ಬ್ರೇಕಿಂಗ್ ನ್ಯೂಸ್
27-05-21 03:47 pm Mangalore Correspondent ಕರಾವಳಿ
ಮಂಗಳೂರು, ಮೇ 27: ಅರಬ್ಬೀ ಸಮುದ್ರ ಮಧ್ಯೆ ಇಂಜಿನ್ ಕೆಟ್ಟು ಅಪಾಯಕ್ಕೀಡಾಗಿದ್ದ ತಮಿಳುನಾಡು ಮೂಲದ ಹತ್ತು ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ.
ಮಂಗಳೂರು ಬಂದರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಇಂಜಿನ್ ಕೆಟ್ಟು ಹೋಗಿ, ಬೋಟ್ ಅಪಾಯಕ್ಕೀಡಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಇಂಡಿಯನ್ ಕೋಸ್ಟ್ ಗಾರ್ಡ್ ಪಡೆಯು ಐಸಿಜಿಎಸ್ ರಾಜದೂತ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಮೀನುಗಾರರನ್ನು ಮಂಗಳೂರಿನ ಹಳೆ ಬಂದರಿಗೆ ಕರೆತಂದಿದೆ.





ತಮಿಳುನಾಡು ಮೂಲದ ಲಾರ್ಡ್ ಆಫ್ ಓಶಿಯನ್ ಹೆಸರಿನ ಬೋಟ್ ಆಳಸಮುದ್ರ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಇತ್ತೀಚೆಗೆ ತೌಕ್ತೆ ಚಂಡಮಾರುತ ಎದುರಾಗಿತ್ತು. ಚಂಡಮಾರುತದಿಂದ ತಪ್ಪಿಸಿಕೊಳ್ಳಲು ಬೋಟ್ ಮೇ 14ರಂದು ಗುಜರಾತ್ ಕರಾವಳಿಯ ಪೋರ್ ಬಂದರಿಗೆ ತೆರಳಿತ್ತು. ಮೇ 19ರ ವರೆಗೂ ಪೋರ್ ಬಂದರಿನಲ್ಲಿದ್ದ ಬೋಟ್ ಬಳಿಕ ಸಮುದ್ರ ಮೂಲಕ ಮತ್ತೆ ತಮಿಳುನಾಡಿನತ್ತ ಪಯಣ ಬೆಳೆಸಿತ್ತು.
ಈ ವೇಳೆ, ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದ ಸಮುದ್ರದಲ್ಲಿ ಸಾಗುತ್ತಿದ್ದಾಗ ಬೋಟಿನ ಇಂಜಿನ್ ಕೆಟ್ಟು ಹೋಗಿದ್ದು ಕೋಸ್ಟ್ ಗಾರ್ಡ್ ಪಡೆಗೆ ಮಾಹಿತಿ ನೀಡಲಾಗಿತ್ತು. ಇಂಜಿನ್ ಚಾಲೂ ಆಗದ್ದರಿಂದ ಬೋಟನ್ನು ತಕ್ಷಣಕ್ಕೆ ರಿಪೇರಿ ಮಾಡುವುದಕ್ಕಾಗಿ ಕೋಸ್ಟ್ ಗಾರ್ಡ್ ಪಡೆಯವರು ಮಂಗಳೂರಿನ ಹಳೆ ಬಂದರಿನ ಅಲ್ ಬದ್ರಿಯಾ ಸಂಸ್ಥೆಗೆ ತಿಳಿಸಿದ್ದರು. ಬಳಿಕ ಐಸಿಜಿಎಸ್ ರಾಜದೂತ್ ಮತ್ತು ಅಲ್ ಬದ್ರಿಯಾ ಸಂಸ್ಥೆಯ ಸಿಬಂದಿ ಸೇರಿ ಇಂಜಿನ್ ಕೆಟ್ಟಿದ್ದ ಬೋಟನ್ನು ಮಂಗಳೂರಿನ ಹಳೆ ಬಂದರಿಗೆ ಎಳೆದು ತಂದಿದ್ದಾರೆ. ಅದರಲ್ಲಿದ್ದ ಹತ್ತು ಮಂದಿ ಮೀನುಗಾರರನ್ನು ರಕ್ಷಣೆ ಮಾಡಿ, ತಾತ್ಕಾಲಿಕ ಆಶ್ರಯ ನೀಡಲಾಗಿದೆ.
Video:
The Indian Coast Gaurd, Mangalore has rescued 10 Tamilnadu Fishermen Stranded in the Arabian Sea 20 Nautical Miles off the coast of New Mangalore in DK.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm