ಬ್ರೇಕಿಂಗ್ ನ್ಯೂಸ್
27-05-21 03:47 pm Mangalore Correspondent ಕರಾವಳಿ
ಮಂಗಳೂರು, ಮೇ 27: ಅರಬ್ಬೀ ಸಮುದ್ರ ಮಧ್ಯೆ ಇಂಜಿನ್ ಕೆಟ್ಟು ಅಪಾಯಕ್ಕೀಡಾಗಿದ್ದ ತಮಿಳುನಾಡು ಮೂಲದ ಹತ್ತು ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ.
ಮಂಗಳೂರು ಬಂದರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಇಂಜಿನ್ ಕೆಟ್ಟು ಹೋಗಿ, ಬೋಟ್ ಅಪಾಯಕ್ಕೀಡಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಇಂಡಿಯನ್ ಕೋಸ್ಟ್ ಗಾರ್ಡ್ ಪಡೆಯು ಐಸಿಜಿಎಸ್ ರಾಜದೂತ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಮೀನುಗಾರರನ್ನು ಮಂಗಳೂರಿನ ಹಳೆ ಬಂದರಿಗೆ ಕರೆತಂದಿದೆ.





ತಮಿಳುನಾಡು ಮೂಲದ ಲಾರ್ಡ್ ಆಫ್ ಓಶಿಯನ್ ಹೆಸರಿನ ಬೋಟ್ ಆಳಸಮುದ್ರ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಇತ್ತೀಚೆಗೆ ತೌಕ್ತೆ ಚಂಡಮಾರುತ ಎದುರಾಗಿತ್ತು. ಚಂಡಮಾರುತದಿಂದ ತಪ್ಪಿಸಿಕೊಳ್ಳಲು ಬೋಟ್ ಮೇ 14ರಂದು ಗುಜರಾತ್ ಕರಾವಳಿಯ ಪೋರ್ ಬಂದರಿಗೆ ತೆರಳಿತ್ತು. ಮೇ 19ರ ವರೆಗೂ ಪೋರ್ ಬಂದರಿನಲ್ಲಿದ್ದ ಬೋಟ್ ಬಳಿಕ ಸಮುದ್ರ ಮೂಲಕ ಮತ್ತೆ ತಮಿಳುನಾಡಿನತ್ತ ಪಯಣ ಬೆಳೆಸಿತ್ತು.
ಈ ವೇಳೆ, ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದ ಸಮುದ್ರದಲ್ಲಿ ಸಾಗುತ್ತಿದ್ದಾಗ ಬೋಟಿನ ಇಂಜಿನ್ ಕೆಟ್ಟು ಹೋಗಿದ್ದು ಕೋಸ್ಟ್ ಗಾರ್ಡ್ ಪಡೆಗೆ ಮಾಹಿತಿ ನೀಡಲಾಗಿತ್ತು. ಇಂಜಿನ್ ಚಾಲೂ ಆಗದ್ದರಿಂದ ಬೋಟನ್ನು ತಕ್ಷಣಕ್ಕೆ ರಿಪೇರಿ ಮಾಡುವುದಕ್ಕಾಗಿ ಕೋಸ್ಟ್ ಗಾರ್ಡ್ ಪಡೆಯವರು ಮಂಗಳೂರಿನ ಹಳೆ ಬಂದರಿನ ಅಲ್ ಬದ್ರಿಯಾ ಸಂಸ್ಥೆಗೆ ತಿಳಿಸಿದ್ದರು. ಬಳಿಕ ಐಸಿಜಿಎಸ್ ರಾಜದೂತ್ ಮತ್ತು ಅಲ್ ಬದ್ರಿಯಾ ಸಂಸ್ಥೆಯ ಸಿಬಂದಿ ಸೇರಿ ಇಂಜಿನ್ ಕೆಟ್ಟಿದ್ದ ಬೋಟನ್ನು ಮಂಗಳೂರಿನ ಹಳೆ ಬಂದರಿಗೆ ಎಳೆದು ತಂದಿದ್ದಾರೆ. ಅದರಲ್ಲಿದ್ದ ಹತ್ತು ಮಂದಿ ಮೀನುಗಾರರನ್ನು ರಕ್ಷಣೆ ಮಾಡಿ, ತಾತ್ಕಾಲಿಕ ಆಶ್ರಯ ನೀಡಲಾಗಿದೆ.
Video:
The Indian Coast Gaurd, Mangalore has rescued 10 Tamilnadu Fishermen Stranded in the Arabian Sea 20 Nautical Miles off the coast of New Mangalore in DK.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm