ಬ್ರೇಕಿಂಗ್ ನ್ಯೂಸ್
16-05-21 12:45 pm Mangaluru Correspondent ಕರಾವಳಿ
ಮಂಗಳೂರು, ಮೇ 16: ಎಂಆರ್ ಪಿಎಲ್ ಅಡಿ ಗುತ್ತಿಗೆ ಕೆಲಸ ಮಾಡುತ್ತಿರುವ ಮತ್ತೊಂದು ಟಗ್ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿದ್ದು ಅದರಲ್ಲಿ ಒಂಬತ್ತು ಮಂದಿ ಕಾರ್ಮಿಕರಿದ್ದಾರೆಂಬ ಮಾಹಿತಿಯಿದೆ. ಟಗ್ ಮತ್ತು ಕಾರ್ಮಿಕರ ರಕ್ಷಣೆಗೆ ಕೋಸ್ಟ್ ಗಾರ್ಡ್ ಪಡೆ ಕಾರ್ಯಾಚರಣೆ ನಡೆಸುತ್ತಿದೆ.
ಮಂಗಳೂರಿನ ಎಂಆರ್ ಪಿಎಲ್ ಕಚ್ಚಾ ತೈಲ ಹೊತ್ತು ತರುವ ಬೃಹತ್ ಹಡಗುಗಳಿಂದ ತೈಲ ಪೂರೈಕೆಗೆ ಸಹಕರಿಸಲು ಟಗ್ ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಾರೆ. ಎನ್ಎಂಪಿಟಿ ಬಂದರು ವ್ಯಾಪ್ತಿಗೆ ಬರುವ ಟಗ್ ನಲ್ಲಿ ಜನರೇಟರ್ ಸಮಸ್ಯೆ ಆಗಿ ಇಂಜಿನ್ ಕೆಟ್ಟು ಹೋಗಿದ್ದು ಚಂಡಮಾರುತದ ನಡುವೆ ಅಪಾಯಕ್ಕೀಡಾಗಿದೆ.

ಚಂಡಮಾರುತದ ಮುನ್ಸೂಚನೆ ಇದ್ದರೂ, ಎನ್ಎಂಪಿಟಿ ಬಂದರು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಟಗ್ ಅನ್ನು ದಡಕ್ಕೆ ತರುವ ಕೆಲಸ ಮಾಡಿರಲಿಲ್ಲ. ಶನಿವಾರ ಟಗ್ ಅಪಾಯಕ್ಕೀಡಾದ ಬಗ್ಗೆ ಕೋಸ್ಟ್ ಗಾರ್ಡ್ ಪಡೆಗೆ ಮಾಹಿತಿ ನೀಡಲಾಗಿದ್ದು ಐಸಿಜಿ ಶಿಪ್ ಮೂಲಕ ಕಾರ್ಯಾಚರಣೆಗೆ ಪ್ರಯತ್ನ ನಡೆದಿದೆ. ಆದರೆ ಸಮುದ್ರ ಬಿರುಸಾಗಿರುವುದರಿಂದ ಟಗ್ ಇರುವಲ್ಲಿಗೆ ಹಡಗು ತೆರಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ ದೂರದಲ್ಲಿ ನಿಂತು ಟಗ್ ಬಗ್ಗೆ ನಿಗಾ ಇಡಲಾಗುತ್ತಿದೆ.
ಸದ್ಯಕ್ಕೆ ಪಡುಬಿದ್ರಿ ಬಳಿಯ ಸಮುದ್ರದಲ್ಲಿ ಅಂದರೆ, ಮಂಗಳೂರಿನ ಎನ್ಎಂಪಿಟಿ ಬಂದರಿನಿಂದ 15 ನಾಟಿಕಲ್ ದೂರದಲ್ಲಿ ಟಗ್ ಉಳಿದುಕೊಂಡಿದ್ದು ಅದರಲ್ಲಿರುವ ಒಂಬತ್ತು ಕಾರ್ಮಿಕರು ಸುರಕ್ಷಿತವಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಬೆಳಗ್ಗಿನ ಮಾಹಿತಿ ಪ್ರಕಾರ, ಚಂಡಮಾರುತದ ಅಬ್ಬರ ಕಡಿಮೆಯಾಗಿದ್ದು ಸಮುದ್ರ ಶಾಂತ ಸ್ಥಿತಿಗೆ ಮರಳುತ್ತಿದೆ. ಚಂಡಮಾರುತ ಉತ್ತರ ಭಾಗದತ್ತ ತೆರಳುತ್ತಿರುವುದರಿಂದ ಸಮುದ್ರದ ಅಬ್ಬರ ಇಂದು ಸಂಜೆ ಹೊತ್ತಿಗೆ ಕಡಿಮೆಯಾಗಲಿದ್ದು ಆನಂತರ ಟಗ್ ಅನ್ನು ಅಪಾಯದಿಂದ ರಕ್ಷಿಸುವ ಕಾರ್ಯಾಚರಣೆ ನಡೆಯಲಿದೆ. ಸದ್ಯಕ್ಕೆ ಎರಡು ಕಿಮೀ ಅಂತರದಲ್ಲಿ ಕೋಸ್ಟ್ ಗಾರ್ಡ್ ಪಡೆ ಟಗ್ ಬಗ್ಗೆ ನಿಗಾ ಇಟ್ಟಿದೆ ಎನ್ನುವ ಮಾಹಿತಿ ಕೋಸ್ಟ್ ಗಾರ್ಡ್ ನಿಂದ ಸಿಕ್ಕಿದೆ.
Read: ಎಂಆರ್ ಪಿಎಲ್ ಟಗ್ ಬೋಟ್ ಸಮುದ್ರ ಮಧ್ಯೆ ಪಲ್ಟಿ ; ಆರು ಮಂದಿ ನಾಪತ್ತೆ , ಒಬ್ಬನ ಶವ ಪತ್ತೆ , ಇಬ್ಬರು ಪವಾಡಸದೃಶ ಪಾರು !
Mangalore MRPL tugboat named Alliance with 9 fishermen stranded in danger by cyclone tauktae near Moodbidri. The Mangalore Coast guard ship has reached the spot for the rescue operation. Last night another Tugboat with 5 fishermen capsized in which one was found dead.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm