ಬ್ರೇಕಿಂಗ್ ನ್ಯೂಸ್
16-05-21 09:53 pm Mangaluru Correspondent ಕರಾವಳಿ
ಮಂಗಳೂರು, ಮೇ 16: ಸಮುದ್ರ ಮಧ್ಯೆ ಸಿಕ್ಕಿಬಿದ್ದು ನೀರುಪಾಲಾಗಿದ್ದ ಐಎನ್ಎಸ್ ಎಲಯನ್ಸ್ ಎನ್ನುವ ಟಗ್ ನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಪವಾಡ ಸದೃಶ ಸಮುದ್ರದಲ್ಲಿ ಈಜಾಡಿ ಬದುಕಿ ಬಂದಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಇದನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸ್ಪಷ್ಟ ಪಡಿಸಿದ್ದಾರೆ.
ಎಲಯನ್ಸ್ ಟಗ್ ನಲ್ಲಿ ಎಂಟು ಜನರಿದ್ದು, ಅದರಲ್ಲಿದ್ದ ಇಬ್ಬರು ಟೈರಿನಲ್ಲಿ ಈಜುತ್ತಾ ಶನಿವಾರ ಉಡುಪಿ ಬಳಿಯ ಸಮುದ್ರದಲ್ಲಿ ದಡ ಸೇರಿದ್ದರು. ಇಂದು ಮತ್ತೊಬ್ಬ ಅದೇ ರೀತಿ ಈಜುತ್ತಲೇ ದಡ ಸೇರಿದ್ದಾನೆ. ಶನಿವಾರ ಒಬ್ಬನ ಶವ ಪಡುಬಿದ್ರಿ ಬಳಿ ಸಿಕ್ಕಿದ್ದರೆ, ಇಂದು ಮತ್ತೊಂದು ಶವ ಸಿಕ್ಕಿದೆ. ಇನ್ನೂ ಮೂವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆದಿದೆ. ಬದುಕಿ ಬಂದ ಮೂವರು ಮಲ್ಪೆ ಮತ್ತು ಉಡುಪಿಯಲ್ಲಿ ಆಸ್ಪತ್ರೆಯಲ್ಲಿದ್ದು ಸುರಕ್ಷಿತವಾಗಿದ್ದಾರೆ. ಇದೇ ವೇಳೆ, ಎಲಯನ್ಸ್ ಟಗ್ ಪಡುಬಿದ್ರಿ ಸಮುದ್ರದಲ್ಲಿ ದಡಕ್ಕೆ ಬಂದಿದ್ದು ಅದರಲ್ಲಿ ಯಾರಾದ್ರೂ ಸಿಕ್ಕಿಕೊಂಡಿದ್ದಾರೆಯೇ ಎಂದು ಕೋಸ್ಟ್ ಗಾರ್ಡ್ ಸಿಬಂದಿ ತನಿಖೆ ನಡೆಸುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಮಂಗಳೂರಿನ ಎಂಆರ್ ಪಿಎಲ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಅಲಯನ್ಸ್ ಟಗ್ ಶುಕ್ರವಾರ ಕೆಲಸ ಮುಗಿಸಿ, ನಿರ್ಗಮಿಸುವ ಹಾದಿಯಲ್ಲಿತ್ತು. ಚಂಡಮಾರುತ ಹಿನ್ನೆಲೆಯಲ್ಲಿ ಎನ್ಎಂಪಿಟಿ ಬಂದರಿನಿಂದ ದಡಕ್ಕೆ ಬರುವಂತೆ ಸೂಚನೆ ನೀಡಲಾಗಿತ್ತೆಂದು ಅಲ್ಲಿನ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಅವರು ಯಾಕೆ ಬಂದಿರಲಿಲ್ಲ ಎನ್ನುವುದು ಗೊತ್ತಾಗಿಲ್ಲ. ಈ ಬಗ್ಗೆ ಎನ್ಎಂಪಿಟಿ ಮತ್ತು ಎಂಆರ್ ಪಿಎಲ್ ಅಧಿಕಾರಿಗಳಿಂದ ವರದಿ ಕೇಳಿದ್ದೇನೆ. ನಿರ್ಲಕ್ಷ್ಯದಿಂದ ಈ ಘಟನೆ ಆಗಿದೆಯೋ ಎನ್ನುವ ಬಗ್ಗೆ ರಾಜ್ಯ ಸರಕಾರಕ್ಕೆ ವರದಿ ನೀಡಲಿದ್ದೇನೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
READ: ಎಂಆರ್ ಪಿಎಲ್ ಟಗ್ ಬೋಟ್ ಸಮುದ್ರ ಮಧ್ಯೆ ಪಲ್ಟಿ ; ಆರು ಮಂದಿ ನಾಪತ್ತೆ , ಒಬ್ಬನ ಶವ ಪತ್ತೆ , ಇಬ್ಬರು ಪವಾಡಸದೃಶ ಪಾರು !
MRPL Tug boat capsized due to Cyclone Tauktae one Missing Fishermen swims ashore says Mangalore Dc Dr Rajendra Kumar. The search operation is going on for the missing three.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm