ಬ್ರೇಕಿಂಗ್ ನ್ಯೂಸ್
15-05-21 12:53 pm Udupi Correspondent ಕರಾವಳಿ
ಉಡುಪಿ, ಮೇ 15: ಇಲ್ಲಿನ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳೇ ಸೇರಿ ಜೈಲಿನ ಸುಪರಿಡೆಂಟ್ ವಿರುದ್ಧ ಒಂದು ದಿನದ ಉಪವಾಸ ನಡೆಸಿದ್ದಾರೆ. ಜೈಲಿನ ಸುಪರಿಡೆಂಟ್ ಶ್ರೀನಿವಾಸ ಗೌಡ, ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ. ನಮ್ಮನ್ನು ಶೋಷಣೆ ಮಾಡುತ್ತಿದ್ದಾರೆಂದು ಆರೋಪಿಸಿ ಕೈದಿಗಳು ಉಪವಾಸ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದಿದ್ದಾರೆ.
ಸರಕಾರದಿಂದ ಕೈದಿಗಳಿಗೆ ಏನೆಲ್ಲಾ ಸೌಲಭ್ಯಗಳನ್ನು ಕೊಡುತ್ತಾರೋ, ಅವನ್ನು ಜೈಲು ಸುಪರಿಡೆಂಟ್ ಕೊಡುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಕೈದಿಗಳು ಸೇರಿಕೊಂಡು ಶುಕ್ರವಾರ ಇಡೀ ದಿನ ಆಹಾರ ಸ್ವೀಕರಿಸದೆ ನಿರಶನ ನಡೆಸಿದ್ದಾರೆ. ಜೈಲು ಸುಪರಿಡೆಂಟ್ ಮತ್ತು ಮತ್ತೊಬ್ಬ ಅಧಿಕಾರಿ ಸೇರಿ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದು, ಆಹಾರ ಇನ್ನಿತರ ಸೌಲಭ್ಯ ನೀಡಬೇಕಿದ್ದರೆ ಲಂಚ ಕೇಳುತ್ತಿದ್ದರು ಎಂದು ಆರೋಪ ಕೇಳಿಬಂದಿದೆ.
ಅಲ್ಲದೆ, ಕೈದಿಗಳಿಗೆ ಕಳಪೆ ಆಹಾರವನ್ನು ಪೂರೈಸಲಾಗುತ್ತಿದೆ. ಕಾನೂನು ಪ್ರಕಾರ, ವಾರದಲ್ಲಿ ಒಮ್ಮೆಯಾದರೂ ಮಾಂಸ, ಮೀನಿನ ಪದಾರ್ಥ ಕೊಡಬೇಕೆಂದಿದೆ. ಆದರೆ, ಇಲ್ಲಿ ಕೋಳಿಯ ಕಾಲುಗಳನ್ನು ಹಾಕಿ ಸಾರು ಮಾಡಿ ಕೊಡುತ್ತಿದ್ದಾರೆ. ಜೈಲಿನ ಕೈದಿಗಳಿಗೆ ಸಿಗುತ್ತಿದ್ದ ಸೌಲಭ್ಯ, ಇನ್ನಿತರ ರೇಷನ್ ವಸ್ತುಗಳನ್ನು ಜೈಲಿನ ಅಧಿಕಾರಿಗಳು ತಮ್ಮ ಮನೆಗೆ ಒಯ್ಯುತ್ತಿದ್ದಾರೆ. ಪ್ರತಿಯೊಂದಕ್ಕೂ ಶ್ರೀನಿವಾಸ ಗೌಡ ಸೇರಿ ಜೈಲಿನ ಅಧಿಕಾರಿಗಳು ಕೈದಿಗಳ ಬಳಿಯಿಂದಲೇ ಹಣ ಕೇಳುತ್ತಿದ್ದಾರೆ ಎಂದು ಕೈದಿಯೊಬ್ಬ ಅಲ್ಲಿನ ಪರಿಸ್ಥಿತಿ ಹೇಳಿಕೊಂಡಿದ್ದಾನೆ.
ಜೈಲಿನ ಸ್ಥಿತಿಯ ಬಗ್ಗೆ ಕೈದಿಗಳು ಸೇರಿ ಜಿಲ್ಲಾ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಆಬಳಿಕ ಜಿಲ್ಲಾ ನ್ಯಾಯಾಧೀಶರು ಮತ್ತು ಕಾಪು ಶಾಸಕ ಲಾಲಾಜಿ ಮೆಂಡನ್ ಜೈಲಿಗೆ ಭೇಟಿ ನೀಡಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರಿಂದ ಕೈದಿಗಳು ತಮ್ಮ ನಿರಶನ ಅಂತ್ಯಗೊಳಿಸಿದ್ದಾರೆ.
Inmates at Kajaraguthu district prison at Hiriadka, Udupi here held a hunger strike accusing the jail superintendent Srinivas Gowda of misusing the facilities given to the prisoners.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm