ಬ್ರೇಕಿಂಗ್ ನ್ಯೂಸ್
25-05-21 12:39 pm Mangalore Correspondent ಕರಾವಳಿ
ಮಂಗಳೂರು, ಮೇ 25: ಕೊರೊನಾ ಲಾಕ್ಡೌನ್ ಮತ್ತು ಚಂಡಮಾರುತದ ಪರಿಣಾಮ ಕರಾವಳಿಯಲ್ಲಿ ಈ ಬಾರಿಯೂ ಮೀನುಗಾರಿಕೆಯ ಉದ್ಯಮ ನಲುಗಿದೆ. ಮೀನುಗಾರಿಕೆ ಋತುವಿನ ಅಂತಿಮ ಘಟ್ಟದಲ್ಲಿ ಹೊಡೆತ ಬಿದ್ದಿರುವಾಗಲೇ ಇದೀಗ ಜೂನ್ ಒಂದರಿಂದ ಎರಡು ತಿಂಗಳ ಕಾಲ ಮೀನುಗಾರಿಕೆ ನಿಷೇಧ ಎದುರಾಗಿದೆ.
ಜೂನ್ 1 ರಿಂದ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧ ಇರಲಿದ್ದು ಕಡಲ ಮಕ್ಕಳು ಎಲ್ಲ ರೀತಿಯ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಮೂಲೆ ಸೇರಬೇಕಿದೆ. ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಕಡಲ ಮೀನುಗಾರಿಕಾ ನಿಯಂತ್ರಣ ಕಾಯಿದೆಯಂತೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆ/ಸಾಧನಗಳನ್ನು ಉಪಯೋಗಿಸಿ ಯಾಂತೀಕೃತ ಬೋಟ್ ಅಥವಾ ಯಾವುದೇ ಬೋಟ್ಗಳನ್ನು ಸಮುದ್ರಕ್ಕೆ ಇಳಿಸದಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.





ಜೂನ್ 1 ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ನಿಷೇಧ ಇರಲಿದ್ದು, ರಾಜ್ಯ ಸರ್ಕಾರದ ನಿಯಮ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದರೆ, ದಂಡ ಸೇರಿದಂತೆ ಒಂದು ವರ್ಷದ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕಾ ಇಲಾಖೆ ಪ್ರಕಟಣೆ ಹೊರಡಿಸಿದೆ.
ಪ್ರತಿ ವರ್ಷವೂ ಮಳೆಗಾಲದಲ್ಲಿ ಮೀನುಗಳ ಸಂತಾನ ಅಭಿವೃದ್ಧಿಯ ಸಮಯ ಎಂಬ ನೆಲೆಯಲ್ಲಿ ಎರಡು ತಿಂಗಳ ಕಾಲ ಮೀನುಗಾರಿಕೆ ನಿಷೇಧಿಸಿ ರಾಜ್ಯ ಸರಕಾರ ಆದೇಶ ಮಾಡುತ್ತದೆ. ಇದರಿಂದ ಮೀನುಗಳ ಸಂತತಿ ಹೆಚ್ಚುತ್ತದೆ ಅನ್ನುವ ನಂಬಿಕೆಯೂ ಇದೆ.
The Karnataka government has announced the 61-day annual deep-sea fishing ban from June 1 to July 31.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm