ತಿದ್ದಾರೆ. ಪ್ರತಿಯೊಂದಕ್ಕೂ ಶ್ರೀನಿವಾಸ ಗೌಡ ಸೇರಿ ಜೈಲಿನ ಅಧಿಕಾರಿಗಳು ಕೈದಿಗಳ ಬಳಿಯಿಂದಲೇ ಹಣ ಕೇಳುತ್ತಿದ್ದಾರೆ ಎಂದು ಕೈದಿಯೊಬ್ಬ ಅಲ್ಲಿನ ಪರಿಸ್ಥಿತಿ ಹೇಳಿಕೊಂಡಿದ್ದಾನೆ.
ಜೈಲಿನ ಸ್ಥಿತಿಯ ಬಗ್ಗೆ ಕೈದಿಗಳು ಸೇರಿ ಜಿಲ್ಲಾ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಆಬಳಿಕ ಜಿಲ್ಲಾ ನ್ಯಾಯಾಧೀಶರು ಮತ್ತು ಕಾಪು ಶಾಸಕ ಲಾಲಾಜಿ ಮೆಂಡನ್ ಜೈಲಿಗೆ ಭೇಟಿ ನೀಡಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರಿಂದ ಕೈದಿಗಳು ತಮ್ಮ ನಿರಶನ ಅಂತ್ಯಗೊಳಿಸಿದ್ದಾರೆ.
Inmates at Kajaraguthu district prison at Hiriadka, Udupi here held a hunger strike accusing the jail superintendent Srinivas Gowda of misusing the facilities given to the prisoners.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm