ಬ್ರೇಕಿಂಗ್ ನ್ಯೂಸ್
27-05-21 03:47 pm Mangalore Correspondent ಕರಾವಳಿ
ಮಂಗಳೂರು, ಮೇ 27: ಅರಬ್ಬೀ ಸಮುದ್ರ ಮಧ್ಯೆ ಇಂಜಿನ್ ಕೆಟ್ಟು ಅಪಾಯಕ್ಕೀಡಾಗಿದ್ದ ತಮಿಳುನಾಡು ಮೂಲದ ಹತ್ತು ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ.
ಮಂಗಳೂರು ಬಂದರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಇಂಜಿನ್ ಕೆಟ್ಟು ಹೋಗಿ, ಬೋಟ್ ಅಪಾಯಕ್ಕೀಡಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಇಂಡಿಯನ್ ಕೋಸ್ಟ್ ಗಾರ್ಡ್ ಪಡೆಯು ಐಸಿಜಿಎಸ್ ರಾಜದೂತ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಮೀನುಗಾರರನ್ನು ಮಂಗಳೂರಿನ ಹಳೆ ಬಂದರಿಗೆ ಕರೆತಂದಿದೆ.





ತಮಿಳುನಾಡು ಮೂಲದ ಲಾರ್ಡ್ ಆಫ್ ಓಶಿಯನ್ ಹೆಸರಿನ ಬೋಟ್ ಆಳಸಮುದ್ರ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಇತ್ತೀಚೆಗೆ ತೌಕ್ತೆ ಚಂಡಮಾರುತ ಎದುರಾಗಿತ್ತು. ಚಂಡಮಾರುತದಿಂದ ತಪ್ಪಿಸಿಕೊಳ್ಳಲು ಬೋಟ್ ಮೇ 14ರಂದು ಗುಜರಾತ್ ಕರಾವಳಿಯ ಪೋರ್ ಬಂದರಿಗೆ ತೆರಳಿತ್ತು. ಮೇ 19ರ ವರೆಗೂ ಪೋರ್ ಬಂದರಿನಲ್ಲಿದ್ದ ಬೋಟ್ ಬಳಿಕ ಸಮುದ್ರ ಮೂಲಕ ಮತ್ತೆ ತಮಿಳುನಾಡಿನತ್ತ ಪಯಣ ಬೆಳೆಸಿತ್ತು.
ಈ ವೇಳೆ, ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದ ಸಮುದ್ರದಲ್ಲಿ ಸಾಗುತ್ತಿದ್ದಾಗ ಬೋಟಿನ ಇಂಜಿನ್ ಕೆಟ್ಟು ಹೋಗಿದ್ದು ಕೋಸ್ಟ್ ಗಾರ್ಡ್ ಪಡೆಗೆ ಮಾಹಿತಿ ನೀಡಲಾಗಿತ್ತು. ಇಂಜಿನ್ ಚಾಲೂ ಆಗದ್ದರಿಂದ ಬೋಟನ್ನು ತಕ್ಷಣಕ್ಕೆ ರಿಪೇರಿ ಮಾಡುವುದಕ್ಕಾಗಿ ಕೋಸ್ಟ್ ಗಾರ್ಡ್ ಪಡೆಯವರು ಮಂಗಳೂರಿನ ಹಳೆ ಬಂದರಿನ ಅಲ್ ಬದ್ರಿಯಾ ಸಂಸ್ಥೆಗೆ ತಿಳಿಸಿದ್ದರು. ಬಳಿಕ ಐಸಿಜಿಎಸ್ ರಾಜದೂತ್ ಮತ್ತು ಅಲ್ ಬದ್ರಿಯಾ ಸಂಸ್ಥೆಯ ಸಿಬಂದಿ ಸೇರಿ ಇಂಜಿನ್ ಕೆಟ್ಟಿದ್ದ ಬೋಟನ್ನು ಮಂಗಳೂರಿನ ಹಳೆ ಬಂದರಿಗೆ ಎಳೆದು ತಂದಿದ್ದಾರೆ. ಅದರಲ್ಲಿದ್ದ ಹತ್ತು ಮಂದಿ ಮೀನುಗಾರರನ್ನು ರಕ್ಷಣೆ ಮಾಡಿ, ತಾತ್ಕಾಲಿಕ ಆಶ್ರಯ ನೀಡಲಾಗಿದೆ.
Video:
The Indian Coast Gaurd, Mangalore has rescued 10 Tamilnadu Fishermen Stranded in the Arabian Sea 20 Nautical Miles off the coast of New Mangalore in DK.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm