ಬ್ರೇಕಿಂಗ್ ನ್ಯೂಸ್
18-05-21 12:04 pm Mangalore Correspondent ಕರಾವಳಿ
ಮಂಗಳೂರು, ಮೇ 18: ನಗರದ ಮಂಗಳಾದೇವಿ ದೇವಸ್ಥಾನದ ಬಳಿಯ ಪೆಟ್ರೋಲ್ ಪಂಪ್ ಎದುರುಗಡೆ ನಿಲ್ಲಿಸಿದ್ದ ಖಾಸಗಿ ಬಸ್ ನಿನ್ನೆ ತಡರಾತ್ರಿ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ರೂಟ್ ನಂಬ್ರ 15ರ ಮಂಗಳೂರು- ಸುರತ್ಕಲ್ ಸಂಚಾರ ನಡೆಸುತ್ತಿದ್ದ ರಾಜಲಕ್ಷ್ಮಿ ಹೆಸರಿನ ಖಾಸಗಿ ಬಸ್ಸನ್ನು ಇತ್ತೀಚೆಗೆ ಲಾಕ್ಡೌನ್ ಘೋಷಣೆಯಾದ ಬಳಿಕ ಅದೇ ಜಾಗದಲ್ಲಿ ನಿಲ್ಲಿಸಲಾಗಿತ್ತು. ಅಲ್ಲಿ ರಾಜಲಕ್ಷ್ಮಿ ಕಂಪನಿಗೆ ಸೇರಿದ ಇತರ ಮೂರ್ನಾಲ್ಕು ಬಸ್ ಗಳು ಕೂಡ ನಿಂತಿದ್ದವು. ಆದರೆ, ಒಂದು ಬಸ್ ಮಾತ್ರ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.





ಘಟನೆ ಬಗ್ಗೆ ಪಾಂಡೇಶ್ವರ ಠಾಣೆಗೆ ದೂರು ನೀಡಲಾಗಿದ್ದು ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಯಾರೋ ಕಿಡಿಗೇಡಿಗಳ ಕೃತ್ಯ ಆಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಬಳಿ ಕೇಳಿದಾಗ, ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಇಲ್ಲ. 15-20 ದಿನಗಳಿಂದ ಒಂದೇ ಕಡೆ ನಿಂತಿದ್ದರೆ ಬಸ್ಸಿನ ಬ್ಯಾಟರಿ ವೀಕ್ ಆಗಿರತ್ತೆ. ಪವರ್ ಇಲ್ಲದೆ ಶಾರ್ಟ್ ಸರ್ಕಿಟ್ ಆಗಲಿಕ್ಕಿಲ್ಲ. ಇದು ಯಾರೋ ರಾತ್ರಿ ಬಸ್ಸಿನಲ್ಲಿ ಒಳಗೆ ಬಂದು ಕುಳಿತವರ ಕೃತ್ಯ ಆಗಿರುವ ಸಾಧ್ಯತೆಯಿದೆ. ಇಲ್ಲದಿದ್ದರೆ ಉದ್ದೇಶಪೂರ್ವಕ ಯಾರೋ ಕೃತ್ಯ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
Video:
Miscreants set Route No 15 Bus Rajalakshmi which was parked since lockdown on Fire at Mangaladevi in Mangalore. The bus is completely gutted by fire.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm