ಬ್ರೇಕಿಂಗ್ ನ್ಯೂಸ್
19-05-21 11:44 am Mangalore Correspondent ಕರಾವಳಿ
ಮಂಗಳೂರು, ಮೇ 19: ನಗರದ ಖ್ಯಾತ ವೈದ್ಯ ಡಾ. ಬಿ.ಎಸ್. ಕಕ್ಕಿಲ್ಲಾಯ ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಹಾಕುವ ವಿಚಾರದಲ್ಲಿ ಅಲ್ಲಿನ ಸಿಬಂದಿ ಜೊತೆ ವಾಗ್ವಾದ ಮಾಡಿ ಮುಜುಗರಕ್ಕೀಡಾಗಿದ್ದಾರೆ.
ಕಕ್ಕಿಲ್ಲಾಯರು ಈ ಹಿಂದೆಯೂ ಕೊರೊನಾ ಸೋಂಕು ತಡೆಯಲು ಮಾಸ್ಕ್ ಹಾಕಬೇಕಿಲ್ಲ ಎಂದಿದ್ದರು. ಲಾಕ್ಡೌನ್ ಮಾಡುವ ಅವಶ್ಯಕತೆಯೂ ಇಲ್ಲ ಎಂದಿದ್ದರು. ಸರಕಾರದ ಲಾಕ್ಡೌನ್ ಘೋಷಣೆ ಮೂರ್ಖ ನಿರ್ಧಾರ ಎಂದು ಟೀಕಿಸಿದ್ದರು. ಈ ಬಾರಿ ಮತ್ತೆ ಲಾಕ್ಡೌನ್ ಘೋಷಿಸಿದ್ದು ಅದರ ಬಗ್ಗೆಯೂ ಟೀಕೆ ಮಾಡಿದ್ದಾರೆ.



ಇದೀಗ ಸೂಪರ್ ಮಾರ್ಕೆಟಿಗೆ ದಿನಸಿ ವಸ್ತುಗಳ ಖರೀದಿಗಾಗಿ ಸ್ವತಃ ಕಕ್ಕಿಲ್ಲಾಯರು ತೆರಳಿದ್ದರು. ಮುಖಕ್ಕೆ ಮಾಸ್ಕ್ ಹಾಕದೇ ಬಂದಿದ್ದ ವೈದ್ಯರಲ್ಲಿ ಮಾಸ್ಕ್ ಹಾಕಿ ಬರುವಂತೆ ಅಲ್ಲಿನ ಸಿಬಂದಿ ಸೂಚಿಸಿದರು. ಅದರೆ, ನಾನು ಮಾಸ್ಕ್ ಹಾಕಲ್ಲ. ಮಾಸ್ಕ್ ಯಾಕೆ ಹಾಕಬೇಕು. ಮಾಸ್ಕ್ ನಿಂದ ಕೊರೊನಾ ಎದುರಿಸಲು ಸಾಧ್ಯವಿಲ್ಲ ಎಂದು ಹೇಳ್ಕೊಂಡು ಬಂದವನು ನಾನು. ಈಗ ನಾನೇ ಮಾಸ್ಕ್ ಹಾಕಬೇಕಾ ಎಂದು ಕೇಳಿದ್ದಾರೆ. ಆದರೆ, ಎಲ್ಲರೂ ಮಾಸ್ಕ್ ಹಾಕಲೇಬೇಕೆಂದು ನಿಯಮ ಇದೆ, ಹಾಗಾಗಿ ಹೇಳುತ್ತಿದ್ದೇವೆ ಎಂದಿದ್ದಾರೆ, ಸಿಬಂದಿ.
ಅಷ್ಟೇ ಅಲ್ಲದೆ, ಹೀಗೆ ವಾಗ್ವಾದ ಮಾಡುವ ಸಿಸಿಟಿವಿ ವಿಡಿಯೋವನ್ನು ಸಿಬಂದಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಮೂಲಕ ವೈದ್ಯರಿಗೇ ಮುಜುಗರ ಸೃಷ್ಟಿಸಿದ್ದಾರೆ. ಸರಕಾರದ ಲಾಕ್ಡೌನ್ ಫೂಲಿಶ್ ನಿರ್ಧಾರ. ನಾನು ಮಾಸ್ಕ್ ಹಾಕಲ್ಲ ಎನ್ನುವ ವಿಚಾರ ವಿಡಿಯೋದಲ್ಲಿದೆ.
Mangalore Famous Doctor Dr. Kukkiliyar found without a mask in Jimmy's supermarket in Kadri and argues for questioning by Staffs. Kukkiliyar says Mask is not required to wear and lockdown is a foolish Decision by the government.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm