ಬ್ರೇಕಿಂಗ್ ನ್ಯೂಸ್
28-08-20 07:48 pm Dhruthi Anchan - Correspondant ಕರಾವಳಿ
ಮಂಗಳೂರು, ಆಗಸ್ಟ್ 28: ನಮ್ಮನ್ನಾಳುವ ಸರ್ಕಾರಗಳು ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸುವ ಬದಲು ಖಾಸಗಿ ಆಸ್ಪತ್ರೆಗಳ ಪರವಾಗಿ ಕೆಲಸ ಮಾಡುತ್ತಿದೆ ಎಂದು ಡಿ.ವೈ.ಎಫ್.ಐ ಮಾಜಿ ಅಧ್ಯಕ್ಷ ಸುನಿಲ್ ಕುಮಾರ್ ಬಜಾಲ್ರವರು ಆರೋಪಿಸಿದರು.
ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಹಾಗೂ ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಿ ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವುದರ ಜೊತೆಗೆ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಅನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ಆಗಸ್ಟ್ 28ರಂದು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಇದೇ ವೇಳೆ ಡಿ.ವೈ.ಎಫ್.ಐ ಜಿಲ್ಲಾ ಕಾರ್ಯದರ್ಶಿ ಸುನಿಲ್ ಕುಮಾರ್ ಮಾತನಾಡಿ, ಡಿ.ವೈ.ಎಫ್.ಐ ಜನರ ಬದುಕಿನ ಪ್ರಶ್ನೆಯನ್ನು ಮುಂದಿಟ್ಟು ನಿರಂತರವಾಗಿ ಹೋರಾಟವನ್ನು ನಡೆಸುತ್ತದೆ ಹಾಗೂ ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕಾನೂನುಗಳನ್ನು ರೂಪಿಸಬೇಕೆಂದು ಆಗ್ರಹಿಸಿದರು.
ಕಾರ್ಮಿಕ ಮುಖಂಡರಾದ ರಾಮಣ್ಣ ವಿಟ್ಲರವರು ಮಾತನಾಡಿ ಡಿ.ವೈ.ಎಫ್.ಐ ನ ಹೋರಾಟದ ಫಲವಾಗಿ ಇಂದು ಸಮುದಾಯ ಆರೋಗ್ಯ ಕೇಂದ್ರ ಹೊಸ ಕಟ್ಟಡದಲ್ಲಿ ರಚನೆಗೊಂಡಿದ್ದು, ಮೂಲಭೂತ ಸೌಕರ್ಯದ ಕೊರತೆ ಎದ್ದು ಕಾಣಿಸುತ್ತಿದೆ ಎಂದು ಹೇಳಿದರು.
ನ್ಯಾಯವಾದಿ ತುಳಸೀದಾಸ್ ವಿಟ್ಲ, ಮಹಮ್ಮದ್ ಇಕ್ಬಾಲ್ ಹಳೆಮನೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಡಿ.ವೈ.ಎಫ್.ಐ ವಿಟ್ಲ ವಲಯಾದ್ಯಕ್ಷ ನುಜುಮ್ ಅಳಿಕೆ ಸ್ವಾಗತಿಸಿದರು, ಪ್ರಜಾ ಪರಿವರ್ತನಾ ವೇದಿಕೆ ಇದರ ಮುಖಂಡರಾದ ಕೃಷ್ಣಪ್ಪ ಪುದ್ದೊಟ್ಟು, ಬಿ.ಟಿ.ಕುಮಾರ್, ನ್ಯಾಯವಾದಿ ಮಹಮ್ಮದ್ ಗಝಾಲಿ, ಡಿ.ವೈ.ಎಫ್.ಐ ವಿಟ್ಲ ವಲಯ ಕಾರ್ಯದರ್ಶಿ ಜಮೀಲ್, ಮುಖಂಡರಾದ ಶಹೀದ್ ಶೈನ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿಯನ್ನು ವಿಟ್ಲ ಅರೋಗ್ಯ ಅಧಿಕಾರಿಗಳ ಮುಖಾಂತರ ಸಲ್ಲಿಸಲಾಯಿತು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm