ಬ್ರೇಕಿಂಗ್ ನ್ಯೂಸ್
21-05-21 03:06 pm Udupi Correspondent ಕರಾವಳಿ
ಉಡುಪಿ, ಮೇ 21: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕೊರೊನಾ ಪಾಸಿಟಿವ್ ಕಂಡುಬರುವ ಮನೆಗಳನ್ನು ಪೂರ್ತಿಯಾಗಿ ಸೀಲ್ ಡೌನ್ ಮಾಡಲು ಮುಂದಾಗಿದೆ.
ಪಾಸಿಟಿವ್ ಬಂದು ಸೋಂಕಿತರು ಹೋಂ ಐಸೋಲೇಷನ್ ಆಗುವ ಮನೆಗಳನ್ನು ಗುರುತಿಸಿ ಪಟ್ಟಿ ಅಳವಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಇದರಿಂದ ಯಾವುದೇ ಗ್ರಾಮದಲ್ಲಿ ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುತ್ತದೆ ಎನ್ನುವ ನಂಬಿಕೆ ಜಿಲ್ಲಾಡಳಿತದ್ದು.
ಅಲ್ಲದೆ ಸೋಂಕಿತರ ಚಲನವನಗಳ ಮೇಲೆ ನಿಗಾ ಇರಿಸುವ ಉದ್ದೇಶವೂ ಇದರ ಹಿಂದಿದೆ. ಈ ರೀತಿಯ ಸೀಲ್ ಡೌನ್ ಮಾಡಲು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ಅವರೇ ಸ್ವತಃ ಮುಂದಾಗಿದ್ದಾರೆ.

ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮ ವ್ಯಾಪ್ತಿಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೇ ತೆರಳಿ, ಸೀಲ್ ಡೌನ್ ಮಾಡುವುದಕ್ಕಾಗಿ ಮನೆಯ ಸುತ್ತ ಎಚ್ಚರಿಕೆ ಸೂಚಿಸುವ ಟೇಪ್ ಕಟ್ಟಿ ಜಾಗೃತಿ ಮೂಡಿಸಿದ್ದಾರೆ.
ಅಲ್ಲದೆ, ಸೋಂಕಿತರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ್ದಾರೆ. ಮನೆಯಲ್ಲಿಯೇ ಇದ್ದು, ಆರೋಗ್ಯದ ಬಗ್ಗೆ ನಿಗಾ ಇಡುವಂತೆ ಸೂಚಿಸಿದ್ದಾರೆ.
ಇದೇ ವೇಳೆ, ಇಡೀ ಜಿಲ್ಲೆಯಾದ್ಯಂತ ಕೋವಿಡ್ ಪಾಸಿಟಿವ್ ಬಂದವರ ಮನೆಗಳನ್ನು ಸೀಲ್ ಡೌನ್ ಮಾಡಲು ಕ್ರಮ ಕೈಗೊಂಡಿದ್ದಾರೆ. ಈ ರೀತಿಯ ಕ್ರಮಗಳು ಕಳೆದ ವರ್ಷ ಕೋವಿಡ್ ಮೊದಲ ಅಲೆಯ ವೇಳೆ ಚಾಲ್ತಿಯಲ್ಲಿದ್ದು ಆನಂತರ ಹೆಚ್ಚು ಮುತುವರ್ಜಿ ವಹಿಸಿರಲಿಲ್ಲ. ಇದೀಗ ಹೋಮ್ ಐಸೋಲೇಶನಲ್ಲಿರುವ ಮಂದಿ ಹೊರಗಡೆ ಸುತ್ತಾಡುತ್ತಿದ್ದಾರೆಂದು ಸೋಂಕಿತರ ಓಡಾಟಕ್ಕೆ ಕಡಿವಾಣ ಹಾಕಲು ಈ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ.
Those tested positive for Covid-19 their homes will be entirely sealed down in order to control the spread of Virus says Udupi Dc Jagadish.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm