ಬ್ರೇಕಿಂಗ್ ನ್ಯೂಸ್
16-05-21 09:53 pm Mangaluru Correspondent ಕರಾವಳಿ
ಮಂಗಳೂರು, ಮೇ 16: ಸಮುದ್ರ ಮಧ್ಯೆ ಸಿಕ್ಕಿಬಿದ್ದು ನೀರುಪಾಲಾಗಿದ್ದ ಐಎನ್ಎಸ್ ಎಲಯನ್ಸ್ ಎನ್ನುವ ಟಗ್ ನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಪವಾಡ ಸದೃಶ ಸಮುದ್ರದಲ್ಲಿ ಈಜಾಡಿ ಬದುಕಿ ಬಂದಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಇದನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸ್ಪಷ್ಟ ಪಡಿಸಿದ್ದಾರೆ.
ಎಲಯನ್ಸ್ ಟಗ್ ನಲ್ಲಿ ಎಂಟು ಜನರಿದ್ದು, ಅದರಲ್ಲಿದ್ದ ಇಬ್ಬರು ಟೈರಿನಲ್ಲಿ ಈಜುತ್ತಾ ಶನಿವಾರ ಉಡುಪಿ ಬಳಿಯ ಸಮುದ್ರದಲ್ಲಿ ದಡ ಸೇರಿದ್ದರು. ಇಂದು ಮತ್ತೊಬ್ಬ ಅದೇ ರೀತಿ ಈಜುತ್ತಲೇ ದಡ ಸೇರಿದ್ದಾನೆ. ಶನಿವಾರ ಒಬ್ಬನ ಶವ ಪಡುಬಿದ್ರಿ ಬಳಿ ಸಿಕ್ಕಿದ್ದರೆ, ಇಂದು ಮತ್ತೊಂದು ಶವ ಸಿಕ್ಕಿದೆ. ಇನ್ನೂ ಮೂವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆದಿದೆ. ಬದುಕಿ ಬಂದ ಮೂವರು ಮಲ್ಪೆ ಮತ್ತು ಉಡುಪಿಯಲ್ಲಿ ಆಸ್ಪತ್ರೆಯಲ್ಲಿದ್ದು ಸುರಕ್ಷಿತವಾಗಿದ್ದಾರೆ. ಇದೇ ವೇಳೆ, ಎಲಯನ್ಸ್ ಟಗ್ ಪಡುಬಿದ್ರಿ ಸಮುದ್ರದಲ್ಲಿ ದಡಕ್ಕೆ ಬಂದಿದ್ದು ಅದರಲ್ಲಿ ಯಾರಾದ್ರೂ ಸಿಕ್ಕಿಕೊಂಡಿದ್ದಾರೆಯೇ ಎಂದು ಕೋಸ್ಟ್ ಗಾರ್ಡ್ ಸಿಬಂದಿ ತನಿಖೆ ನಡೆಸುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಮಂಗಳೂರಿನ ಎಂಆರ್ ಪಿಎಲ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಅಲಯನ್ಸ್ ಟಗ್ ಶುಕ್ರವಾರ ಕೆಲಸ ಮುಗಿಸಿ, ನಿರ್ಗಮಿಸುವ ಹಾದಿಯಲ್ಲಿತ್ತು. ಚಂಡಮಾರುತ ಹಿನ್ನೆಲೆಯಲ್ಲಿ ಎನ್ಎಂಪಿಟಿ ಬಂದರಿನಿಂದ ದಡಕ್ಕೆ ಬರುವಂತೆ ಸೂಚನೆ ನೀಡಲಾಗಿತ್ತೆಂದು ಅಲ್ಲಿನ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಅವರು ಯಾಕೆ ಬಂದಿರಲಿಲ್ಲ ಎನ್ನುವುದು ಗೊತ್ತಾಗಿಲ್ಲ. ಈ ಬಗ್ಗೆ ಎನ್ಎಂಪಿಟಿ ಮತ್ತು ಎಂಆರ್ ಪಿಎಲ್ ಅಧಿಕಾರಿಗಳಿಂದ ವರದಿ ಕೇಳಿದ್ದೇನೆ. ನಿರ್ಲಕ್ಷ್ಯದಿಂದ ಈ ಘಟನೆ ಆಗಿದೆಯೋ ಎನ್ನುವ ಬಗ್ಗೆ ರಾಜ್ಯ ಸರಕಾರಕ್ಕೆ ವರದಿ ನೀಡಲಿದ್ದೇನೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
READ: ಎಂಆರ್ ಪಿಎಲ್ ಟಗ್ ಬೋಟ್ ಸಮುದ್ರ ಮಧ್ಯೆ ಪಲ್ಟಿ ; ಆರು ಮಂದಿ ನಾಪತ್ತೆ , ಒಬ್ಬನ ಶವ ಪತ್ತೆ , ಇಬ್ಬರು ಪವಾಡಸದೃಶ ಪಾರು !
MRPL Tug boat capsized due to Cyclone Tauktae one Missing Fishermen swims ashore says Mangalore Dc Dr Rajendra Kumar. The search operation is going on for the missing three.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm