ಬ್ರೇಕಿಂಗ್ ನ್ಯೂಸ್
26-05-21 08:42 pm Mangaluru Correspondent ಕರಾವಳಿ
ಮುಲ್ಕಿ, ಮೇ 26: ಇಸ್ರೇಲ್ ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಬೇಕರಿ ಮಾಲಕನ ಮೇಲೆ ಕಿಡಿಗೇಡಿ ಯುವಕರು ಹಲ್ಲೆಗೈದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧಿಸಿ ಮುಲ್ಕಿ ಪೊಲೀಸರು ಐದು ಮಂದಿ ಯುವಕರನ್ನು ಬಂಧಿಸಿದ್ದಾರೆ.
ಕುಂದಾಪುರ ಮೂಲದ ಯುವಕನೊಬ್ಬ ಮುಲ್ಕಿಯಲ್ಲಿ ಬೇಕರಿ ನಡೆಸುತ್ತಿದ್ದು, ಇಸ್ರೇಲ್ – ಪ್ಯಾಲೆಸ್ತೀನ್ ಸಂಘರ್ಷದ ವಿಚಾರದಲ್ಲಿ ಇತ್ತೀಚೆಗೆ ಇಸ್ರೇಲನ್ನು ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದ. ಇದನ್ನು ತಿಳಿದ ಕೆಲವು ಕಿಡಿಗೇಡಿ ಯುವಕರು ಬೇಕರಿಗೆ ಬಂದು ಯುವಕನಿಗ ಹಲ್ಲೆಗೈದಿದ್ದಲ್ಲದೆ, ತನ್ನದು ತಪ್ಪಾಯ್ತೆಂದು ಕ್ಷಮೆ ಕೇಳುವಂತೆ ಹೇಳಿ ವಿಡಿಯೋ ಮಾಡಿದ್ದಾರೆ. ಅಲ್ಲದೆ, ಇನ್ನು ಈ ರೀತಿ ಪೋಸ್ಟ್ ಮಾಡಿದರೆ ಜೀವ ತೆಗೆಯುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.
ಈ ರೀತಿಯ ಘಟನೆ ನಡೆದಿರುವುದು ಬಳಿಕ ಹಿಂದು ಸಂಘಟನೆಗಳ ಕಾರ್ಯಕರ್ತರಿಗೆ ತಿಳಿದು ಬೇಕರಿಗೆ ಬಂದು ಸಮಾಧಾನ ಹೇಳಿದ್ದಾರೆ. ಅಲ್ಲದೆ, ಮುಲ್ಕಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಪಣಂಬೂರು ಎಸಿಪಿ ಕಚೇರಿಗೆ ಒಯ್ದು ವಿಚಾರಣೆ ನಡೆಸಿದ್ದಾರೆ. ಆನಂತರ ಆರೋಪಿಗಳಲ್ಲಿ ಮುಚ್ಚಳಿಕೆ ಬರೆಯಿಸಿ, ಜಾಮೀನು ನೀಡಿ ಕಳುಹಿಸಿದ್ದಾರೆ.
ವಿಷಯ ತಿಳಿದ ಮೂಲ್ಕಿ- ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹಿಂದು ಸಂಘಟನೆಗಳ ನಾಯಕರ ಜೊತೆ ಬೇಕರಿಗೆ ಭೇಟಿ ನೀಡಿದ್ದು ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮುಲ್ಕಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
The police personnel of Mulky station have arrested five young men who have been accused of vandalizing a bakery and beating up the bakery owner allegedly angered by the fact that the victim had supported Israel in his Facebook post.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm