ಬ್ರೇಕಿಂಗ್ ನ್ಯೂಸ್
17-05-21 11:10 am Mangalore Correspondent ಕರಾವಳಿ
ಮಂಗಳೂರು, ಮೇ 17: ಪಡುಬಿದ್ರಿ ಬಳಿಯ ಸಮುದ್ರದಲ್ಲಿ ಸಿಕ್ಕಿಬಿದ್ದಿರುವ ಎಂಆರ್ ಪಿಎಲ್ ಗುತ್ತಿಗೆ ಕೆಲಸ ಮಾಡುವ ಟಗ್ ಬೋಟಿನ ಕಾರ್ಮಿಕರ ರಕ್ಷಣೆಗೆ ಕೊಚ್ಚಿಯಿಂದ ಹೆಲಿಕಾಪ್ಟರ್ ಬಂದಿದ್ದು ಎಲ್ಲ ಒಂಬತ್ತು ಮಂದಿಯನ್ನೂ ರಕ್ಷಿಸಲಾಗಿದೆ.
ಇಂದು ಬೆಳಗ್ಗೆ ಏಳು ಗಂಟೆಗೆ ಕೊಚ್ಚಿಯಿಂದ ಮಂಗಳೂರಿಗೆ ಬಂದ ನೌಕಾಪಡೆಯ ಹೆಲಿಕಾಪ್ಟರ್, ಎಂಟು ಗಂಟೆ ಸುಮಾರಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿತ್ತು. ಪಡುಬಿದ್ರಿ ಬಳಿಯಿಂದ ಐದು ಮೈಲ್ ದೂರವಿರುವ ಸಮುದ್ರ ಮಧ್ಯೆ ಟಗ್ ಸಿಕ್ಕಿಹಾಕಿಕೊಂಡಿದ್ದು ಅದನ್ನು ರಕ್ಷಣೆ ಮಾಡುವುದು ಕೋಸ್ಟ್ ಗಾರ್ಡ್ ಪಡೆಗೆ ಸವಾಲಾಗಿತ್ತು. ಹೀಗಾಗಿ ದ.ಕ. ಜಿಲ್ಲಾಧಿಕಾರಿ ನಿನ್ನೆ ಸಂಜೆಯೇ ರಾಜ್ಯದ ಸಿಎಂ ಕಚೇರಿಯಿಂದ ಅನುಮತಿ ಪಡೆದು ನೌಕಾಪಡೆಯ ನೆರವು ಕೋರಿದ್ದರು. ಸಮುದ್ರ ತುಂಬ ರಫ್ ಇದ್ದುದರಿಂದ ಮತ್ತು ಗಾಳಿ ವೇಗವಾಗಿ ಬೀಸುತ್ತಿರುವುದರಿಂದ ರಕ್ಷಣೆಗೆ ಹೆಲಿಕಾಪ್ಟರ್ ತರಿಸಲು ಕೇಳಿಕೊಂಡಿದ್ದರು. ಗೋವಾದಿಂದ ಹೆಲಿಕಾಪ್ಟರ್ ತರಿಸುವ ಯೋಚನೆ ಮಾಡಲಾಗಿತ್ತಾದರೂ, ನಿನ್ನೆ ಸಂಜೆಯಿಂದ ಗೋವಾ ಭಾಗದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಿದ್ದರಿಂದ ಕೊಚ್ಚಿ ವಿಭಾಗದಿಂದ ನೆರವು ಕೇಳಲಾಗಿತ್ತು.




ಇಂದು ಬೆಳಗ್ಗೆ ಕೊಚ್ಚಿಯಿಂದ ಆಗಮಿಸಿದ ಹೆಲಿಕಾಪ್ಟರ್, ಮಂಗಳೂರು ಏರ್ಪೋರ್ಟ್ ಗೆ ಬಂದು ಕಾರ್ಯಾಚರಣೆ ಆರಂಭಿಸಿದೆ. ಬೆಳಗ್ಗೆ 10.30 ರ ವೇಳೆಗೆ ಎಲ್ಲ ಒಂಬತ್ತು ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಕಾಪ್ಟರ್ ನಲ್ಲಿ ಒಬ್ಬೊಬ್ಬರನ್ನೇ ಮೇಲಕ್ಕೆ ತಂದು ಬಳಿಕ ಅಲ್ಲಿಯೇ ಸನಿಹ ಇದ್ದ ಕೋಸ್ಟ್ ಗಾರ್ಡ್ ಪಡೆಯ ಹಡಗಿನಲ್ಲಿ ಇಳಿಸಲಾಗಿತ್ತು. ಇಂದು ಬೆಳಗ್ಗಿನ ಹೊತ್ತಿಗೆ ಸಮುದ್ರ ಬಿರುಸು ಕಳಕೊಂಡಿದ್ದರಿಂದ ಕೋಸ್ಟ್ ಗಾರ್ಡ್ ಸಿಬಂದಿಯೂ ಸ್ಪೀಡ್ ಬೋಟ್ ನಲ್ಲಿ ರಕ್ಷಣೆಗೆ ಇಳಿದಿದ್ದರು.




ಕೋಸ್ಟ್ ಗಾರ್ಡ್ ಹಡಗು ಕಳೆದ ಎರಡು ದಿನಗಳಿಂದ ಟಗ್ ನಲ್ಲಿರುವ ಒಂಬತ್ತು ಕಾರ್ಮಿಕರ ಬಗ್ಗೆ ನಿಗಾ ಇಟ್ಟಿತ್ತು. ಎಂಆರ್ ಪಿಎಲ್ ನಲ್ಲಿ ಗುತ್ತಿಗೆ ಕೆಲಸ ಮಾಡಿಕೊಂಡಿದ್ದ ಟಗ್ ಕಾರ್ಮಿಕರು ಮೊನ್ನೆ ಶನಿವಾರ ದಡಕ್ಕೆ ಬರುವ ಯೋಚನೆ ಮಾಡಿದ್ದರು. ಆದರೆ, ಅಷ್ಟರಲ್ಲಿ ಚಂಡಮಾರುತ ಪ್ರಭಾವಕ್ಕೆ ಸಿಲುಕಿ ಸಮುದ್ರದಲ್ಲಿ ಅಪಾಯಕ್ಕೀಡಾಗಿದ್ದರು. ಗಾಳಿಯ ರಭಸಕ್ಕೆ ಜನರೇಟರ್ ಕೈಕೊಟ್ಟಿದ್ದರಿಂದ ಇಂಜಿನ್ ಚಾಲೂ ಆಗದೆ, ಗಾಳಿ ಬಂದ ಕಡೆಗೆ ತೇಲುತ್ತಾ ಹೋಗುವಂತಾಗಿತ್ತು.
ಎನ್ಎಂಪಿಟಿ ಬಂದರು ವ್ಯಾಪ್ತಿಗೆ ಬರುವ ಈ ಟಗ್, ಚಂಡಮಾರುತದ ಎಚ್ಚರಿಕೆ ಇದ್ದರೂ ಸಮುದ್ರದಲ್ಲಿ ಯಾಕೆ ಉಳಿದುಕೊಂಡಿತ್ತು. ಇದಕ್ಕೆ ಎಂಆರ್ ಪಿಎಲ್ ಮತ್ತು ಎನ್ಎಂಪಿಟಿ ಬಂದರು ಅಧಿಕಾರಿಗಳ ನಿರ್ಲಕ್ಷ್ಯ ಕಾರಣವೇ ಎನ್ನುವುದರ ಬಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎರಡೂ ಸಂಸ್ಥೆಗಳಿಂದ ಪ್ರತ್ಯೇಕ ವರದಿ ನೀಡುವಂತೆ ಕೇಳಿದ್ದಾರೆ.
MRPL Tugboat with Nine persons that were stranded through cyclone Tauktae has been rescued by Mangalore Coast Gaurd through the help of Cochi Helicopter. All the nine are said to be safe.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm