ಬ್ರೇಕಿಂಗ್ ನ್ಯೂಸ್
27-05-21 06:45 pm Mangalore Correspondent ಕರಾವಳಿ
ಮಂಗಳೂರು, ಮೇ 27: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಆಹಾರ ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ಮತ್ತು ಅಧಿಕಾರಿಗಳ ಜೊತೆ ವಿಧಾನಸೌಧ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಭತ್ತದ ತಳಿಗಳಾದ MO 4, ಜಯ, ಅಭಿಲಾಷ, ಭದ್ರಾ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಸುದೀರ್ಘ ಚರ್ಚೆ ನಡೆಸಲಾಗಿದ್ದು ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ತಾವನೆ ಸಲ್ಲಿಸಲು ನಿರ್ಣಯ ಕೈಗೊಂಡಿತು.

ಅವಳಿ ಜಿಲ್ಲೆಗಳ ಕೆಂಪು ಕುಚ್ಚಲಕ್ಕಿ ಬೇಡಿಕೆಯನ್ನು ಪೂರೈಸಲು ಸುಮಾರು 20 ಲಕ್ಷ ಕ್ವಿಂಟಾಲ್ ಭತ್ತದ ಪೂರೈಕೆ ಆಗಬೇಕಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹೊರತಾಗಿಯೂ ಮಂಡ್ಯ, ಮೈಸೂರು, ರಾಮನಗರ, ಬೆಳಗಾವಿ ಜಿಲ್ಲೆಗಳಿಂದ ಭತ್ತ ಖರೀದಿಸಲು ಸಭೆಯಲ್ಲಿ ಚರ್ಚೆ ನಡೆಯಿತು.
ಕೇಂದ್ರದ ಅನುಮತಿ ಪಡೆದು ನವೆಂಬರ್ ತಿಂಗಳಿಂದ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಉತ್ಪಾದಿಸಿ ಪಡಿತರದ ಮೂಲಕ ಜನಸಾಮಾನ್ಯರಿಗೆ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ಪಾದನೆಯಾದ ಭತ್ತದ ಪ್ರಮಾಣ ಕಡಿಮೆಯಾದಲ್ಲಿ, ಇತರ ಜಿಲ್ಲೆಗಳಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಕರ್ನಾಟಕ ಆಹಾರ ಮತ್ತು ನಾಗರೀಕ ಪೂರೈಕೆ ಸರಬರಾಜು ನಿಗಮ ನಿಯಮಿತದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು.
ಸಭೆಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಚಿವರ ಆಪ್ತ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
Minister of Food, Civil Supplies and Consumer Affairs Department of Karnataka Umesh Katti, District in-charge minister Kota Srinivas Poojary on Thursday, May 27 said that the district administration is likely to provide boiled rice (red) under the Public Distribution System (PDC) in Dakshina Kannada from November.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm