ಬ್ರೇಕಿಂಗ್ ನ್ಯೂಸ್
26-05-21 01:25 pm Mangalore Correspondent ಕರಾವಳಿ
ಮಂಗಳೂರು, ಮೇ 26 : ದೇಶದಲ್ಲಿ ಅತ್ಯಂತ ಹೆಚ್ಚು ಜನರು ಓಡಾಡುವ 50 ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ಪಡೆದಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲಾಕ್ಡೌನ್ ವರ್ಷದಲ್ಲಿ ತೀವ್ರ ಪರಿಣಾಮ ಎದುರಾಗಿದ್ದು ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಇದರ ಜೊತೆಗೆ 2020- 21ನೇ ಸಾಲಿನಲ್ಲಿ ರ್ಯಾಂಕಿಂಗ್ ಕೂಡ 31ನೇ ಸ್ಥಾನಕ್ಕೆ ಕುಸಿದಿದೆ.
2019-20ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣ ಸೇರಿ ಒಟ್ಟಾರೆ 18,76,294 ಮಂದಿ ಪ್ರಯಾಣಿಸಿದ್ದರು. 2020- 21ನೇ ಸಾಲಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.67.2ರಷ್ಟು ಕುಸಿತ ಕಂಡಿದ್ದು, ಕೇವಲ 6,14,845 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಒಟ್ಟು ಪ್ರಯಾಣಿಕರ ನಿರ್ವಹಣೆಯಲ್ಲಿ 2019-20ರಲ್ಲಿ 29ನೇ ರ್ಯಾಂಕ್ ನಲ್ಲಿದ್ದ ಮಂಗಳೂರು ವಿಮಾನ ನಿಲ್ದಾಣ ಈಗ ಎರಡು ಸ್ಥಾನಕ್ಕೆ ಕುಸಿದು 31ನೇ ಸ್ಥಾನಕ್ಕೆ ಇಳಿದಿದೆ.
2020-21ನೇ ಸಾಲಿನಲ್ಲಿ 1,52,434 ಅಂತಾರಾಷ್ಟ್ರೀಯ ಪ್ರಯಾಣಿಕರು ಸಂಚರಿಸಿದ್ದು, ಶೇ.73.3ರಷ್ಟು ಕುಸಿತ ಕಂಡಿದೆ. 2019-20ರಲ್ಲಿ ಒಟ್ಟು 5,71,226 ಪ್ರಯಾಣಿಕರ ನಿರ್ವಹಣೆಯಾಗಿತ್ತು. ಇದೇ ಅವಧಿಯಲ್ಲಿ 4,62,411 ದೇಶೀಯ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದು , ಶೇ.75.9ರಷ್ಟು ಕುಸಿತ ದಾಖಲಾಗಿದೆ. 2019- 20ರಲ್ಲಿ ಒಟ್ಟು 13,05,068 ಪ್ರಯಾಣಿಕರ ನಿರ್ವಹಣೆಯಾಗಿತ್ತು.
ಲಾಕ್ಡೌನ್ ಕಾರಣದಿಂದ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಕುಸಿತವಾಗಿದ್ದು ಇದರಿಂದ ಶ್ರೇಯಾಂಕವೂ ಕುಸಿತವಾಗಿದೆ.
The international airport here, which had been allotted 29th rank in the year 2019-20, has slipped to No. 31 in the year 2020-21 in the ranking list of 50 top airports with the highest passenger traffic in India due to the lockdown effect.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
06-06-25 09:29 pm
Mangalore Correspondent
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm