ಬ್ರೇಕಿಂಗ್ ನ್ಯೂಸ್
17-05-21 10:30 pm Udupi Correspondent ಕರಾವಳಿ
ಉಡುಪಿ, ಮೇ 17: ಕೊರೊನಾ ಕಾರಣದಿಂದ ಶಾಲೆಯಿಂದ ಹೊರಗುಳಿದಿರುವ ಮಕ್ಕಳು ಮೊಬೈಲ್, ವಿಡಿಯೋ ಗೇಮ್ ಹುಚ್ಚಿಗೆ ಬಿದ್ದು ಎಷ್ಟರ ಮಟ್ಟಿಗೆ ಮಾನಸಿಕ ಸ್ವಾಸ್ಥ್ಯ ಕಳಕೊಳ್ಳುತ್ತಿದ್ದಾರೆ ಎಂಬುದಕ್ಕೆ ಈ ಘಟನೆ ನಿದರ್ಶನ. ಇಲ್ಲೊಬ್ಬ 16 ವರ್ಷದ ಹುಡುಗನೊಬ್ಬ ತಂದೆ, ತಾಯಿ ಮೊಬೈಲ್ ನೋಡುತ್ತಿದ್ದುದಕ್ಕೆ ಗದರಿದರೆಂದು ಮನೆಯಿಂದ ಸ್ವಲ್ಪ ದೂರವಿರುವ ಸಾರ್ವಜನಿಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನಲ್ಲಿ ನಡೆದಿದೆ.

ಕಾಪು ತಾಲೂಕಿನ ಮಣಿಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಸುಹೇಬತ್ ಅಸ್ಲಾಮಿಯಾ(16) ಮೃತ ದುರಂತ ಸಾವನ್ನಪ್ಪಿದ ಬಾಲಕ. ಈ ಬಗ್ಗೆ ಹುಡುಗನ ಹೆತ್ತವರಾದ ಜುಬೇದಾ ಮತ್ತು ಶಬಾನ್ ದಂಪತಿ ಕಾಪು ಠಾಣೆಗೆ ದೂರು ನೀಡಿದ್ದಾರೆ. ಅಸ್ಲಾಮಿಯಾ ದಿನವಿಡೀ ಮೊಬೈಲಿನಲ್ಲಿ ವಿಡಿಯೋ ಗೇಮ್ ಆಡುತ್ತಿದ್ದುದಲ್ಲದೆ ತಂದೆ, ತಾಯಿ ಮಾತು ಕೇಳುತ್ತಿರಲಿಲ್ಲ. ಮೇ 15ರಂದು ಸಂಜೆ ಮೊಬೈಲ್ ಒತ್ತುತ್ತಿದ್ದ ಹುಡುಗನಿಗೆ ತಾಯಿ ಗದರಿದ್ದು, ಗೇಮ್ಸ್ ಆಡುವುದು ಬೇಡವೆಂದು ಹೇಳಿ ಮೊಬೈಲ್ ಕಿತ್ತುಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ಹುಡುಗ, ತಾಯಿ ಬಳಿ ಕೋಪದಿಂದ ಮನೆಯ ಮೂಲೆಯಲ್ಲಿ ಕುಳಿತುಕೊಂಡಿದ್ದ.
ಆನಂತರ ಹುಡುಗನ ತಾಯಿ ನಮಾಜ್ ಮಾಡಲೆಂದು ಕೋಣೆಗೆ ತೆರಳಿದ್ದರೆ, ತಂದೆ ಬಾತ್ ರೂಮಿಗೆ ತೆರಳಿದ್ದರು. ನಮಾಜ್ ಮುಗಿಸಿದ ಬಳಿಕ ತಾಯಿ ಹೊರಬಂದಾಗ ಹುಡುಗ ಮನೆಯಲ್ಲಿ ಇರಲಿಲ್ಲ. ಬಳಿಕ ತಂದೆ, ತಾಯಿ ಇಬ್ಬರೂ ಮನೆ ಪರಿಸರದಲ್ಲಿ ಹುಡುಕಾಡಿದ್ದು, ಹೊರಗಡೆ ತೆರಳಿದಾಗ 200 ಮೀಟರ್ ದೂರದಲ್ಲಿ ಬಾವಿ ಬಳಿ ಜನ ಸೇರಿರುವುದು ಕಂಡುಬಂದಿದೆ. ಅಲ್ಲಿ ತೆರಳಿದಾಗ ಹುಡುಗ ಬಾವಿಗೆ ಹಾರಿರುವುದು ತಿಳಿದುಬಂದಿದ್ದು ಬಳಿಕ ಫೈರ್ ಸರ್ವಿಸ್ ನವರು ಬಂದು ಹುಡುಗನನ್ನು ಮೇಲೆತ್ತಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾನೆ. ಕಾಪು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
In an incident that highlights how mobile gaming addiction has taken over the lives of youngsters, a 16-year-old boy ended his life after being rebuked by her parents for playing video games on mobile phone. The incident occurred on the evening of May 15 at Manipur Kote, Manipura village, Udupi.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm