ಬ್ರೇಕಿಂಗ್ ನ್ಯೂಸ್
16-05-21 12:45 pm Mangaluru Correspondent ಕರಾವಳಿ
ಮಂಗಳೂರು, ಮೇ 16: ಎಂಆರ್ ಪಿಎಲ್ ಅಡಿ ಗುತ್ತಿಗೆ ಕೆಲಸ ಮಾಡುತ್ತಿರುವ ಮತ್ತೊಂದು ಟಗ್ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿದ್ದು ಅದರಲ್ಲಿ ಒಂಬತ್ತು ಮಂದಿ ಕಾರ್ಮಿಕರಿದ್ದಾರೆಂಬ ಮಾಹಿತಿಯಿದೆ. ಟಗ್ ಮತ್ತು ಕಾರ್ಮಿಕರ ರಕ್ಷಣೆಗೆ ಕೋಸ್ಟ್ ಗಾರ್ಡ್ ಪಡೆ ಕಾರ್ಯಾಚರಣೆ ನಡೆಸುತ್ತಿದೆ.
ಮಂಗಳೂರಿನ ಎಂಆರ್ ಪಿಎಲ್ ಕಚ್ಚಾ ತೈಲ ಹೊತ್ತು ತರುವ ಬೃಹತ್ ಹಡಗುಗಳಿಂದ ತೈಲ ಪೂರೈಕೆಗೆ ಸಹಕರಿಸಲು ಟಗ್ ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಾರೆ. ಎನ್ಎಂಪಿಟಿ ಬಂದರು ವ್ಯಾಪ್ತಿಗೆ ಬರುವ ಟಗ್ ನಲ್ಲಿ ಜನರೇಟರ್ ಸಮಸ್ಯೆ ಆಗಿ ಇಂಜಿನ್ ಕೆಟ್ಟು ಹೋಗಿದ್ದು ಚಂಡಮಾರುತದ ನಡುವೆ ಅಪಾಯಕ್ಕೀಡಾಗಿದೆ.

ಚಂಡಮಾರುತದ ಮುನ್ಸೂಚನೆ ಇದ್ದರೂ, ಎನ್ಎಂಪಿಟಿ ಬಂದರು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಟಗ್ ಅನ್ನು ದಡಕ್ಕೆ ತರುವ ಕೆಲಸ ಮಾಡಿರಲಿಲ್ಲ. ಶನಿವಾರ ಟಗ್ ಅಪಾಯಕ್ಕೀಡಾದ ಬಗ್ಗೆ ಕೋಸ್ಟ್ ಗಾರ್ಡ್ ಪಡೆಗೆ ಮಾಹಿತಿ ನೀಡಲಾಗಿದ್ದು ಐಸಿಜಿ ಶಿಪ್ ಮೂಲಕ ಕಾರ್ಯಾಚರಣೆಗೆ ಪ್ರಯತ್ನ ನಡೆದಿದೆ. ಆದರೆ ಸಮುದ್ರ ಬಿರುಸಾಗಿರುವುದರಿಂದ ಟಗ್ ಇರುವಲ್ಲಿಗೆ ಹಡಗು ತೆರಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ ದೂರದಲ್ಲಿ ನಿಂತು ಟಗ್ ಬಗ್ಗೆ ನಿಗಾ ಇಡಲಾಗುತ್ತಿದೆ.
ಸದ್ಯಕ್ಕೆ ಪಡುಬಿದ್ರಿ ಬಳಿಯ ಸಮುದ್ರದಲ್ಲಿ ಅಂದರೆ, ಮಂಗಳೂರಿನ ಎನ್ಎಂಪಿಟಿ ಬಂದರಿನಿಂದ 15 ನಾಟಿಕಲ್ ದೂರದಲ್ಲಿ ಟಗ್ ಉಳಿದುಕೊಂಡಿದ್ದು ಅದರಲ್ಲಿರುವ ಒಂಬತ್ತು ಕಾರ್ಮಿಕರು ಸುರಕ್ಷಿತವಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಬೆಳಗ್ಗಿನ ಮಾಹಿತಿ ಪ್ರಕಾರ, ಚಂಡಮಾರುತದ ಅಬ್ಬರ ಕಡಿಮೆಯಾಗಿದ್ದು ಸಮುದ್ರ ಶಾಂತ ಸ್ಥಿತಿಗೆ ಮರಳುತ್ತಿದೆ. ಚಂಡಮಾರುತ ಉತ್ತರ ಭಾಗದತ್ತ ತೆರಳುತ್ತಿರುವುದರಿಂದ ಸಮುದ್ರದ ಅಬ್ಬರ ಇಂದು ಸಂಜೆ ಹೊತ್ತಿಗೆ ಕಡಿಮೆಯಾಗಲಿದ್ದು ಆನಂತರ ಟಗ್ ಅನ್ನು ಅಪಾಯದಿಂದ ರಕ್ಷಿಸುವ ಕಾರ್ಯಾಚರಣೆ ನಡೆಯಲಿದೆ. ಸದ್ಯಕ್ಕೆ ಎರಡು ಕಿಮೀ ಅಂತರದಲ್ಲಿ ಕೋಸ್ಟ್ ಗಾರ್ಡ್ ಪಡೆ ಟಗ್ ಬಗ್ಗೆ ನಿಗಾ ಇಟ್ಟಿದೆ ಎನ್ನುವ ಮಾಹಿತಿ ಕೋಸ್ಟ್ ಗಾರ್ಡ್ ನಿಂದ ಸಿಕ್ಕಿದೆ.
Read: ಎಂಆರ್ ಪಿಎಲ್ ಟಗ್ ಬೋಟ್ ಸಮುದ್ರ ಮಧ್ಯೆ ಪಲ್ಟಿ ; ಆರು ಮಂದಿ ನಾಪತ್ತೆ , ಒಬ್ಬನ ಶವ ಪತ್ತೆ , ಇಬ್ಬರು ಪವಾಡಸದೃಶ ಪಾರು !
Mangalore MRPL tugboat named Alliance with 9 fishermen stranded in danger by cyclone tauktae near Moodbidri. The Mangalore Coast guard ship has reached the spot for the rescue operation. Last night another Tugboat with 5 fishermen capsized in which one was found dead.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm