ಬ್ರೇಕಿಂಗ್ ನ್ಯೂಸ್
17-05-21 10:30 pm Udupi Correspondent ಕರಾವಳಿ
ಉಡುಪಿ, ಮೇ 17: ಕೊರೊನಾ ಕಾರಣದಿಂದ ಶಾಲೆಯಿಂದ ಹೊರಗುಳಿದಿರುವ ಮಕ್ಕಳು ಮೊಬೈಲ್, ವಿಡಿಯೋ ಗೇಮ್ ಹುಚ್ಚಿಗೆ ಬಿದ್ದು ಎಷ್ಟರ ಮಟ್ಟಿಗೆ ಮಾನಸಿಕ ಸ್ವಾಸ್ಥ್ಯ ಕಳಕೊಳ್ಳುತ್ತಿದ್ದಾರೆ ಎಂಬುದಕ್ಕೆ ಈ ಘಟನೆ ನಿದರ್ಶನ. ಇಲ್ಲೊಬ್ಬ 16 ವರ್ಷದ ಹುಡುಗನೊಬ್ಬ ತಂದೆ, ತಾಯಿ ಮೊಬೈಲ್ ನೋಡುತ್ತಿದ್ದುದಕ್ಕೆ ಗದರಿದರೆಂದು ಮನೆಯಿಂದ ಸ್ವಲ್ಪ ದೂರವಿರುವ ಸಾರ್ವಜನಿಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನಲ್ಲಿ ನಡೆದಿದೆ.

ಕಾಪು ತಾಲೂಕಿನ ಮಣಿಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಸುಹೇಬತ್ ಅಸ್ಲಾಮಿಯಾ(16) ಮೃತ ದುರಂತ ಸಾವನ್ನಪ್ಪಿದ ಬಾಲಕ. ಈ ಬಗ್ಗೆ ಹುಡುಗನ ಹೆತ್ತವರಾದ ಜುಬೇದಾ ಮತ್ತು ಶಬಾನ್ ದಂಪತಿ ಕಾಪು ಠಾಣೆಗೆ ದೂರು ನೀಡಿದ್ದಾರೆ. ಅಸ್ಲಾಮಿಯಾ ದಿನವಿಡೀ ಮೊಬೈಲಿನಲ್ಲಿ ವಿಡಿಯೋ ಗೇಮ್ ಆಡುತ್ತಿದ್ದುದಲ್ಲದೆ ತಂದೆ, ತಾಯಿ ಮಾತು ಕೇಳುತ್ತಿರಲಿಲ್ಲ. ಮೇ 15ರಂದು ಸಂಜೆ ಮೊಬೈಲ್ ಒತ್ತುತ್ತಿದ್ದ ಹುಡುಗನಿಗೆ ತಾಯಿ ಗದರಿದ್ದು, ಗೇಮ್ಸ್ ಆಡುವುದು ಬೇಡವೆಂದು ಹೇಳಿ ಮೊಬೈಲ್ ಕಿತ್ತುಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ಹುಡುಗ, ತಾಯಿ ಬಳಿ ಕೋಪದಿಂದ ಮನೆಯ ಮೂಲೆಯಲ್ಲಿ ಕುಳಿತುಕೊಂಡಿದ್ದ.
ಆನಂತರ ಹುಡುಗನ ತಾಯಿ ನಮಾಜ್ ಮಾಡಲೆಂದು ಕೋಣೆಗೆ ತೆರಳಿದ್ದರೆ, ತಂದೆ ಬಾತ್ ರೂಮಿಗೆ ತೆರಳಿದ್ದರು. ನಮಾಜ್ ಮುಗಿಸಿದ ಬಳಿಕ ತಾಯಿ ಹೊರಬಂದಾಗ ಹುಡುಗ ಮನೆಯಲ್ಲಿ ಇರಲಿಲ್ಲ. ಬಳಿಕ ತಂದೆ, ತಾಯಿ ಇಬ್ಬರೂ ಮನೆ ಪರಿಸರದಲ್ಲಿ ಹುಡುಕಾಡಿದ್ದು, ಹೊರಗಡೆ ತೆರಳಿದಾಗ 200 ಮೀಟರ್ ದೂರದಲ್ಲಿ ಬಾವಿ ಬಳಿ ಜನ ಸೇರಿರುವುದು ಕಂಡುಬಂದಿದೆ. ಅಲ್ಲಿ ತೆರಳಿದಾಗ ಹುಡುಗ ಬಾವಿಗೆ ಹಾರಿರುವುದು ತಿಳಿದುಬಂದಿದ್ದು ಬಳಿಕ ಫೈರ್ ಸರ್ವಿಸ್ ನವರು ಬಂದು ಹುಡುಗನನ್ನು ಮೇಲೆತ್ತಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾನೆ. ಕಾಪು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
In an incident that highlights how mobile gaming addiction has taken over the lives of youngsters, a 16-year-old boy ended his life after being rebuked by her parents for playing video games on mobile phone. The incident occurred on the evening of May 15 at Manipur Kote, Manipura village, Udupi.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm