ಬ್ರೇಕಿಂಗ್ ನ್ಯೂಸ್
20-05-21 08:05 pm Mangaluru Correspondent ಕರಾವಳಿ
ಮಂಗಳೂರು, ಮೇ 20: ಕ್ರೈಸ್ತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಮುಖಂಡ, ಎಐಸಿಸಿ ಕಾರ್ಯದರ್ಶಿ ಐವಾನ್ ಡಿಸೋಜ ನಗರದ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಲಸಿಕೆ ಪಡೆಯದಂತೆ ಕ್ರೈಸ್ತ ಸಮುದಾಯಕ್ಕೆ ಚರ್ಚ್ ಕಡೆಯಿಂದ ಸೂಚನೆ ನೀಡಲಾಗಿದೆ ಎಂದು ಸಂಸದೆ ಶೋಭಾ ಹೇಳಿಕೆ ನೀಡಿದ್ದಾಗಿ ಸುದ್ದಿಯಾಗಿತ್ತು. ಈ ಬಗ್ಗೆ ಕ್ರೈಸ್ತ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮಾಜಿ ಎಂಎಲ್ಸಿ ಐವಾನ್ ಡಿಸೋಜ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ನಿಯೋಗ ಕಮಿಷನರನ್ನು ಭೇಟಿಯಾಗಿ ದೂರು ನೀಡಿದ್ದಾರೆ.
ಇದೇ ವೇಳೆ, ಮಾತನಾಡಿರುವ ಐವಾನ್ ಡಿಸೋಜ, ಲಸಿಕೆ ಕೊಡುವ ಯೋಗ್ಯತೆ ಇವರಿಗೆ ಇಲ್ಲ. ಆದರೂ ಕ್ರೈಸ್ತ ಸಮುದಾಯದ ಅತಿ ಹೆಚ್ಚು ಮಂದಿ ಲಸಿಕೆ ಪಡೆದಿದ್ದಾರೆ. ಸಮುದಾಯಕ್ಕೆ ಸೇರಿದ ಆಸ್ಪತ್ರೆಗಳಲ್ಲಿ ಲಸಿಕೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಕೋವಿಡ್ ಕೇರ್ ಸೆಂಟರ್ ಗಳನ್ನೂ ಮಾಡಲಾಗಿದೆ. ಶೋಭಾ ಕರಂದ್ಲಾಜೆ ಒಂದು ಸಮುದಾಯವನ್ನು ಕೀಳಾಗಿ ಬಿಂಬಿಸಿ ಹೇಳಿಕೆ ನೀಡಿದ್ದಾರೆ. ಇವರ ಕಚೇರಿಯ ಮುಂದೆ ಹತ್ತು ಸಾವಿರ ಮಂದಿಯನ್ನು ಸೇರಿಸಿ ಲಸಿಕೆ ಕೊಡಿ ಎಂದು ಪ್ರತಿಭಟನೆ ಮಾಡುತ್ತೇವೆ. ಇವರಿಗೆ ಲಸಿಕೆ ಕೊಡಿಸುವ ತಾಕತ್ತು ಇದೆಯಾ, ನೋಡೋಣ ಎಂದು ಸವಾಲು ಹಾಕಿದ್ದಾರೆ.
ಈ ಬಗ್ಗೆ ಐವನ್ ಡಿಸೋಜ ಅವರನ್ನು ಕೇಳಿದಾಗ, ಪಾಂಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದು ಎಫ್ಐಆರ್ ಆಗಿದೆ. ಈಗಾಗಲೇ ಮಂಗಳೂರು ಡಯಾಸಿಸ್ ಅಡಿ ದ.ಕ. ಜಿಲ್ಲೆಯಾದ್ಯಂತ 40 ಕ್ಕೂ ಹೆಚ್ಚು ವಿವಿಧ ಠಾಣೆಯಲ್ಲಿ ದೂರು ದಾಖಲು ಮಾಡಿದ್ದೇವೆ. ಗುಲ್ಬರ್ಗ, ಬೆಂಗಳೂರು, ಯಾದಗಿರಿ ಹೀಗೆ ಹಲವು ಕಡೆ ದೂರು ದಾಖಲಾಗಿದೆ. ಒಂದು ಸಮುದಾಯವನ್ನು ಅವಹೇಳನ ಮಾಡಿದ ಶೋಭಾರನ್ನು ಹಾಗೇ ಬಿಡುವುದಿಲ್ಲ ಎಂದು ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Congress Senior leader Ivan Dsouza files complaint against Udupi MP Shobha Karandlaje for her controversial statement against Churches over vaccine. A FIR has been registered against her at Pandeshwar Police Station. Speaking to Headline Karnataka Ivan said more then 40 cases has been registered against her in Dakshina Kannada by Catholic Diocese.
06-06-25 05:32 pm
Bengaluru Staff
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
RCB arrest, Bangalore, Nikhil Sosale: ಕಾಲ್ತುಳ...
06-06-25 10:43 am
Seemanth Kumar Singh, Bangalore Police Commis...
06-06-25 12:58 am
Bangalore Police commissioner Dayanand, RCB,...
05-06-25 11:04 pm
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
06-06-25 07:20 pm
Mangalore Correspondent
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm