ಬ್ರೇಕಿಂಗ್ ನ್ಯೂಸ್
27-05-21 09:32 pm Mangaluru Correspondent ಕರಾವಳಿ
ಕುಂದಾಪುರ, ಮೇ 27: ಎಂಬಿಬಿಎಸ್ ಕಲಿತು ಪಿಜಿ- ನೀಟ್ ಎಕ್ಸಾಂ ಬರೆಯಲು ರೆಡಿಯಾಗುತ್ತಿದ್ದವರು ಅತ್ತ ಪರೀಕ್ಷೆ ಮುಂದೂಡಿಕೆ ಆಗುತ್ತಲೇ ಮತ್ತೆ ನಿರಾಸೆಯಾಗಿದ್ದಾರೆ. ಆದರೆ, ಕುಂದಾಪುರದಲ್ಲಿ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದವರು ತಮ್ಮ ಖಾಲಿ ಅವಧಿಯನ್ನು ಆಸ್ಪತ್ರೆಯಲ್ಲಿ ಕಳೆಯಲು ನಿರ್ಧರಿಸಿದ್ದಾರೆ. ಕೋವಿಡ್ ರೋಗಿಗಳು ಕಷ್ಟಪಡುತ್ತಿರುವ ಸಂದರ್ಭದಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಕೈಲಾದ ಸೇವೆ ನೀಡಲು ಮುಂದಾಗಿದ್ದಾರೆ.
ಮುಂಬೈನಲ್ಲಿ ಎಂಬಿಬಿಎಸ್ ಮುಗಿಸಿದ್ದ ಡಾ.ರಚನಾ ಶೆಟ್ಟಿ ಸ್ನಾತಕೋತ್ತರ ಪದವಿಗಾಗಿ ನೀಟ್ ಎಕ್ಸಾಂ ಬರೆಯಲು ರೆಡಿ ಮಾಡಿಕೊಂಡಿದ್ದರು. ಮುಂಬೈನಲ್ಲಿ ಹೊಟೇಲ್ ಉದ್ಯಮಿಯಾಗಿದ್ದ ಅವರ ತಂದೆ ಸುರೇಶ್ ಶೆಟ್ಟಿ ಕಳೆದ ಪೆಬ್ರವರಿಯಲ್ಲಿ ನಿಧನರಾದ ಹಿನ್ನೆಲೆ ರಚನಾ ಊರಿಗೆ ಮರಳಿದ್ದರು. ಊರಲ್ಲೇ ಇದ್ದುಕೊಂಡು ಮುಂದಿನ ಪರೀಕ್ಷೆಗಾಗಿ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಈ ವೇಳೆ ತಾಯಿ ಮಾತ್ರ, ಮಗಳಲ್ಲಿ ನೀನು ಇಲ್ಲೇ ಇರು ಎಂದು ಒತ್ತಾಯಿಸುತ್ತಿದ್ದರು.

ನಮ್ಮ ಕುಟುಂಬವೂ ತಂದೆಯ ಸಾವಿನಿಂದಾಗಿ ಚಿಂತೆಯಲ್ಲಿತ್ತು. ಹೀಗಾಗಿ ಸ್ಥಳೀಯ ಆಸ್ಪತ್ರೆ ಒಂದರಲ್ಲಿ ಹುದ್ದೆ ಖಾಲಿ ಇರುವುದನ್ನು ತಿಳಿದು ಅಪ್ಲೈ ಮಾಡಿದ್ದೆ. ಕೋವಿಡ್ ಸೋಂಕಿತರು ಒಂದೇ ಸಮನೆ ಹೆಚ್ಚುತ್ತಿರುವುದರಿಂದ ವರ್ಕ್ ಲೋಡ್ ಕೂಡ ಜಾಸ್ತಿಯಾಯ್ತು. ಆದರೂ ವರ್ಕ್ ಮತ್ತು ಸ್ಟಡಿಯನ್ನೂ ಒಟ್ಟಿಗೇ ಮಾಡುತ್ತಿದ್ದೇನೆ ಎಂದು ಹೇಳಿದರು.
ಕುಂದಾಪುರ ಮೂಲದವರೇ ಆಗಿರುವ ಡಾ.ರಜತ್ ಶೆಟ್ಟಿ ಮತ್ತು ಸೋದರ ಡಾ.ಆಶಿತ್ ಶೆಟ್ಟಿ ಕೂಡ ಎಂಬಿಬಿಎಸ್ ಮುಗಿಸಿ ನೀಟ್ ಎಕ್ಸಾಂ ಬರೆಯಲು ರೆಡಿಯಾಗಿದ್ದರು. ಕಳೆದ ವರ್ಷವೂ ಅವರು ಊರಿಗೆ ಬಂದಿದ್ದ ವೇಳೆ ಕೊರೊನಾ ಸೋಂಕು ಆವರಿಸಿದ್ದರಿಂದ ತಾಲೂಕು ಆಸ್ಪತ್ರೆಯಲ್ಲಿ ಸೇವೆಯಲ್ಲಿ ತೊಡಗಿದ್ದರು. ಈ ಬಾರಿಯೂ ಕೊರೊನಾ ಎರಡನೇ ಅಲೆ ಆವರಿಸಿದ್ದು ವೈದ್ಯ ಸೋದರರಿಬ್ಬರು ಮತ್ತೆ ಅದೇ ಆಸ್ಪತ್ರೆಯಲ್ಲಿ ರೋಗಿಗಳ ಸೇವೆಯಲ್ಲಿ ನಿರತರಾಗಿದ್ದಾರೆ.

ಕೊರೊನಾ ಎರಡನೇ ಅಲೆ ತುಂಬ ಸೀರಿಯಸ್ ಆಗಿದ್ದರೂ ವಿಭಿನ್ನ ಅನುಭವಗಳಿಗೆ ಸಾಕ್ಷಿಯಾಗುತ್ತಿದ್ದೇವೆ. ಪ್ರಾಕ್ಟೀಸ್ ಮಾಡುತ್ತಾ ಪರೀಕ್ಷೆಗೆ ಸಿದ್ಧತೆ ನಡೆಸುವುದು ಕಷ್ಟ. ಆದರೆ, ಎಕ್ಸಾಂ ಯಾವಾಗ ಆಗುತ್ತೆ ಅನ್ನೋದು ಸ್ಪಷ್ಟವಾಗಿಲ್ಲ. ನಾವು ಈ ವರ್ಷವೇ ಬರೆಯಬೇಕು ಎಂದುಕೊಂಡಿದ್ದೆವು. ಮುಂದಿನ ವರ್ಷಕ್ಕೆ ಮತ್ತೆ ಸಿಲೆಬಸ್ ಬದಲಾಗಲೂಬಹುದು ಎಂದು ಹೇಳಿದ್ರು ಡಾ. ರಜತ್ ಶೆಟ್ಟಿ.
ಆಸ್ಪತ್ರೆಯಲ್ಲಿ ಕೆಲಸದಲ್ಲಿ ತೊಡಗಿದ್ದ ಡಾ.ನಮೃತಾ ಕೂಡ ಇಂಥದ್ದೇ ಅಭಿಪ್ರಾಯ ಪಟ್ಟರು. ಕೆಲವೊಮ್ಮೆ ದಿನದ ಸೇವೆ ಮುಗಿಸುವಷ್ಟರಲ್ಲಿ ತುಂಬಾನೇ ದಣಿದು ಬಿಡುತ್ತೇವೆ. ಆದರೆ, ದುರಂತದ ಸಂದರ್ಭದಲ್ಲಿ ಸಮಾಜಕ್ಕಾಗಿ ಸೇವೆ ಮಾಡುತ್ತಿದ್ದೇವೆ ಎಂಬ ಸಂತಸ ನಮಗಿದೆ ಎಂದು ಹೇಳುತ್ತಾರೆ. ಈ ರೀತಿ ಕೆಲಸದಲ್ಲಿ ತೊಡಗಿರುವುದು ನಮಗೆ ವಿಶೇಷ ಅನುಭವಗಳನ್ನು ನೀಡುತ್ತಿದೆ. ಇದರಿಂದ ನಾವು ಬಹಳಷ್ಟು ಕಲಿಯಲು ಸಾಧ್ಯವಾಗುತ್ತಿದೆ ಎಂದರು ಡಾ.ನಿವೇದಿತಾ. ಎಲ್ಲ ಸಿಬಂದಿ, ಹಿರಿಯ ವೈದ್ಯರು, ನೋಡಲ್ ಅಧಿಕಾರಿಗಳು ತಮ್ಮ ಕರ್ತವ್ಯದ ಮಧ್ಯೆಯೂ ಗೈಡ್ ಮಾಡುತ್ತಾರೆ ಎಂದರು.
ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಈ ಬಾರಿ ಕೊರೊನಾ ಎರಡನೇ ಅಲೆಗೆ ಸುಮಾರು 700 ಮಂದಿ ಸೋಂಕಿತರು ಅಡ್ಮಿಟ್ ಆಗಿದ್ದಾರೆ. 40 ಮಂದಿ ಕೋವಿಡ್ ಸೋಂಕಿತ ಮಹಿಳೆಯರು ಮೆಟರ್ನಿಟಿ ವಾರ್ಡಿಗೆ ದಾಖಲಾಗಿದ್ದು ಸುರಕ್ಷಿತವಾಗಿ ಹೆರಿಗೆ ಆಗಿದ್ದಾರೆ ಎಂದು ತಾಲೂಕು ನೋಡಲ್ ಅಧಿಕಾರಿ ಡಾ. ನಾಗೇಶ್ ಮಾಹಿತಿ ನೀಡಿದರು.
With the exam entrance postponed, a group of fresh MBBS graduates from Kundapur in Udpui district, who have been prepUdupi for the PG-NEET for almost
09-04-26 03:37 pm
HK News Staffer
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm