ಬ್ರೇಕಿಂಗ್ ನ್ಯೂಸ್
18-05-21 02:52 pm Mangalore Correspondent ಕರಾವಳಿ
ಮಂಗಳೂರು, ಮೇ 18 : ಕೋವಿಡ್ ಲಸಿಕೆಗೆ ಒಂದೆಡೆ ಭಾರೀ ಬೇಡಿಕೆ ಬಂದಿದ್ದರೆ, ಇನ್ನೊಂದೆಡೆ ಲಸಿಕೆ ಬಗ್ಗೆ ವಿರೋಧ ವ್ಯಕ್ತಪಡಿಸಿದವರು ಕೂಡ ಲಸಿಕೆ ಪಡೆಯಲು ಆರಂಭಿಸಿದ್ದಾರೆ. ಈ ನಡುವೆ ಮಾಜಿ ಸಚಿವ ಯು.ಟಿ ಖಾದರ್ ಮೊದಲು ಲಸಿಕೆಗೆ ವಿರೋಧಿಸಿ, ಈಗ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿರುವುದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿಗರ ಬಾಯಿಗೆ ಆಹಾರವಾಗಿದ್ದಾರೆ.
ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ ಖಾದರ್ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದರು. ಖಾದರ್ ತಮ್ಮ ಮನೆಯಲ್ಲಿಯೇ ಲಸಿಕೆ ಪಡೆದಿದ್ದರು. ಖಾದರ್ ಲಸಿಕೆ ಪಡೆದಿದ್ದ ಫೋಟೊ ಜಾಲತಾಣದಲ್ಲಿ ಬರುತ್ತಿದ್ದಂತೆ ವಿರೋಧಿಗಳು ಮಾಜಿ ಸಚಿವ ಯು.ಟಿ ಖಾದರ್ ಮೇಲೆ ಪ್ರಶ್ನೆಗಳ ಛೂಬಾಣ ಬಿಟ್ಟಿದ್ದು, ವ್ಯಂಗ್ಯ ಮಾತಿನಿಂದ ತಿವಿಯುತ್ತಿದ್ದಾರೆ.


ದೇಶದಲ್ಲಿ ಲಸಿಕೆ ಪ್ರಕ್ರಿಯೆ ಆರಂಭವಾದಾಗ ಯು.ಟಿ ಖಾದರ್ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರವನ್ನೇ ನಡೆಸಿದ್ದರು. ಸರ್ಕಾರ ಜನರನ್ನು ಬಲವಂತವಾಗಿ ಲಸಿಕೆ ಪಡೆಯುವಂತೆ ಮಾಡುತ್ತಿದೆ. ಜನ ಭಯದಿಂದ ಲಸಿಕೆ ಪಡೆಯುವ ರೀತಿಯ ವಾತಾವರಣವನ್ನು ಸರ್ಕಾರ ನಿರ್ಮಾಣ ಮಾಡಿದೆ.
ಮೊದಲ ಲಸಿಕೆಯನ್ನು ಆಸ್ಪತ್ರೆಗಳ "ಡಿ' ಗ್ರೂಪ್ ನೌಕರರಿಗೆ ನೀಡಿ ಅವರ ಜೀವದ ಮೇಲೆ ಚೆಲ್ಲಾಟವಾಡುತ್ತಿದೆ ಎಂಬಿತ್ಯಾದಿ ಟೀಕಾಸ್ತ್ರವನ್ನು ಸರ್ಕಾರದ ಮೇಲೆ ಖಾದರ್ ಸುರಿದಿದ್ದರು. ಅಂದಿನ ಯು.ಟಿ ಖಾದರ್ ಹೇಳಿಕೆ ಸುದ್ದಿ ವರದಿಯನ್ನು ಈಗ ಬಿಜೆಪಿಗರು ಅಸ್ತ್ರವಾಗಿ ಬಳಸಿಕೊಂಡಿದ್ದು, ಜಾಲತಾಣದಲ್ಲಿ ಚುಚ್ಚಿದ್ದಾರೆ.
ಖಾದರ್ ಸುದ್ದಿಗೋಷ್ಠಿಯ ವರದಿಯ ಚಿತ್ರವನ್ನು ಹಾಕಿ, ಅಂದಿನ ಹೇಳಿಕೆಯನ್ನು ಮತ್ತು ಖಾದರ್ ನಗುನಗುತ್ತಾ ಲಸಿಕೆ ಪಡೆದಿರುವ ಫೋಟೋವನ್ನು ಹಾಕಿ ಕಥೆ ಹೇಳುವ ಎರಡು ಚಿತ್ರಗಳು ಅಂತಾ ಗೇಲಿ ಮಾಡಿದ್ದಾರೆ.
Mysore MP Pratap Simha took his Facebook to mock UT Khader for getting Covid Vaccine. Previously Khader had alleged that people are scared to take BJP made vaccine so MP took to taunt why was then vaccine required now.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm