ಬ್ರೇಕಿಂಗ್ ನ್ಯೂಸ್
17-05-21 10:20 pm Mangaluru Correspondent ಕರಾವಳಿ
ಮಂಗಳೂರು, ಮೇ 17: ರಾಜ್ಯದಲ್ಲಿ ಕೊರೊನಾ ಸ್ಥಿತಿ ವಿಪರೀತಕ್ಕೆ ಹೋಗುತ್ತಿದ್ದು ರಾಷ್ಟ್ರೀಯ ವಿಪತ್ತಾಗಿ ದೇಶಕ್ಕೆ ಬೆದರಿಕೆಯಾಗಿ ಪರಿಣಮಿಸಿದೆ. ಆದರೆ, ಇದನ್ನು ನಿರ್ವಹಿಸಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರ್ಕಾರ ಕೂಡ ಕೇಂದ್ರದಿಂದ ಪರಿಹಾರ ಪಡೆದುಕೊಳ್ಳುವಲ್ಲಿ ವಿಫಲವಾಗಿದ್ದು ಸಾಮಾನ್ಯ ಜನರ ಸ್ಥಿತಿ ಶೋಚನೀಯವಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರಿಗೆ ಇವತ್ತು ಲಸಿಕೆಯೂ ಸಿಗುತ್ತಿಲ್ಲ. ಔಷಧಿಯೂ ಸಿಗುತ್ತಿಲ್ಲ. ಕಳೆದ ಬಾರಿಗೆ ಕೊರೊನಾ ಹೊಸತಾಗಿತ್ತು. ಆದರೆ, ಒಂದು ವರ್ಷ ಕಳೆದರೂ, ನಿರ್ವಹಣೆ ಮಾಡಲು ಸಾಧ್ಯವಾಗಿಲ್ಲ ಅಂದ್ರೆ ಇವರ ವೈಫಲ್ಯ ಅಲ್ಲದೆ ಮತ್ತೇನು ? ಇಲ್ಲೊಬ್ಬರು ಲೋಕಸಭಾ ಸದಸ್ಯರಿದ್ದಾರೆ. ಬಾಲಿಶವಾಗಿ ಹೇಳಿಕೆ ನೀಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಕೊರೊನಾ ಹೆಚ್ಚಲು ಕಾಂಗ್ರೆಸ್ ಕಾರಣವಂತೆ. ಲಸಿಕೆಯನ್ನು ಜನರಿಗೆ ಕೊಡುವಂತದ್ದು ಅಧಿಕಾರದಲ್ಲಿ ಯಾರಿದ್ದಾರೆ ಅವರ ಕೆಲಸ. ಈಗ ಲಸಿಕೆಯೇ ಸಿಗಲ್ಲ. ಮತ್ತೊಂದೆಡೆ ಮೊದಲ ಡೋಸ್ ಕೊಟ್ಟವರಿಗೆ ಎರಡನೇ ಡೋಸ್ ಪಡೆಯಲು ಸಮಯ ಬಂದಿದ್ದರೆ, ಯಾವಾಗ ಸಿಗಲಿದೆ ಎಂದು ಸಿಎಂಗೇ ಗೊತ್ತಿಲ್ಲದಾಗಿದೆ. ಆಕ್ಸಿಜನ್, ಐಸಿಯು, ಚಿಕಿತ್ಸೆ ಇಲ್ಲದೇ ಜನರು ಸಾಯುತ್ತಿದ್ದಾರೆ. ಬಿಜೆಪಿ ಸರಕಾರ ರಾಜ್ಯದಲ್ಲಿ ಕೆಟ್ಟ ಸ್ಥಿತಿಯನ್ನು ತಂದಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕೊರೊನಾ ಪೀಡಿತರಾಗಿ ಮನೆ, ಆಸ್ತಿ ಕಳಕೊಂಡವರಿಗೆ ಪ್ಯಾಕೇಜ್ ಕೊಡಬೇಕು. ಅದರಲ್ಲೂ ಇಂತಹ ಮಂದಿಗೆ ಪ್ಯಾಕೇಜ್ ಕೊಡಲೇಬೇಕು ಎಂದು ಆಗ್ರಹಿಸಿದ ರಮಾನಾಥ ರೈ, ಇವತ್ತು ಕಾಂಗ್ರೆಸ್ ಇದ್ದಿದ್ದರೆ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇರುತ್ತಿತ್ತು. ಮನೆ ಮನೆಗೆ ಕೊರೊನಾ ಕಿಟ್ ಹೋಗುತ್ತಿತ್ತು ಎಂದು ಸವಾಲೆಸೆದರು.
ಕೊರೊನಾ ನಿರ್ವಹಣೆಯಿಂದ ವೈಫಲ್ಯಕ್ಕೀಡಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮುಜುಗರಕ್ಕೀಡಾಗಿದ್ದಾರೆ. ಪ್ರಧಾನಿಯವರ ಇಮೇಜನ್ನು ಹೇಗೆ ಸೇವ್ ಮಾಡುವುದು ಅಂತಾ ಬಿಜೆಪಿಯವರು ಯೋಚಿಸುತ್ತಿದ್ದಾರೆಯೇ ವಿನಾ ಜನರ ಪ್ರಾಣ ಕಾಪಾಡುವ ಬಗ್ಗೆ ಯಾವುದೇ ಯೋಚನೆ ಅವರಿಗಿಲ್ಲ. ಜನರ ಬಗ್ಗೆ ಕನಿಷ್ಠ ಕಾಳಜಿ ಇರುತ್ತಿದ್ದರೆ ಇಷ್ಟು ನಿರ್ಲಕ್ಷ್ಯ ಮಾಡುತ್ತಿರಲಿಲ್ಲ ಎಂದು ಕಿಡಿಕಾರಿದರು.
The state and union government have completely failed in handling the pandemic, said district Congress president Harish Kumar.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm