ಬ್ರೇಕಿಂಗ್ ನ್ಯೂಸ್
15-05-21 09:05 pm Udupi Correspondent ಕರಾವಳಿ
ಉಡುಪಿ, ಮೇ 15: ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ತೌಕ್ತೆ ಚಂಡಮಾರುತದಿಂದಾಗಿ ಕರಾವಳಿಯಲ್ಲಿ ಕಂಡು ಕೇಳರಿಯದ ರೀತಿ ಸಮುದ್ರ ಅಬ್ಬರಿಸತೊಡಗಿದ್ದು ಉಡುಪಿ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ ಎರಡು ದಿನ ಉಡುಪಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಮಾಡಲಾಗಿದೆ. ಮೇ 16 ಮತ್ತು 17 ರ ವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ದಿನಕ್ಕೆ 65-115 ಮಿಮೀ ಮಳೆ ಸಾಧ್ಯತೆಯಿದೆ.


ಇದೇ ವೇಳೆ, ಸಮುದ್ರ, ನದಿ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ. ಮಲ್ಪೆ- ಪಡುಕೆರೆ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಸಮುದ್ರ ಭೋರ್ಗರೆಯುತ್ತಿದ್ದು ಅಲ್ಲಿನ ನಿವಾಸಿಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.
ಮಲ್ಪೆ ಪಡುಕೆರೆಯಲ್ಲಿ ಮೀನುಗಾರಿಕಾ ರಸ್ತೆಗಳ ಮೇಲೆ ಸಮುದ್ರ ನೀರು ಬಂದಿದ್ದು ಕಡಲ ತೀರದ ನಿವಾಸಿಗಳಿಗೆ ಅಪಾಯದ ಮುನ್ನೆಚ್ಚರಿಕೆ ನೀಡಲಾಗಿದೆ.
ಸ್ಥಳಕ್ಕೆ ಉಡುಪಿ ಶಾಸಕ ರಘುಪತಿ ಭಟ್, ಪಡುಕೆರೆಯ ಮೀನುಗಾರರ ನಿವಾಸಗಳಿಗೆ ಭೇಟಿ ನೀಡಿದ್ದಾರೆ. ತೀರದ ನಿವಾಸಿಗಳನ್ನು ಸ್ಥಳಾಂತರಿಸಲು ಮನವೊಲಿಸಿದ್ದಾರೆ.


ಸಂಜೆಯ ನಂತರ ಮತ್ತೆ ನೀರಿನ ಅಬ್ಬರ ಇರುವ ಸಾಧ್ಯತೆ ಇರುವುದರಿಂದ ತೀರದ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಇದಕ್ಕಾಗಿ ಮಲ್ಪೆಯ ಏಳೂರು ಮೊಗವೀರ ಭವನದಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ.
ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿ ಎಂಟು ಮನೆಗಳಿಗೆ ಹಾನಿಯಾಗಿದ್ದು ಐದು ಮೀನುಗಾರಿಕೆ ಮತ್ತು ಕೃಷಿ ಶೆಡ್ ಗಳಿಗೆ ಭಾಗಶಃ ಹಾನಿಯಾಗಿದೆ. ಇದೇ ವೇಳೆ, ಕಾಪು ತಾಲೂಕಿನಲ್ಲಿ ರಮೇಶ್ (51) ಎಂಬ ಕೃಷಿಕ ವಿದ್ಯುತ್ ತಂತಿ ತುಳಿದು ಸಾವು ಕಂಡಿದ್ದಾರೆ. ಬ್ರಹ್ಮಾವರದ ಕೋಡಿ, ಕಾಪು ಸಮುದ್ರ ತೀರದಲ್ಲಿ ಹೈ ಎಲರ್ಟ್ ಮಾಡಲಾಗಿದೆ. ಅಗತ್ಯ ಬಿದ್ದರೆ ಆಯಾ ಭಾಗದಲ್ಲಿ ಪುನರ್ವಸತಿ ಕೇಂದ್ರ ಕಲ್ಪಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಾಹಿತಿ ನೀಡಿದ್ದಾರೆ.
With Cyclone Tauktae forming over the Arabian Sea, heavy rains continued to lash Udupi district since May 15 morning. Farmer dies of electrocution due to heavy rains of cyclone in Udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm