ಬ್ರೇಕಿಂಗ್ ನ್ಯೂಸ್
26-05-21 01:25 pm Mangalore Correspondent ಕರಾವಳಿ
ಮಂಗಳೂರು, ಮೇ 26 : ದೇಶದಲ್ಲಿ ಅತ್ಯಂತ ಹೆಚ್ಚು ಜನರು ಓಡಾಡುವ 50 ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ಪಡೆದಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಾಕ್ಡೌನ್ ವರ್ಷದಲ್ಲಿ ತೀವ್ರ ಪರಿಣಾಮ ಎದುರಾಗಿದ್ದು ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಇದರ ಜೊತೆಗೆ 2020- 21ನೇ ಸಾಲಿನಲ್ಲಿ ರ್ಯಾಂಕಿಂಗ್ ಕೂಡ 31ನೇ ಸ್ಥಾನಕ್ಕೆ ಕುಸಿದಿದೆ.
2019-20ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣ ಸೇರಿ ಒಟ್ಟಾರೆ 18,76,294 ಮಂದಿ ಪ್ರಯಾಣಿಸಿದ್ದರು. 2020- 21ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.67.2ರಷ್ಟು ಕುಸಿತ ಕಂಡಿದ್ದು, ಕೇವಲ 6,14,845 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಒಟ್ಟು ಪ್ರಯಾಣಿಕರ ನಿರ್ವಹಣೆಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ನಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣ ಈಗ ಎರಡು ಸ್ಥಾನಕ್ಕೆ ಕುಸಿದು 31ನೇ ಸ್ಥಾನಕ್ಕೆ ಇಳಿದಿದೆ.


2020-21ನೇ ಸಾಲಿನಲ್ಲಿ 1,52,434 ಅಂತಾರಾಷ್ಟ್ರೀಯ ಪ್ರಯಾಣಿಕರು ಸಂಚರಿಸಿದ್ದು, ಶೇ.73.3ರಷ್ಟು ಕುಸಿತ ಕಂಡಿದೆ. 2019-20ರಲ್ಲಿ ಒಟ್ಟು 5,71,226 ಪ್ರಯಾಣಿಕರ ನಿರ್ವಹಣೆಯಾಗಿತ್ತು. ಇದೇ ಅವಧಿಯಲ್ಲಿ 4,62,411 ದೇಶೀಯ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದು , ಶೇ.75.9ರಷ್ಟು ಕುಸಿತ ದಾಖಲಾಗಿದೆ. 2019- 20ರಲ್ಲಿ ಒಟ್ಟು 13,05,068 ಪ್ರಯಾಣಿಕರ ನಿರ್ವಹಣೆಯಾಗಿತ್ತು.
ಲಾಕ್ಡೌನ್ ಕಾರಣದಿಂದ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಕುಸಿತವಾಗಿದ್ದು ಇದರಿಂದ ಶ್ರೇಯಾಂಕವೂ ಕುಸಿತವಾಗಿದೆ.
The international airport here, which had been allotted 29th rank in the year 2019-20, has slipped to No. 31 in the year 2020-21 in the ranking list of 50 top airports with the highest passenger traffic in India due to the lockdown effect.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm