ಬ್ರೇಕಿಂಗ್ ನ್ಯೂಸ್
16-05-21 08:41 pm Mangaluru Correspondent ಕರಾವಳಿ
ಮಂಗಳೂರು, ಮೇ 16: ಎಂಆರ್ ಪಿಎಲ್ ಗೆ ಸೇರಿದ ಮತ್ತೊಂದು ಟಗ್ ನಲ್ಲಿರುವ ಕಾರ್ಮಿಕರ ರಕ್ಷಣೆಗೆ ಭಾರತೀಯ ನೌಕಾಪಡೆಯಿಂದ ಹೆಲಿಕಾಪ್ಟರ್ ಬಳಸಲು ಜಿಲ್ಲಾಡಳಿತ ಮುಂದಾಗಿದೆ. ರಾಜ್ಯ ಸರಕಾರದ ಮೂಲಕ ನೌಕಾಪಡೆಯ ನೆರವು ಪಡೆಯಲಾಗಿದ್ದು, ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯ ನಡೆಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ ನೀಡಿದ್ದಾರೆ.
ಕೋರಮಂಡಲ್ ಹೆಸರಿನ ಟಗ್ ಎನ್ಎಂಪಿಟಿ ಬಂದರು ವ್ಯಾಪ್ತಿಯಲ್ಲಿ ಎಂಆರ್ ಪಿಎಲ್ ನಿಂದ ಕಚ್ಚಾ ತೈಲ ಸಾಗಾಟದ ಕೆಲಸ ಮಾಡಲು ಗುತ್ತಿಗೆ ಪಡೆದಿತ್ತು. ಆದರೆ, ಇದರ ಗುತ್ತಿಗೆ ಕಾರ್ಯ ಮುಗಿದಿದ್ದರೂ ಸಮುದ್ರ ಮಧ್ಯೆ ಲಂಗರು ಹಾಕಿದ್ದರಿಂದ ಚಂಡಮಾರುತಕ್ಕೆ ಸಿಲುಕಿತ್ತು. ಒಂಬತ್ತು ಸಿಬಂದಿಗಳಿದ್ದ ಕೋರಮಂಡಲ್ ಟಗ್ ನೀರಿನಲ್ಲಿ ಗಾಳಿಯೊಂದಿಗೆ ಚಲಿಸುತ್ತಿದ್ದು ಶನಿವಾರ ರಾತ್ರಿಯಿಂದ ಒಂದೂವರೆ ಮೈಲ್ ದೂರಕ್ಕೆ ಚಲಿಸಿದೆ. ಸದ್ಯ ಪಡುಬಿದ್ರಿ ಬಳಿಯಿಂದ 5 ಮೈಲ್ ದೂರದಲ್ಲಿರುವ ಸಮುದ್ರ ಮಧ್ಯದ ಮೂಲ್ಕಿ ರಾಕ್ ಎಂಬ ಜಾಗದಲ್ಲಿ ಟಗ್ ಸಿಲುಕಿದೆ ಎನ್ನುವ ಮಾಹಿತಿಗಳಿವೆ.


ಕೋಸ್ಟ್ ಗಾರ್ಡ್ ನವರು ಅರ್ಧ ಕಿಮೀ ಅಂತರದಲ್ಲಿ ಟಗ್ ಮತ್ತು ಕಾರ್ಮಿಕರ ಬಗ್ಗೆ ನಿಗಾ ಇಟ್ಟಿದ್ದಾರೆ. ಆದರೆ, ಭಾರೀ ಗಾಳಿ ಬೀಸುತ್ತಿರುವುದು ಮತ್ತು ಐದಾರು ಮೀಟರ್ ಎತ್ತರಕ್ಕೆ ಅಲೆಗಳು ಏಳುತ್ತಿರುವುದರಿಂದ ಟಗ್ ಬಳಿ ಹೋಗುವುದು ಸಾಧ್ಯವಾಗದೆ ಹವಾಮಾನ ಸರಿಯಾಗಲು ಕಾಯುತ್ತಿದ್ದಾರೆ. ಹವಾಮಾನ ಸರಿಯಾದ ಕೂಡಲೇ ಗೋವಾದಿಂದ ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುವುದು. ಈ ಬಗ್ಗೆ ಈಗಾಗ್ಲೇ ರಾಜ್ಯದ ಮುಖ್ಯಮಂತ್ರಿ ಕಚೇರಿಯಿಂದ ಅನುಮತಿ ಪಡೆದು, ನೌಕಾಪಡೆಯಿಂದ ನೆರವು ಕೇಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮೂಲ್ಕಿ ರಾಕ್ ನಲ್ಲಿ ಇರುವ ಬಂಡೆಕಲ್ಲಿಗೆ ಏಂಕರ್ ಹಾಕಿ ಟಗ್ ಅನ್ನು ನಿಯಂತ್ರಣಕ್ಕೆ ತರಲಾಗಿದೆ. ಅದರಲ್ಲಿರುವ ಒಂಬತ್ತು ಮಂದಿ ಕಾರ್ಮಿಕರನ್ನು ಕೂಡಲೇ ರಕ್ಷಣೆ ಮಾಡಲು ಆದ್ಯತೆ ನೀಡಲಾಗಿದೆ. ಇದೇ ವೇಳೆ, ಎನ್ಎಂಪಿಟಿ ಬಂದರು ಅಥವಾ ಎಂಆರ್ ಪಿಎಲ್ ಅಧಿಕಾರಿಗಳ ಜೊತೆ ಜಿಲ್ಲಾಡಳಿತದಿಂದ ಸಭೆ ನಡೆಸಲಾಗಿದೆ. ಯಾಕಾಗಿ ಟಗ್ ಸಮುದ್ರ ಮಧ್ಯೆ ಉಳಿದುಕೊಂಡಿತ್ತು ಎನ್ನುವುದರ ಬಗ್ಗೆ ವರದಿ ಕೇಳಿದ್ದೇವೆ. ಆ ಬಗ್ಗೆ ಮಾಹಿತಿ ಪಡೆದು ಸರಕಾರಕ್ಕೆ ವರದಿ ನೀಡುವುದರ ಜೊತೆಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
ಪಡುಬಿದ್ರಿ ಬಳಿ ಅಪಾಯಕ್ಕೀಡಾದ ಮತ್ತೊಂದು ಟಗ್ ; ಎನ್ಎಂಪಿಟಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾರ್ಮಿಕರಿಗೆ ಆಪತ್ತು !
ಎಂಆರ್ ಪಿಎಲ್ ಟಗ್ ಬೋಟ್ ಸಮುದ್ರ ಮಧ್ಯೆ ಪಲ್ಟಿ ; ಆರು ಮಂದಿ ನಾಪತ್ತೆ , ಒಬ್ಬನ ಶವ ಪತ್ತೆ , ಇಬ್ಬರು ಪವಾಡಸದೃಶ ಪಾರು !
Mangalore MRPL Stranded tugboat found near Mulki Rock helicopter rescue operation to be done if weather conditions are clear said Mangalore DC DR Rajendra Kumar.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm