ಬ್ರೇಕಿಂಗ್ ನ್ಯೂಸ್
16-05-21 09:53 pm Mangaluru Correspondent ಕರಾವಳಿ
ಮಂಗಳೂರು, ಮೇ 16: ಸಮುದ್ರ ಮಧ್ಯೆ ಸಿಕ್ಕಿಬಿದ್ದು ನೀರುಪಾಲಾಗಿದ್ದ ಐಎನ್ಎಸ್ ಎಲಯನ್ಸ್ ಎನ್ನುವ ಟಗ್ ನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಪವಾಡ ಸದೃಶ ಸಮುದ್ರದಲ್ಲಿ ಈಜಾಡಿ ಬದುಕಿ ಬಂದಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಇದನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸ್ಪಷ್ಟ ಪಡಿಸಿದ್ದಾರೆ.
ಎಲಯನ್ಸ್ ಟಗ್ ನಲ್ಲಿ ಎಂಟು ಜನರಿದ್ದು, ಅದರಲ್ಲಿದ್ದ ಇಬ್ಬರು ಟೈರಿನಲ್ಲಿ ಈಜುತ್ತಾ ಶನಿವಾರ ಉಡುಪಿ ಬಳಿಯ ಸಮುದ್ರದಲ್ಲಿ ದಡ ಸೇರಿದ್ದರು. ಇಂದು ಮತ್ತೊಬ್ಬ ಅದೇ ರೀತಿ ಈಜುತ್ತಲೇ ದಡ ಸೇರಿದ್ದಾನೆ. ಶನಿವಾರ ಒಬ್ಬನ ಶವ ಪಡುಬಿದ್ರಿ ಬಳಿ ಸಿಕ್ಕಿದ್ದರೆ, ಇಂದು ಮತ್ತೊಂದು ಶವ ಸಿಕ್ಕಿದೆ. ಇನ್ನೂ ಮೂವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆದಿದೆ. ಬದುಕಿ ಬಂದ ಮೂವರು ಮಲ್ಪೆ ಮತ್ತು ಉಡುಪಿಯಲ್ಲಿ ಆಸ್ಪತ್ರೆಯಲ್ಲಿದ್ದು ಸುರಕ್ಷಿತವಾಗಿದ್ದಾರೆ. ಇದೇ ವೇಳೆ, ಎಲಯನ್ಸ್ ಟಗ್ ಪಡುಬಿದ್ರಿ ಸಮುದ್ರದಲ್ಲಿ ದಡಕ್ಕೆ ಬಂದಿದ್ದು ಅದರಲ್ಲಿ ಯಾರಾದ್ರೂ ಸಿಕ್ಕಿಕೊಂಡಿದ್ದಾರೆಯೇ ಎಂದು ಕೋಸ್ಟ್ ಗಾರ್ಡ್ ಸಿಬಂದಿ ತನಿಖೆ ನಡೆಸುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಮಂಗಳೂರಿನ ಎಂಆರ್ ಪಿಎಲ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಅಲಯನ್ಸ್ ಟಗ್ ಶುಕ್ರವಾರ ಕೆಲಸ ಮುಗಿಸಿ, ನಿರ್ಗಮಿಸುವ ಹಾದಿಯಲ್ಲಿತ್ತು. ಚಂಡಮಾರುತ ಹಿನ್ನೆಲೆಯಲ್ಲಿ ಎನ್ಎಂಪಿಟಿ ಬಂದರಿನಿಂದ ದಡಕ್ಕೆ ಬರುವಂತೆ ಸೂಚನೆ ನೀಡಲಾಗಿತ್ತೆಂದು ಅಲ್ಲಿನ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಅವರು ಯಾಕೆ ಬಂದಿರಲಿಲ್ಲ ಎನ್ನುವುದು ಗೊತ್ತಾಗಿಲ್ಲ. ಈ ಬಗ್ಗೆ ಎನ್ಎಂಪಿಟಿ ಮತ್ತು ಎಂಆರ್ ಪಿಎಲ್ ಅಧಿಕಾರಿಗಳಿಂದ ವರದಿ ಕೇಳಿದ್ದೇನೆ. ನಿರ್ಲಕ್ಷ್ಯದಿಂದ ಈ ಘಟನೆ ಆಗಿದೆಯೋ ಎನ್ನುವ ಬಗ್ಗೆ ರಾಜ್ಯ ಸರಕಾರಕ್ಕೆ ವರದಿ ನೀಡಲಿದ್ದೇನೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
READ: ಎಂಆರ್ ಪಿಎಲ್ ಟಗ್ ಬೋಟ್ ಸಮುದ್ರ ಮಧ್ಯೆ ಪಲ್ಟಿ ; ಆರು ಮಂದಿ ನಾಪತ್ತೆ , ಒಬ್ಬನ ಶವ ಪತ್ತೆ , ಇಬ್ಬರು ಪವಾಡಸದೃಶ ಪಾರು !
MRPL Tug boat capsized due to Cyclone Tauktae one Missing Fishermen swims ashore says Mangalore Dc Dr Rajendra Kumar. The search operation is going on for the missing three.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm