ಬ್ರೇಕಿಂಗ್ ನ್ಯೂಸ್
15-05-21 12:53 pm Udupi Correspondent ಕರಾವಳಿ
ಉಡುಪಿ, ಮೇ 15: ಇಲ್ಲಿನ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳೇ ಸೇರಿ ಜೈಲಿನ ಸುಪರಿಡೆಂಟ್ ವಿರುದ್ಧ ಒಂದು ದಿನದ ಉಪವಾಸ ನಡೆಸಿದ್ದಾರೆ. ಜೈಲಿನ ಸುಪರಿಡೆಂಟ್ ಶ್ರೀನಿವಾಸ ಗೌಡ, ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ. ನಮ್ಮನ್ನು ಶೋಷಣೆ ಮಾಡುತ್ತಿದ್ದಾರೆಂದು ಆರೋಪಿಸಿ ಕೈದಿಗಳು ಉಪವಾಸ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದಿದ್ದಾರೆ.
ಸರಕಾರದಿಂದ ಕೈದಿಗಳಿಗೆ ಏನೆಲ್ಲಾ ಸೌಲಭ್ಯಗಳನ್ನು ಕೊಡುತ್ತಾರೋ, ಅವನ್ನು ಜೈಲು ಸುಪರಿಡೆಂಟ್ ಕೊಡುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಕೈದಿಗಳು ಸೇರಿಕೊಂಡು ಶುಕ್ರವಾರ ಇಡೀ ದಿನ ಆಹಾರ ಸ್ವೀಕರಿಸದೆ ನಿರಶನ ನಡೆಸಿದ್ದಾರೆ. ಜೈಲು ಸುಪರಿಡೆಂಟ್ ಮತ್ತು ಮತ್ತೊಬ್ಬ ಅಧಿಕಾರಿ ಸೇರಿ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದು, ಆಹಾರ ಇನ್ನಿತರ ಸೌಲಭ್ಯ ನೀಡಬೇಕಿದ್ದರೆ ಲಂಚ ಕೇಳುತ್ತಿದ್ದರು ಎಂದು ಆರೋಪ ಕೇಳಿಬಂದಿದೆ.
ಅಲ್ಲದೆ, ಕೈದಿಗಳಿಗೆ ಕಳಪೆ ಆಹಾರವನ್ನು ಪೂರೈಸಲಾಗುತ್ತಿದೆ. ಕಾನೂನು ಪ್ರಕಾರ, ವಾರದಲ್ಲಿ ಒಮ್ಮೆಯಾದರೂ ಮಾಂಸ, ಮೀನಿನ ಪದಾರ್ಥ ಕೊಡಬೇಕೆಂದಿದೆ. ಆದರೆ, ಇಲ್ಲಿ ಕೋಳಿಯ ಕಾಲುಗಳನ್ನು ಹಾಕಿ ಸಾರು ಮಾಡಿ ಕೊಡುತ್ತಿದ್ದಾರೆ. ಜೈಲಿನ ಕೈದಿಗಳಿಗೆ ಸಿಗುತ್ತಿದ್ದ ಸೌಲಭ್ಯ, ಇನ್ನಿತರ ರೇಷನ್ ವಸ್ತುಗಳನ್ನು ಜೈಲಿನ ಅಧಿಕಾರಿಗಳು ತಮ್ಮ ಮನೆಗೆ ಒಯ್ಯುತ್ತಿದ್ದಾರೆ. ಪ್ರತಿಯೊಂದಕ್ಕೂ ಶ್ರೀನಿವಾಸ ಗೌಡ ಸೇರಿ ಜೈಲಿನ ಅಧಿಕಾರಿಗಳು ಕೈದಿಗಳ ಬಳಿಯಿಂದಲೇ ಹಣ ಕೇಳುತ್ತಿದ್ದಾರೆ ಎಂದು ಕೈದಿಯೊಬ್ಬ ಅಲ್ಲಿನ ಪರಿಸ್ಥಿತಿ ಹೇಳಿಕೊಂಡಿದ್ದಾನೆ.
ಜೈಲಿನ ಸ್ಥಿತಿಯ ಬಗ್ಗೆ ಕೈದಿಗಳು ಸೇರಿ ಜಿಲ್ಲಾ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಆಬಳಿಕ ಜಿಲ್ಲಾ ನ್ಯಾಯಾಧೀಶರು ಮತ್ತು ಕಾಪು ಶಾಸಕ ಲಾಲಾಜಿ ಮೆಂಡನ್ ಜೈಲಿಗೆ ಭೇಟಿ ನೀಡಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರಿಂದ ಕೈದಿಗಳು ತಮ್ಮ ನಿರಶನ ಅಂತ್ಯಗೊಳಿಸಿದ್ದಾರೆ.
Inmates at Kajaraguthu district prison at Hiriadka, Udupi here held a hunger strike accusing the jail superintendent Srinivas Gowda of misusing the facilities given to the prisoners.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm