ಬ್ರೇಕಿಂಗ್ ನ್ಯೂಸ್
15-05-21 10:27 pm Mangaluru Correspondent ಕರಾವಳಿ
ಮಂಗಳೂರು, ಮೇ 15: ತೀವ್ರ ಚಂಡಮಾರುತದ ಪರಿಣಾಮ ಎನ್ಎಂಪಿಟಿ ಬಂದರಿನ ಬಳಿ ಸಮುದ್ರ ಮಧ್ಯೆ ಒಂಬತ್ತು ಕಾರ್ಮಿಕರಿದ್ದ ಟಗ್ ಮಗುಚಿ ಬಿದ್ದಿದ್ದು ಒಬ್ಬನ ಶವ ಪತ್ತೆಯಾಗಿದೆ. ಇಬ್ಬರನ್ನು ರಕ್ಷಣೆ ಮಾಡಲಾಗಿದೆ.
ಮಂಗಳೂರಿನ ಎಂಆರ್ ಪಿಎಲ್ ರಿಫೈನರಿಗೆ ಸೇರಿದ ಟಗ್ ಬೋಟ್ ಆಗಿದ್ದು ಬೃಹದ್ಗಾತ್ರದ ಹಡಗುಗಳಿಂದ ಕಚ್ಚಾತೈಲ ಇಳಿಸಲು ಬಳಸಲಾಗುತ್ತಿತ್ತು. ಸಮುದ್ರ ಮಧ್ಯೆ ಕಾರ್ಯಾಚರಣೆ ವೇಳೆ ಟಗ್ ತೀವ್ರ ಗಾಳಿಗೆ ಮಗುಚಿದ್ದು ಕಾರ್ಮಿಕರಾಗಿದ್ದ ಹೇಮಚಂದ್ರ ಜಾ ಎಂಬವರ ಶವ ಪಡುಬಿದ್ರೆಯಲ್ಲಿ ಪತ್ತೆಯಾಗಿದೆ.



ಟಗ್ ಬೋಟಿನಲ್ಲಿ ಒಟ್ಟು ಒಂಬತ್ತು ಜನರು ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಮಂಗಳೂರಿನ ಪಣಂಬೂರಿನ ಬಂದರಿನಿಂದ ಕೆಲವೇ ನಾಟಿಕಲ್ ಮೈಲು ದೂರದಲ್ಲಿ ಘಟನೆ ನಡೆದಿದೆ.
ಚಂಡಮಾರುತದಿಂದ ಎದ್ದ ಬೃಹತ್ ಅಲೆಗೆ ಟಗ್ ಮಗುಚಿ ಬಿದ್ದಿದೆ ಎನ್ನಲಾಗುತ್ತಿದ್ದು ಬೋಟಿನಲ್ಲಿದ್ದ 9 ಜನರು ನೀರುಪಾಲಾಗಿದ್ದರು. ಈ ಪೈಕಿ ಇಬ್ಬರು ಟ್ಯೂಬಿನ ಸಹಾಯದಿಂದ ಸತತ ಎಂಟು ಗಂಟೆ ಕಾಲ ಈಜಿ ಸಾವಿನ ದವಡೆಯಿಂದ ಪಾರಾಗಿದ್ದಾರೆ.
ಸಮುದ್ರ ಮಧ್ಯೆ ಉಡುಪಿಯ ಮಟ್ಟು ಕೊಪ್ಪಲು ಎಂಬಲ್ಲಿ ಕಾಣಿಸಿಕೊಂಡ ಇಬ್ಬರನ್ನು ಸ್ಥಳೀಯರು ದೋಣಿ ಮೂಲಕ ದಡಕ್ಕೆ ಎಳೆದು ರಕ್ಷಿಸಿದ್ದಾರೆ. ಉಳಿದವರ ಪತ್ತೆಗಾಗಿ ಕರಾವಳಿ ಕಾವಲು ಪಡೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ಉಡುಪಿಯಲ್ಲಿ ಆಸ್ಪತ್ರೆಗೆ ದಾಖಲು
ಟಗ್ ಮಗುಚಿ, ಎಂಟು ಗಂಟೆ ಕಾಲ ಈಜಿ ಜೀವ ಉಳಿಸಿಕೊಂಡ ಇಬ್ಬರಿಗೆ ಉಡುಪಿಯ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಪಶ್ಚಿಮ ಬಂಗಾಳ ಮೂಲದ ಮೊಮಿರುಲ್ ಮುಲ್ಲಾ( 34) ಹಾಗೂ ಕರೀಮುಲ್ಲಾ ಶೇಕ್ (24) ಸಾವಿನ ದವಡೆಗೆ ಸಿಲುಕಿ ಪಾರಾಗಿ ಬಂದವರು. ಮಂಗಳೂರಿನ ಸುರತ್ಕಲ್ ನಿಂದ 17 ನಾಟಿಕಲ್ ದೂರದಲ್ಲಿ ದುರಂತ ನಡೆದಿತ್ತು.
Six fishermen go missing after Mangalore MRPL Tug boat capsizes due to Cyclone Tauktae in which one has been found dead and two have been rescued and have been admitted to govt hospital in Udupi. The search is on for the three.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm