ಬ್ರೇಕಿಂಗ್ ನ್ಯೂಸ್
19-05-21 03:57 pm Mangalore Correspondent ಕರಾವಳಿ
ಮಂಗಳೂರು, ಮೇ 19 : ಕೊರೊನಾ ಲಾಕ್ಡೌನ್ ಮಧ್ಯೆ ರಾಜ್ಯದ ಪಡಿತರ ವ್ಯವಸ್ಥೆಯಲ್ಲಿಯೂ ಸಮಸ್ಯೆ ಉಂಟಾಗಿದ್ದು ಜನರಿಗೆ ಪಡಿತರ ಸಾಮಗ್ರಿಗಳನ್ನು ನೀಡುವಲ್ಲಿ ಸರಕಾರ ವಿಫಲವಾಗಿದೆ. ಈ ಬಗ್ಗೆ ಸರಕಾರ ತಕ್ಷಣ ಗಮನಹರಿಸಿ ಗ್ರಾಹಕರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಜನತೆಗೆ ಪಡಿತರ ವ್ಯವಸ್ಥೆಯ ಮೂಲಕ ನೆರವಾಗಬೇಕಿದ್ದ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಅಸಮರ್ಪಕ ಕಾರಣಕ್ಕಾಗಿ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತಿದೆ. ಪೌಷ್ಟಿಕ ಆಹಾರ ಧಾನ್ಯ, ಕುಚ್ಚಲಕ್ಕಿ ಲಭಿಸುತ್ತಿಲ್ಲ. ಒಂದು ಪಡಿತರ ಚೀಟಿಯ ಮೂಲಕ ರಾಜ್ಯದ ಯಾವುದೇ ಮೂಲೆಯಲ್ಲಿ ನ್ಯಾಯಬೆಲೆ ಅಂಗಡಿಯಿಂದ ಪಡಿತರ ಸಾಮಗ್ರಿ ಪಡೆಯುವಂತೆ ಮಾಡಿದ್ದ ವ್ಯವಸ್ಥೆ ಸ್ಥಗಿತಗೊಂಡು ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಈ ಸಮಸ್ಯೆ ಇರಲಿಲ್ಲ. ಈಗ ಏಕೆ ಉದ್ಭವವಾಗಿದೆ ಎಂದು ಪ್ರಶ್ನಿಸಿದರು.


ಕೋವಿಡ್ ಸಂಬಂಧಿಸಿ ಉಚಿತ ಚಿಕಿತ್ಸೆ ನೀಡುವ ಬಗ್ಗೆ ಸರಕಾರ ಗಮನಹರಿಸಬೇಕಾಗಿತ್ತು. ಈಗ ಒಂದೊಂದು ಆಸ್ಪತ್ರೆಯಲ್ಲಿ ಒಂದೊಂದು ರೀತಿಯ ದರ ವಿಧಿಸಲಾಗುತ್ತಿದೆ. ನಾನು ಅಪಘಾತಕ್ಕೆ ಒಳಗಾಗಿ ಮನೆಯಲ್ಲಿ ಇದ್ದ ಕಾರಣ ಮನೆಯಲ್ಲಿ ಲಸಿಕೆ ಪಡೆಯಬೇಕಾಯಿತು. ಈ ಬಗ್ಗೆ ವಿವಾದ ಮಾಡಬೇಕಾಗಿಲ್ಲ ಎಂದರು.
ಕೋವಿಡ್ ಲಸಿಕೆ ನೀಡುವುದನ್ನು ಹಿಂದೆಯೂ ವಿರೋಧಿಸಿಲ್ಲ. ಆದರೆ ಬಿಜೆಪಿ ಜನಪ್ರತಿನಿಧಿಗಳು ಆರಂಭದಲ್ಲಿ ಲಸಿಕೆ ತೆಗೆದುಕೊಂಡು ಜನರಲ್ಲಿ ವಿಶ್ವಾಸ ಮೂಡಿಸಬೇಕಿತ್ತು. ಅದನ್ನು ಮಾಡದೆ ಈಗ ಇತರರ ಮೇಲೆ ಆರೋಪ ಮಾಡುತ್ತಿದ್ದಾರೆ. ಎಲ್ಲ ಜನರಿಗೆ ಲಸಿಕೆ ನೀಡಲು ಯಾವುದೇ ಪೂರ್ವ ತಯಾರಿ ಮಾಡದೆ ಇದ್ದ ಕಾರಣ ಲಸಿಕೆಗಾಗಿ ಜನ ಪರದಾಡುವಂತಾಗಿದೆ ಎಂದು ಖಾದರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಸತೀಶ್ ಶೆಟ್ಟಿ, ಫಾರೂಕ್, ರಫೀಕ್, ರಮ್ಲಾನ್ ಮೊದಲಾದವರು ಉಪಸ್ಥಿತರಿದ್ದರು.
Ration card holders face huge trouble amid lockdown and therefore Government should concentrate on those issues says UT Khader in Mangalore.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm