ಬ್ರೇಕಿಂಗ್ ನ್ಯೂಸ್
19-05-21 03:57 pm Mangalore Correspondent ಕರಾವಳಿ
ಮಂಗಳೂರು, ಮೇ 19 : ಕೊರೊನಾ ಲಾಕ್ಡೌನ್ ಮಧ್ಯೆ ರಾಜ್ಯದ ಪಡಿತರ ವ್ಯವಸ್ಥೆಯಲ್ಲಿಯೂ ಸಮಸ್ಯೆ ಉಂಟಾಗಿದ್ದು ಜನರಿಗೆ ಪಡಿತರ ಸಾಮಗ್ರಿಗಳನ್ನು ನೀಡುವಲ್ಲಿ ಸರಕಾರ ವಿಫಲವಾಗಿದೆ. ಈ ಬಗ್ಗೆ ಸರಕಾರ ತಕ್ಷಣ ಗಮನಹರಿಸಿ ಗ್ರಾಹಕರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಜನತೆಗೆ ಪಡಿತರ ವ್ಯವಸ್ಥೆಯ ಮೂಲಕ ನೆರವಾಗಬೇಕಿದ್ದ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಅಸಮರ್ಪಕ ಕಾರಣಕ್ಕಾಗಿ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತಿದೆ. ಪೌಷ್ಟಿಕ ಆಹಾರ ಧಾನ್ಯ, ಕುಚ್ಚಲಕ್ಕಿ ಲಭಿಸುತ್ತಿಲ್ಲ. ಒಂದು ಪಡಿತರ ಚೀಟಿಯ ಮೂಲಕ ರಾಜ್ಯದ ಯಾವುದೇ ಮೂಲೆಯಲ್ಲಿ ನ್ಯಾಯಬೆಲೆ ಅಂಗಡಿಯಿಂದ ಪಡಿತರ ಸಾಮಗ್ರಿ ಪಡೆಯುವಂತೆ ಮಾಡಿದ್ದ ವ್ಯವಸ್ಥೆ ಸ್ಥಗಿತಗೊಂಡು ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಈ ಸಮಸ್ಯೆ ಇರಲಿಲ್ಲ. ಈಗ ಏಕೆ ಉದ್ಭವವಾಗಿದೆ ಎಂದು ಪ್ರಶ್ನಿಸಿದರು.


ಕೋವಿಡ್ ಸಂಬಂಧಿಸಿ ಉಚಿತ ಚಿಕಿತ್ಸೆ ನೀಡುವ ಬಗ್ಗೆ ಸರಕಾರ ಗಮನಹರಿಸಬೇಕಾಗಿತ್ತು. ಈಗ ಒಂದೊಂದು ಆಸ್ಪತ್ರೆಯಲ್ಲಿ ಒಂದೊಂದು ರೀತಿಯ ದರ ವಿಧಿಸಲಾಗುತ್ತಿದೆ. ನಾನು ಅಪಘಾತಕ್ಕೆ ಒಳಗಾಗಿ ಮನೆಯಲ್ಲಿ ಇದ್ದ ಕಾರಣ ಮನೆಯಲ್ಲಿ ಲಸಿಕೆ ಪಡೆಯಬೇಕಾಯಿತು. ಈ ಬಗ್ಗೆ ವಿವಾದ ಮಾಡಬೇಕಾಗಿಲ್ಲ ಎಂದರು.
ಕೋವಿಡ್ ಲಸಿಕೆ ನೀಡುವುದನ್ನು ಹಿಂದೆಯೂ ವಿರೋಧಿಸಿಲ್ಲ. ಆದರೆ ಬಿಜೆಪಿ ಜನಪ್ರತಿನಿಧಿಗಳು ಆರಂಭದಲ್ಲಿ ಲಸಿಕೆ ತೆಗೆದುಕೊಂಡು ಜನರಲ್ಲಿ ವಿಶ್ವಾಸ ಮೂಡಿಸಬೇಕಿತ್ತು. ಅದನ್ನು ಮಾಡದೆ ಈಗ ಇತರರ ಮೇಲೆ ಆರೋಪ ಮಾಡುತ್ತಿದ್ದಾರೆ. ಎಲ್ಲ ಜನರಿಗೆ ಲಸಿಕೆ ನೀಡಲು ಯಾವುದೇ ಪೂರ್ವ ತಯಾರಿ ಮಾಡದೆ ಇದ್ದ ಕಾರಣ ಲಸಿಕೆಗಾಗಿ ಜನ ಪರದಾಡುವಂತಾಗಿದೆ ಎಂದು ಖಾದರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಸತೀಶ್ ಶೆಟ್ಟಿ, ಫಾರೂಕ್, ರಫೀಕ್, ರಮ್ಲಾನ್ ಮೊದಲಾದವರು ಉಪಸ್ಥಿತರಿದ್ದರು.
Ration card holders face huge trouble amid lockdown and therefore Government should concentrate on those issues says UT Khader in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm