ಬ್ರೇಕಿಂಗ್ ನ್ಯೂಸ್
27-05-21 06:45 pm Mangalore Correspondent ಕರಾವಳಿ
ಮಂಗಳೂರು, ಮೇ 27: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಆಹಾರ ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ಮತ್ತು ಅಧಿಕಾರಿಗಳ ಜೊತೆ ವಿಧಾನಸೌಧ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಭತ್ತದ ತಳಿಗಳಾದ MO 4, ಜಯ, ಅಭಿಲಾಷ, ಭದ್ರಾ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಸುದೀರ್ಘ ಚರ್ಚೆ ನಡೆಸಲಾಗಿದ್ದು ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ತಾವನೆ ಸಲ್ಲಿಸಲು ನಿರ್ಣಯ ಕೈಗೊಂಡಿತು.
ಅವಳಿ ಜಿಲ್ಲೆಗಳ ಕೆಂಪು ಕುಚ್ಚಲಕ್ಕಿ ಬೇಡಿಕೆಯನ್ನು ಪೂರೈಸಲು ಸುಮಾರು 20 ಲಕ್ಷ ಕ್ವಿಂಟಾಲ್ ಭತ್ತದ ಪೂರೈಕೆ ಆಗಬೇಕಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹೊರತಾಗಿಯೂ ಮಂಡ್ಯ, ಮೈಸೂರು, ರಾಮನಗರ, ಬೆಳಗಾವಿ ಜಿಲ್ಲೆಗಳಿಂದ ಭತ್ತ ಖರೀದಿಸಲು ಸಭೆಯಲ್ಲಿ ಚರ್ಚೆ ನಡೆಯಿತು.
ಕೇಂದ್ರದ ಅನುಮತಿ ಪಡೆದು ನವೆಂಬರ್ ತಿಂಗಳಿಂದ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಉತ್ಪಾದಿಸಿ ಪಡಿತರದ ಮೂಲಕ ಜನಸಾಮಾನ್ಯರಿಗೆ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ಪಾದನೆಯಾದ ಭತ್ತದ ಪ್ರಮಾಣ ಕಡಿಮೆಯಾದಲ್ಲಿ, ಇತರ ಜಿಲ್ಲೆಗಳಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಕರ್ನಾಟಕ ಆಹಾರ ಮತ್ತು ನಾಗರೀಕ ಪೂರೈಕೆ ಸರಬರಾಜು ನಿಗಮ ನಿಯಮಿತದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು.
ಸಭೆಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಚಿವರ ಆಪ್ತ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
Minister of Food, Civil Supplies and Consumer Affairs Department of Karnataka Umesh Katti, District in-charge minister Kota Srinivas Poojary on Thursday, May 27 said that the district administration is likely to provide boiled rice (red) under the Public Distribution System (PDC) in Dakshina Kannada from November.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
06-06-25 09:29 pm
Mangalore Correspondent
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm