ಬ್ರೇಕಿಂಗ್ ನ್ಯೂಸ್
15-05-21 12:53 pm Udupi Correspondent ಕರಾವಳಿ
ಉಡುಪಿ, ಮೇ 15: ಇಲ್ಲಿನ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳೇ ಸೇರಿ ಜೈಲಿನ ಸುಪರಿಡೆಂಟ್ ವಿರುದ್ಧ ಒಂದು ದಿನದ ಉಪವಾಸ ನಡೆಸಿದ್ದಾರೆ. ಜೈಲಿನ ಸುಪರಿಡೆಂಟ್ ಶ್ರೀನಿವಾಸ ಗೌಡ, ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ. ನಮ್ಮನ್ನು ಶೋಷಣೆ ಮಾಡುತ್ತಿದ್ದಾರೆಂದು ಆರೋಪಿಸಿ ಕೈದಿಗಳು ಉಪವಾಸ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದಿದ್ದಾರೆ.
ಸರಕಾರದಿಂದ ಕೈದಿಗಳಿಗೆ ಏನೆಲ್ಲಾ ಸೌಲಭ್ಯಗಳನ್ನು ಕೊಡುತ್ತಾರೋ, ಅವನ್ನು ಜೈಲು ಸುಪರಿಡೆಂಟ್ ಕೊಡುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಕೈದಿಗಳು ಸೇರಿಕೊಂಡು ಶುಕ್ರವಾರ ಇಡೀ ದಿನ ಆಹಾರ ಸ್ವೀಕರಿಸದೆ ನಿರಶನ ನಡೆಸಿದ್ದಾರೆ. ಜೈಲು ಸುಪರಿಡೆಂಟ್ ಮತ್ತು ಮತ್ತೊಬ್ಬ ಅಧಿಕಾರಿ ಸೇರಿ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದು, ಆಹಾರ ಇನ್ನಿತರ ಸೌಲಭ್ಯ ನೀಡಬೇಕಿದ್ದರೆ ಲಂಚ ಕೇಳುತ್ತಿದ್ದರು ಎಂದು ಆರೋಪ ಕೇಳಿಬಂದಿದೆ.
ಅಲ್ಲದೆ, ಕೈದಿಗಳಿಗೆ ಕಳಪೆ ಆಹಾರವನ್ನು ಪೂರೈಸಲಾಗುತ್ತಿದೆ. ಕಾನೂನು ಪ್ರಕಾರ, ವಾರದಲ್ಲಿ ಒಮ್ಮೆಯಾದರೂ ಮಾಂಸ, ಮೀನಿನ ಪದಾರ್ಥ ಕೊಡಬೇಕೆಂದಿದೆ. ಆದರೆ, ಇಲ್ಲಿ ಕೋಳಿಯ ಕಾಲುಗಳನ್ನು ಹಾಕಿ ಸಾರು ಮಾಡಿ ಕೊಡುತ್ತಿದ್ದಾರೆ. ಜೈಲಿನ ಕೈದಿಗಳಿಗೆ ಸಿಗುತ್ತಿದ್ದ ಸೌಲಭ್ಯ, ಇನ್ನಿತರ ರೇಷನ್ ವಸ್ತುಗಳನ್ನು ಜೈಲಿನ ಅಧಿಕಾರಿಗಳು ತಮ್ಮ ಮನೆಗೆ ಒಯ್ಯುತ್ತಿದ್ದಾರೆ. ಪ್ರತಿಯೊಂದಕ್ಕೂ ಶ್ರೀನಿವಾಸ ಗೌಡ ಸೇರಿ ಜೈಲಿನ ಅಧಿಕಾರಿಗಳು ಕೈದಿಗಳ ಬಳಿಯಿಂದಲೇ ಹಣ ಕೇಳುತ್ತಿದ್ದಾರೆ ಎಂದು ಕೈದಿಯೊಬ್ಬ ಅಲ್ಲಿನ ಪರಿಸ್ಥಿತಿ ಹೇಳಿಕೊಂಡಿದ್ದಾನೆ.
ಜೈಲಿನ ಸ್ಥಿತಿಯ ಬಗ್ಗೆ ಕೈದಿಗಳು ಸೇರಿ ಜಿಲ್ಲಾ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಆಬಳಿಕ ಜಿಲ್ಲಾ ನ್ಯಾಯಾಧೀಶರು ಮತ್ತು ಕಾಪು ಶಾಸಕ ಲಾಲಾಜಿ ಮೆಂಡನ್ ಜೈಲಿಗೆ ಭೇಟಿ ನೀಡಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರಿಂದ ಕೈದಿಗಳು ತಮ್ಮ ನಿರಶನ ಅಂತ್ಯಗೊಳಿಸಿದ್ದಾರೆ.
Inmates at Kajaraguthu district prison at Hiriadka, Udupi here held a hunger strike accusing the jail superintendent Srinivas Gowda of misusing the facilities given to the prisoners.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm